25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಕ್ಕೇಡಿ:ಕೋಟಿ ಚೆನ್ನಯ ಸೇವಾ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಕುಕ್ಕೇಡಿ: ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೆಡಿ-ನಿಟ್ಟೆಡೆ ಸಂಘಟನೆ ವತಿಯಿಂದ ಹಾಗೂ ಸಂಘದ ಗೌರವ ಅಧ್ಯಕ್ಷರಾದ ಅಮ್ಮಾಜಿ ಕೋಟ್ಯಾನ್ ಹಿರ್ತೊಟ್ಟು ಇವರ ಸಹಕಾರದೊಂದಿಗೆ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು

ಮುಖ್ಯ ಅತಿಥಿಗಳಾಗಿ ನಿವೃತ್ತ ಸಹಾಯಕ ಪೊಲೀಸ್ ಉಪನಿರೀಕ್ಷಕರು ಜಯ ಪೂಜಾರಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಇಂತಹ ಕೆಲಸ ಕಾರ್ಯಗಳು ಸಮಾಜಕ್ಕೆ ಮಾದರಿ ಇನ್ನಷ್ಟು ಸಾಮಾಜಿಕ ಸೇವಾ ಕಾರ್ಯಗಳು ಈ ಸಂಘಟನೆಯಿಂದ ನಡೆಯಲಿ ಎಂದು ಶುಭ ಹಾರೈಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ರತ್ನಾಕರ ಸಾಲ್ಯಾನ್ ಬರ್ಕಜೆ ಮಾತನಾಡಿ ನಾರಾಯಣ ಗುರುಗಳ ತತ್ವ, ಸಿದ್ದಾಂತ ಆದರ್ಶಗಳನ್ನು ಮೈಗೂಡಿಸಿಕೊಂಡು ಯಾವುದೇ ಮಕ್ಕಳು ಶಿಕ್ಷಣದಲ್ಲಿ ವಂಚಿತರಾಗದೇ ಉನ್ನತ ಶಿಕ್ಷಣ ಪಡೆದು ಸ್ವತಂತ್ರರಾಗಿ ಸಮಾಜದಲ್ಲಿ ಬದುಕುವಂತರಾಗಬೇಕು. ಸಮಾಜ ಗುರುತಿಸುವಂತ ಕೆಲಸ ಕಾರ್ಯಗಳನ್ನು ನಡೆಸಲು ಎಲ್ಲರೂ ಜೊತೆಯಾಗಿ ಕೆಲಸ ಮಾಡುವುದರ ಮುಖಾಂತರ ಮಾದರಿ ಸಂಘಟನೆ ಎಂಬ ಕೀರ್ತಿಗೆ ಪಾತ್ರರಾಗಲು ನಿಮ್ಮೆಲ್ಲರ ಸಹಕಾರ ಅಗತ್ಯ ಎಂದರು‌

ಸ್ಥಾಪಕ ಅಧ್ಯಕ್ಷ ಸತೀಶ್ ಕೆರಿಯರ್ ಮಾತನಾಡಿ ಯಾವುದೇ ಟೀಕೆ ಟಿಪ್ಪಣಿಗಳಿಗೆ ಕಿವಿ ಕೊಡದೆ ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಉನ್ನತ ಸ್ಥಾನಮಾನ ಗಳಿಸಿ ಕೀರ್ತಿವಂತರಾಗಬೇಕು ಎಂದು ಕರೆ ನೀಡಿದರು.

ವೇದಿಕೆಯಲ್ಲಿ ಯಶಲತಾ ಅಮ್ಮಾಜಿ ಉಪಸ್ಥಿತರಿದ್ದರು.

ಅನನ್ಯ ಎ. ಪೂಜಾರಿ ಇವರ ಭಕ್ತಿ ಗೀತೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಅಮ್ಮಾಜಿ ಕೋಟ್ಯಾನ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ನವೀನ್ ಬುಲೆಕ್ಕರ ಕಾರ್ಯಕ್ರಮ ನಿರೂಪಿಸಿದರು. ಸಂಘದ ಪದಾಧಿಕಾರಿಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿ ರವಿ ಉಲ್ತುರ್ ವಂದಿಸಿದರು.

Related posts

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಗೌರವಾರ್ಪಣೆ

Suddi Udaya

ಭಗವದ್ಗೀತೆ ಪಠಣ ಸ್ಪರ್ಧೆ: ಧರ್ಮಸ್ಥಳದ ಡಾ. ಶೌರ್ಯ ಎಸ್.ವಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಮಡಂತ್ಯಾರು: ಬಸವನಗುಡಿ ಒಕ್ಕೂಟದ ಸದಸ್ಯರಿಗೆ ಸುರಕ್ಷಾ ಕಾರ್ಡ್ ವಿತರಣೆ

Suddi Udaya

ಜೂ.1: ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಸಹಕಾರದೊಂದಿಗೆ ಬಿದಿರು ಕೃಷಿ ಮಾಹಿತಿ ಸಭೆ

Suddi Udaya

ಬಳಂಜ ಬದಿನಡೆ ಕ್ಷೇತ್ರಕ್ಕೆ ಶ್ರೀ ಸಾಯಿ ಗುರೂಜಿ ಭೇಟಿ

Suddi Udaya
error: Content is protected !!