May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಸದಸ್ಯೆಯ ತಂಡದಿಂದ ಹಲ್ಲೆ: ಎಸ್‌ಡಿಪಿಐ ತೆಕ್ಕಾರು ಗ್ರಾಮ ಸಮಿತಿ ಖಂಡನೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ತೆಕ್ಕಾರು ಗ್ರಾ.ಪಂ ಪಿಡಿಒ ಸುಮಯ್ಯಾ ಹಾಗೂ ಗ್ರಾ.ಪಂ ಸ್ವಚ್ಚತಾಗಾರ್ತಿ ಪ್ರಮೀಳಾ ಮೇಲೆ ಹಲ್ಲೆ, ಸರಕಾರಿ ಸೊತ್ತು ನಾಶ, ನಗದು ದರೋಡೆ ಹಾಗೂ ಜೀವ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಶೀಘ್ರದಲ್ಲಿ ಬಂಧನ ಮಾಡಬೇಕು ಎಂದು ಎಸ್‌ಡಿಪಿಐ ತೆಕ್ಕಾರು ಗ್ರಾಮ ಸಮಿತಿ ಅಧ್ಯಕ್ಷರಾದ ನಝೀರ್ ಬಾಜಾರು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ರಾ.ಪಂ ಸದಸ್ಯೆ ಯಮುನಾ, ಅವರ ಪುತ್ರ ನವೀನ್ ನಾಯ್ಕ್ ಮತ್ತು ಸ್ಥಳೀಯ ನಿವಾಸಿ ಮಂಜುನಾಥ ಸಾಲಿಯಾನ್ ಎಂಬವರೇ ಕೃತ್ಯವೆಸಗಿದವರೆಂದು ಎಫ್ ಐ ಆರ್ ನಲ್ಲಿ ಉಲ್ಲೇಖವಾಗಿದೆ ಅವರನ್ನು ಶೀಘ್ರದಲ್ಲಿ ಬಂಧನ ಮಾಡಬೇಕು ಮತ್ತು ಒತ್ತುವರಿಯದ ಸರ್ಕಾರಿ ಕಟ್ಟಡವನ್ನು ಮರಳಿ ಪಂಚಾಯತ್ ಗೆ ಪಡೆದುಕೊಳ್ಳಬೇಕೆಂದು ತಿಳಿಸಿದ್ದಾರೆ.
ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 109, 504, 323, 506, 354, 353, 392, 34, 2(A) ಮೊದಲಾದ ದಂಡ ಸಂಹಿತೆಯಂತೆ ಕ್ರಿಮಿನಲ್ ಕೃತ್ಯ, ನಿಂದನೆ, ಮಾನಭಂಗ ಯತ್ನ, ಸರಕಾರಿ ಕರ್ತವ್ಯಕ್ಕೆ ಅಡ್ಡಿ, ದರೋಡೆ, ಸರಕಾರಿ ಸೊತ್ತು ನಾಶ, ಇತ್ಯಾಧಿಯಡಿ ಕೇಸು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳನ್ನು ತಕ್ಷಣ ಬಂಧನ ಮಾಡಬೇಕು ಇಲ್ಲವಾದಲ್ಲಿ ತೆಕ್ಕಾರು ಗ್ರಾಮಸ್ಥರನ್ನು ಸೇರಿಸಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲಾಗುದು ಎಂದು ತಿಳಿಸಿದ್ದಾರೆ.

Related posts

ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಆಸರೆ 3ನೇ ಮನೆ ಹಸ್ತಾಂತರ

Suddi Udaya

ಬಸ್ಸು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಯುವಕ ಸಾವು

Suddi Udaya

ಜೂ.16: ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಎರಡನೇ ಅವಧಿಗೆ ಮೀಸಲಾತಿ ನಿಗದಿ

Suddi Udaya

ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರಕ್ಕೆ ದ.ಕ. ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಭೇಟಿ

Suddi Udaya

ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಗಮನ ಸೆಳೆದ ಶಾಸಕ ಹರೀಶ್ ಪೂಂಜ

Suddi Udaya

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್ ಕಾಜೂರು ಇದರ ಮಹಾಸಭೆ: ಆಡಳಿತ ಮಂಡಳಿಗೆ ಮತದಾನ; 11 ಮಂದಿ ನಿರ್ದೇಶಕರ ಆಯ್ಕೆ

Suddi Udaya
error: Content is protected !!