24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಕ್ಕೇಡಿ:ಕೋಟಿ ಚೆನ್ನಯ ಸೇವಾ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಕುಕ್ಕೇಡಿ: ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೆಡಿ-ನಿಟ್ಟೆಡೆ ಸಂಘಟನೆ ವತಿಯಿಂದ ಹಾಗೂ ಸಂಘದ ಗೌರವ ಅಧ್ಯಕ್ಷರಾದ ಅಮ್ಮಾಜಿ ಕೋಟ್ಯಾನ್ ಹಿರ್ತೊಟ್ಟು ಇವರ ಸಹಕಾರದೊಂದಿಗೆ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು

ಮುಖ್ಯ ಅತಿಥಿಗಳಾಗಿ ನಿವೃತ್ತ ಸಹಾಯಕ ಪೊಲೀಸ್ ಉಪನಿರೀಕ್ಷಕರು ಜಯ ಪೂಜಾರಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಇಂತಹ ಕೆಲಸ ಕಾರ್ಯಗಳು ಸಮಾಜಕ್ಕೆ ಮಾದರಿ ಇನ್ನಷ್ಟು ಸಾಮಾಜಿಕ ಸೇವಾ ಕಾರ್ಯಗಳು ಈ ಸಂಘಟನೆಯಿಂದ ನಡೆಯಲಿ ಎಂದು ಶುಭ ಹಾರೈಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ರತ್ನಾಕರ ಸಾಲ್ಯಾನ್ ಬರ್ಕಜೆ ಮಾತನಾಡಿ ನಾರಾಯಣ ಗುರುಗಳ ತತ್ವ, ಸಿದ್ದಾಂತ ಆದರ್ಶಗಳನ್ನು ಮೈಗೂಡಿಸಿಕೊಂಡು ಯಾವುದೇ ಮಕ್ಕಳು ಶಿಕ್ಷಣದಲ್ಲಿ ವಂಚಿತರಾಗದೇ ಉನ್ನತ ಶಿಕ್ಷಣ ಪಡೆದು ಸ್ವತಂತ್ರರಾಗಿ ಸಮಾಜದಲ್ಲಿ ಬದುಕುವಂತರಾಗಬೇಕು. ಸಮಾಜ ಗುರುತಿಸುವಂತ ಕೆಲಸ ಕಾರ್ಯಗಳನ್ನು ನಡೆಸಲು ಎಲ್ಲರೂ ಜೊತೆಯಾಗಿ ಕೆಲಸ ಮಾಡುವುದರ ಮುಖಾಂತರ ಮಾದರಿ ಸಂಘಟನೆ ಎಂಬ ಕೀರ್ತಿಗೆ ಪಾತ್ರರಾಗಲು ನಿಮ್ಮೆಲ್ಲರ ಸಹಕಾರ ಅಗತ್ಯ ಎಂದರು‌

ಸ್ಥಾಪಕ ಅಧ್ಯಕ್ಷ ಸತೀಶ್ ಕೆರಿಯರ್ ಮಾತನಾಡಿ ಯಾವುದೇ ಟೀಕೆ ಟಿಪ್ಪಣಿಗಳಿಗೆ ಕಿವಿ ಕೊಡದೆ ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಉನ್ನತ ಸ್ಥಾನಮಾನ ಗಳಿಸಿ ಕೀರ್ತಿವಂತರಾಗಬೇಕು ಎಂದು ಕರೆ ನೀಡಿದರು.

ವೇದಿಕೆಯಲ್ಲಿ ಯಶಲತಾ ಅಮ್ಮಾಜಿ ಉಪಸ್ಥಿತರಿದ್ದರು.

ಅನನ್ಯ ಎ. ಪೂಜಾರಿ ಇವರ ಭಕ್ತಿ ಗೀತೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಅಮ್ಮಾಜಿ ಕೋಟ್ಯಾನ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ನವೀನ್ ಬುಲೆಕ್ಕರ ಕಾರ್ಯಕ್ರಮ ನಿರೂಪಿಸಿದರು. ಸಂಘದ ಪದಾಧಿಕಾರಿಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿ ರವಿ ಉಲ್ತುರ್ ವಂದಿಸಿದರು.

Related posts

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜನ್ಮ ಕಲ್ಯಾಣೋತ್ಸವ

Suddi Udaya

ಉಜಿರೆ : ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಇಫ್ತಾರ್ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಕನಾ೯ಟಕ ಜೈನ್ ಅಸೋಸಿಯೇಷನ್ ವತಿಯಿಂದ “ನಮ್ಮ ನಡೆ ಧರ್ಮಸ್ಥಳದ ಕಡೆ” ಅಭಿಯಾನ: 14 ಜೈನ ಮಠಗಳ ಭಟ್ಟಾರಕ ಸ್ವಾಮೀಜಿಗಳು ಹಾಗೂ 10 ಸಾವಿರ ಸಂಖ್ಯೆಯಲ್ಲಿ ಜೈನ ಬಾಂಧವರು ಭಾಗಿ

Suddi Udaya

ಕಜಕೆ ಶಾಲೆಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ಪರ ಪ್ರತಿಬಂಧಕಾದೇಶ ಜಾರಿಗೊಳಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ಸೂಚನೆ

Suddi Udaya
error: Content is protected !!