25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಧ.ಮಂ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಉಜಿರೆ : ಧರ್ಮಸ್ಥಳ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆ ಉಜಿರೆ ಇಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೂ. 5 ರಂದು ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ನಡೆಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಉಜಿರೆಯ ರತ್ನಮಾನಸ ವಿದ್ಯಾರ್ಥಿ ನಿಲಯ ಇಲ್ಲಿನ ಪಾಲಕರಾದ ಯತೀಶ್ ಕೆ ಬಳ೦ಜ ಅವರು ಮಾತನಾಡಿ ಸಾವಯವ ಕೃಷಿಯ ಮಹತ್ವ ದ ಬಗ್ಗೆ ಅರಿವು ಮೂಡಿಸಿದರು , ಅಮೃತ ಜಲ ಮತ್ತು, ಎರೆಹುಳ ಗೊಬ್ಬರ ತಯಾರಿಕೆ ಬಗ್ಗೆ ಮಾಹಿತಿ ನೀಡಿದರು ಹಾಗೂ ನೈತಿಕ ಶಿಕ್ಷಣ ಮತ್ತು ಜೀವನ ಶಿಕ್ಷಣದ ಮಹತ್ವದ ಕುರಿತು ಮನವರಿಕೆ ಮಾಡಿದರು.

ಶಾಲಾ ಮುಖ್ಯ ಶಿಕ್ಷಕರು ಬಾಲಕೃಷ್ಣ ನಾಯಕ್ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಈ ಕಾರ್ಯಕ್ರಮವು ವಿದ್ಯಾರ್ಥಿಗಳ ಕರಕುಶಲದಿಂದ ರಚಿತವಾದ ಪರಿಸರ ಸಂರಕ್ಷಣಾ ವಿಷಯದ ಕುರಿತ ಬಿತ್ತಿ ಪತ್ರವನ್ನು ಬಿಡುಗಡೆಗೊಳಿಸುವುದರ ಮೂಲಕ ಉದ್ಘಾಟನೆಗೊಂಡಿತು. ನಂತರ ಮಾತನಾಡಿ ಪರಿಸರ ಮನುಷ್ಯನಿಗೆ ಜೀವ ರಕ್ಷಕ ಕವಚದಂತೆ ಕೆಲಸ ಮಾಡುತ್ತದೆ. ತುಳಸಿಯಂತಹ ಗಿಡಗಳು ಮನುಷ್ಯನಿಗೆ ಪ್ರಾಣ ವಾಯುವನ್ನು ಒದಗಿಸುತ್ತದೆ ಹೀಗಾಗಿ ಪರಿಸರ ರಕ್ಷಣೆ ಅತ್ಯಗತ್ಯ ಎಂದರು.

ವಿದ್ಯಾರ್ಥಿನಿಯರು ಪ್ರಾರ್ಥನೆಗೆ ಗೈದರು. ಶಾಲಾ ಸಹ ಶಿಕ್ಷಕ ಕೂಸಪ್ಪಗೌಡ ಅವರು ಪರಿಸರ ದಿನಾಚರಣೆಯ ಹಿನ್ನೆಲೆ, ಅಗತ್ಯತೆ, ಆರಂಭ, ಇತ್ಯಾದಿಗಳನ್ನು ತಿಳಿಸುವುದರ ಜೊತೆಗೆ ಮಕ್ಕಳಿಗೆ ಪರಿಸರವನ್ನು ಸಂರಕ್ಷಿಸುವ ಅನಿವಾರ್ಯತೆಯ ಕುರಿತು ಮನದಟ್ಟು ಮಾಡಿದರು.

ನಂತರ ಮಕ್ಕಳಿಗೆ ಸಹ ಶಿಕ್ಷಕಿ ಅನಷಾ ಇವರು ಪರಿಸರದ ಕುರಿತ ರಸಪ್ರಶ್ನ ಕಾರ್ಯಕ್ರಮ ನೆರವೇರಿಸಿದರು. ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಸಹ ಶಿಕ್ಷಕಿ ಕಾವ್ಯ ಕಾರ್ಯಕ್ರಮದ ನಿರೂಪಣೆಗೈದರು. ಸಹ ಶಿಕ್ಷಕಿ ಅಶ್ವಿನಿ ಸ್ವಾಗತಿಸಿದರು. ಸಹ ಶಿಕ್ಷಕ ವಿರಾಜ್ ಧನ್ಯವಾದವಿತ್ತರು .

Related posts

ಪುಂಜಾಲಕಟ್ಟೆ ಕೆಪಿಎಸ್ ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ನಿಡ್ಲೆ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಅಜಿತ್ ಗೌಡ ಕಜೆ ಮರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದಿಂದ ಹೈನುಗಾರಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಚೆಕ್ ವಿತರಣೆ

Suddi Udaya

ಮಾಜಿ ಶಾಸಕ ದಿ. ಕೆ ವಸಂತ ಬಂಗೇರರವರ 78 ನೇ ಹುಟ್ಟು ಹಬ್ಬದ ಸವಿ ನೆನಪಿಗಾಗಿ, ಬಂಗೇರಾ ಬ್ರಿಗೇಡ್ ಬೆಳ್ತಂಗಡಿ ವತಿಯಿಂದ,ಬಿನುತಾ ಬಂಗೇರರ ನೇತೃತ್ವದಲ್ಲಿ ಮದ್ದಡ್ಕ ಬಂಡೀಮಠ ಮೈದಾನದಲ್ಲಿ ಹೊನಲು ಬೆಳೆಕಿನ ಮುಕ್ತ ಕಬಡ್ಡಿ ಪಂದ್ಯಕೂಟ

Suddi Udaya

ರಾಜ್ಯಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ಪ್ರಥಮ ಸ್ಥಾನ

Suddi Udaya

ಕೊಕ್ಕಡ ಕಪಿಲಾ ಜೇಸಿ ಸಂಸ್ಥೆಯ ಜೇಸಿ ಸಪ್ತಾಹ

Suddi Udaya
error: Content is protected !!