25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

ಉಜಿರೆ: ಪರಿಸರ ಸಮತೋಲನ ಕಾಪಾಡುವಲ್ಲಿ ಎಲ್ಲರ ಪಾತ್ರ ಬಹಳ ಮುಖ್ಯ. ಪ್ಲಾಸ್ಟಿಕ್ ಇತ್ಯಾದಿಗಳ ಬಳಕೆ ಹಾಗೂ ವಿಲೇವಾರಿ ಕೂಡ ಸರಿಯಾದ ದಿಶೆಯಲ್ಲಿ ಆಗಬೇಕು. ಪರಿಸರ ಸಂರಕ್ಷಣೆಯಲ್ಲಿ ಮರಗಿಡಗಳ ಕೊಡುಗೆ ಅಪಾರ. ಗಿಡಗಳನ್ನು ನೆಡುವುದರೊಂದಿಗೆ ಅವುಗಳ ಪೋಷಣೆ ಅತಿ ಮುಖ್ಯ. ಈ ಮೂಲಕ ಪ್ರತಿದಿನ ಪರಿಸರ ಕಾಳಜಿ ಅಗತ್ಯ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಹೇಳಿದರು.

ಇವರು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಗಿಡ ನೆಟ್ಟು ಮಾತನಾಡಿದರು. ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಸ್ವಾಗತಿಸಿದರು. ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ನಿರೂಪಿಸಿ ವಂದಿಸಿದರು. ಇದೇ ಸಂದರ್ಭದಲ್ಲಿ ಸ್ವಯಂ ಸೇವಕರಿಂದ ಸಸಿಗಳನ್ನು ನೆಡುವ ಕಾರ್ಯ ಜರುಗಿತು.

Related posts

ಇಂದು (ಡಿ.2) ಗುರುವಾಯನಕೆರೆ ಎಕ್ಸೆಲ್ ಸಂಸ್ಥೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ: ಚೌಕಿ ಪೂಜೆ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ವಾರ್ಷಿಕ ಮಹಾಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಅಧ್ಯಕ್ಷರಾಗಿ ಚೈತ್ರಾ ಎಂ.ಜಿ., ಉಪಾಧ್ಯಕ್ಷರಾಗಿ ಪ್ರೇಮಾ ಸಿ.

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ರಾಷ್ಟ್ರೀಯ ತನಿಖಾ ತಂಡದಿಂದ ತನಿಖೆಯಾಗಬೇಕು : ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಕಾಂತಾರ ಖ್ಯಾತಿಯ ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya
error: Content is protected !!