27 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಸದಸ್ಯೆಯ ತಂಡದಿಂದ ಹಲ್ಲೆ: ಎಸ್‌ಡಿಪಿಐ ತೆಕ್ಕಾರು ಗ್ರಾಮ ಸಮಿತಿ ಖಂಡನೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ತೆಕ್ಕಾರು ಗ್ರಾ.ಪಂ ಪಿಡಿಒ ಸುಮಯ್ಯಾ ಹಾಗೂ ಗ್ರಾ.ಪಂ ಸ್ವಚ್ಚತಾಗಾರ್ತಿ ಪ್ರಮೀಳಾ ಮೇಲೆ ಹಲ್ಲೆ, ಸರಕಾರಿ ಸೊತ್ತು ನಾಶ, ನಗದು ದರೋಡೆ ಹಾಗೂ ಜೀವ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಶೀಘ್ರದಲ್ಲಿ ಬಂಧನ ಮಾಡಬೇಕು ಎಂದು ಎಸ್‌ಡಿಪಿಐ ತೆಕ್ಕಾರು ಗ್ರಾಮ ಸಮಿತಿ ಅಧ್ಯಕ್ಷರಾದ ನಝೀರ್ ಬಾಜಾರು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ರಾ.ಪಂ ಸದಸ್ಯೆ ಯಮುನಾ, ಅವರ ಪುತ್ರ ನವೀನ್ ನಾಯ್ಕ್ ಮತ್ತು ಸ್ಥಳೀಯ ನಿವಾಸಿ ಮಂಜುನಾಥ ಸಾಲಿಯಾನ್ ಎಂಬವರೇ ಕೃತ್ಯವೆಸಗಿದವರೆಂದು ಎಫ್ ಐ ಆರ್ ನಲ್ಲಿ ಉಲ್ಲೇಖವಾಗಿದೆ ಅವರನ್ನು ಶೀಘ್ರದಲ್ಲಿ ಬಂಧನ ಮಾಡಬೇಕು ಮತ್ತು ಒತ್ತುವರಿಯದ ಸರ್ಕಾರಿ ಕಟ್ಟಡವನ್ನು ಮರಳಿ ಪಂಚಾಯತ್ ಗೆ ಪಡೆದುಕೊಳ್ಳಬೇಕೆಂದು ತಿಳಿಸಿದ್ದಾರೆ.
ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 109, 504, 323, 506, 354, 353, 392, 34, 2(A) ಮೊದಲಾದ ದಂಡ ಸಂಹಿತೆಯಂತೆ ಕ್ರಿಮಿನಲ್ ಕೃತ್ಯ, ನಿಂದನೆ, ಮಾನಭಂಗ ಯತ್ನ, ಸರಕಾರಿ ಕರ್ತವ್ಯಕ್ಕೆ ಅಡ್ಡಿ, ದರೋಡೆ, ಸರಕಾರಿ ಸೊತ್ತು ನಾಶ, ಇತ್ಯಾಧಿಯಡಿ ಕೇಸು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳನ್ನು ತಕ್ಷಣ ಬಂಧನ ಮಾಡಬೇಕು ಇಲ್ಲವಾದಲ್ಲಿ ತೆಕ್ಕಾರು ಗ್ರಾಮಸ್ಥರನ್ನು ಸೇರಿಸಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲಾಗುದು ಎಂದು ತಿಳಿಸಿದ್ದಾರೆ.

Related posts

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಬೃಹತ್ ಪ್ರತಿಭಟನೆಗೆ ಬೆಳ್ತಂಗಡಿ ರೈತ ಮೋರ್ಚಾ ಬೆಂಬಲ

Suddi Udaya

ವೇಣೂರು: ಬಜಿರೆ ಬಾಡಾರು ಕೊರಗಲ್ಲು ಕೊರಗಜ್ಜನ ಗುಡಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya

ಎಸ್.ಡಿ.ಎಂ ಕಾಲೇಜಿನ ಕಲಾ ಕೇಂದ್ರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ

Suddi Udaya

ಹೆದ್ದಾರಿ ಕಾಮಗಾರಿ ವಾಹನಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಾಯ

Suddi Udaya

ಕಿಲ್ಲೂರಿನಲ್ಲಿ ಸಂಶಯಾಸ್ಪದ ರೀತಿಯಲ್ಲಿ ಹೋರಿ ಸಾವು

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿಯಾಗಿ ಸಮಾಜ ಸೇವಕ ಕೆ. ಮೋಹನ್ ಕುಮಾರ್ ಆಯ್ಕೆ

Suddi Udaya
error: Content is protected !!