May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝ ಗಾರ್ಡನ್ ಮಂಜೊಟ್ಟಿಯಲ್ಲಿ ವಿಶ್ವ ಪರಿಸರ ದಿನಾಚರಣೆ

ಮಂಜೊಟ್ಟಿ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝ ಗಾರ್ಡನ್ ಮಂಜೊಟ್ಟಿ ಇಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ” ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ” ಎಂಬ ಘೋಷ ವಾಕ್ಯದೊಂದಿಗೆ ಆಚರಿಸಲಾಯಿತು.

ಕಾರ್ಯಕ್ರಮದ ವೇದಿಕೆಯಲ್ಲಿ ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸಯ್ಯದ್ ಹಬೀಬ್, ಕಾರ್ಯದರ್ಶಿಯಾದ ಸೈಯದ್ ಅಯ್ಯುಬ್, ಕೋಶಾಧಿಕಾರಿ ಸೈಯದ್ ಇರ್ಫಾನ್, ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿನ್, ಅರೇಬಿಕ್ ಶಿಕ್ಷಣ ವಿಭಾಗದ ಗುರುಗಳು ಉಪಸ್ಥಿತರಿದ್ದರು.

ಅತಿಥಿಗಳು ಗಿಡವನ್ನು ನೆಟ್ಟು ನೀರುಣಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿನ್ ವಿದ್ಯಾರ್ಥಿಗಳಿಗೆ ವಿಶ್ವ ಪರಿಸರ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿ ಬೀಜವೊಂದು ಮೊಳಕೆಯೊಡೆದು ಗಿಡವಾಗಿ ಹೂ ಬಿಡುವವರೆಗಿನ ಪ್ರಕ್ರಿಯೆಯನ್ನು ವಿವರವಾಗಿ ತಿಳಿಸಿಕೊಟ್ಟರು. ನಂತರ ಶಾಲಾ ಆವರಣದಲ್ಲಿ ಶಿಕ್ಷಕರುಗಳು ಹಾಗೂ ವಿದ್ಯಾರ್ಥಿಗಳು ಗಿಡಗಳನ್ನು ನೆಡುವುದರ ಮೂಲಕ ಅವುಗಳಿಗೆ ನೀರುಣಿಸಿ ಸಂರಕ್ಷಣೆ ಮಾಡುವ ಪ್ರತಿಜ್ಞೆಯನ್ನು ಕೈಗೊಂಡರು.

ಶಾಲಾ ಸಹ ಶಿಕ್ಷಕಿ ಶ್ರೀಮತಿ ಯಶಸ್ವಿನಿ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಕಾಂಗ್ರೇಸ್ ಸರ್ಕಾರದಿಂದ ಕಾನೂನುವ್ಯವಸ್ಥೆಯ ಅಪಹಾಸ್ಯ :ಬೆಳ್ತಂಗಡಿ ಬಿಜೆಪಿ ಮಂಡಲ ಆಕ್ರೋಶ

Suddi Udaya

ಬಾರ್ಯ: ಬನ್ನೆoಗಳ ಸೇತುವೆ ಮೇಲೆ ಪ್ರಾಣಿ ತ್ಯಾಜ್ಯ ಎಸೆದು ವಿಕೃತಿ ಮೆರೆದ ಕಿಡಿಗೇಡಿಗಳು

Suddi Udaya

ಹೆರಿಗೆಯ ಬಳಿಕ ತೀವ್ರ ರಕ್ತಸ್ರಾವ ನಾರಾವಿಯ ಮಹಿಳೆ ಮೃತ್ಯು

Suddi Udaya

ಮಂಗಳೂರು ಮಾಂಡೋವಿ ಮೋಟಾರ್ಸ್ ಉದ್ಯೋಗಿ, ಬೆಳ್ತಂಗಡಿ ತಾಲೂಕಿನ ಮುಂಡೂರು ನಿವಾಸಿ ಬೈಕ್ ಅಪಘಾತದಲ್ಲಿ ಮೃತ್ಯು

Suddi Udaya

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದ ಗರ್ಡಾಡಿಯ ಅತುಲ್ ಕೃಷ್ಣ ರಿಗೆ ಸನ್ಮಾನ

Suddi Udaya

ಉರುವಾಲು ಶ್ರೀ ಭಾರತೀ ಆ.ಮಾ. ಪ್ರೌಢ ಶಾಲೆ ಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

Suddi Udaya
error: Content is protected !!