May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಕ್ಕೇಡಿ:ಕೋಟಿ ಚೆನ್ನಯ ಸೇವಾ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಕುಕ್ಕೇಡಿ: ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೆಡಿ-ನಿಟ್ಟೆಡೆ ಸಂಘಟನೆ ವತಿಯಿಂದ ಹಾಗೂ ಸಂಘದ ಗೌರವ ಅಧ್ಯಕ್ಷರಾದ ಅಮ್ಮಾಜಿ ಕೋಟ್ಯಾನ್ ಹಿರ್ತೊಟ್ಟು ಇವರ ಸಹಕಾರದೊಂದಿಗೆ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು

ಮುಖ್ಯ ಅತಿಥಿಗಳಾಗಿ ನಿವೃತ್ತ ಸಹಾಯಕ ಪೊಲೀಸ್ ಉಪನಿರೀಕ್ಷಕರು ಜಯ ಪೂಜಾರಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಇಂತಹ ಕೆಲಸ ಕಾರ್ಯಗಳು ಸಮಾಜಕ್ಕೆ ಮಾದರಿ ಇನ್ನಷ್ಟು ಸಾಮಾಜಿಕ ಸೇವಾ ಕಾರ್ಯಗಳು ಈ ಸಂಘಟನೆಯಿಂದ ನಡೆಯಲಿ ಎಂದು ಶುಭ ಹಾರೈಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ರತ್ನಾಕರ ಸಾಲ್ಯಾನ್ ಬರ್ಕಜೆ ಮಾತನಾಡಿ ನಾರಾಯಣ ಗುರುಗಳ ತತ್ವ, ಸಿದ್ದಾಂತ ಆದರ್ಶಗಳನ್ನು ಮೈಗೂಡಿಸಿಕೊಂಡು ಯಾವುದೇ ಮಕ್ಕಳು ಶಿಕ್ಷಣದಲ್ಲಿ ವಂಚಿತರಾಗದೇ ಉನ್ನತ ಶಿಕ್ಷಣ ಪಡೆದು ಸ್ವತಂತ್ರರಾಗಿ ಸಮಾಜದಲ್ಲಿ ಬದುಕುವಂತರಾಗಬೇಕು. ಸಮಾಜ ಗುರುತಿಸುವಂತ ಕೆಲಸ ಕಾರ್ಯಗಳನ್ನು ನಡೆಸಲು ಎಲ್ಲರೂ ಜೊತೆಯಾಗಿ ಕೆಲಸ ಮಾಡುವುದರ ಮುಖಾಂತರ ಮಾದರಿ ಸಂಘಟನೆ ಎಂಬ ಕೀರ್ತಿಗೆ ಪಾತ್ರರಾಗಲು ನಿಮ್ಮೆಲ್ಲರ ಸಹಕಾರ ಅಗತ್ಯ ಎಂದರು‌

ಸ್ಥಾಪಕ ಅಧ್ಯಕ್ಷ ಸತೀಶ್ ಕೆರಿಯರ್ ಮಾತನಾಡಿ ಯಾವುದೇ ಟೀಕೆ ಟಿಪ್ಪಣಿಗಳಿಗೆ ಕಿವಿ ಕೊಡದೆ ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಉನ್ನತ ಸ್ಥಾನಮಾನ ಗಳಿಸಿ ಕೀರ್ತಿವಂತರಾಗಬೇಕು ಎಂದು ಕರೆ ನೀಡಿದರು.

ವೇದಿಕೆಯಲ್ಲಿ ಯಶಲತಾ ಅಮ್ಮಾಜಿ ಉಪಸ್ಥಿತರಿದ್ದರು.

ಅನನ್ಯ ಎ. ಪೂಜಾರಿ ಇವರ ಭಕ್ತಿ ಗೀತೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಅಮ್ಮಾಜಿ ಕೋಟ್ಯಾನ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ನವೀನ್ ಬುಲೆಕ್ಕರ ಕಾರ್ಯಕ್ರಮ ನಿರೂಪಿಸಿದರು. ಸಂಘದ ಪದಾಧಿಕಾರಿಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿ ರವಿ ಉಲ್ತುರ್ ವಂದಿಸಿದರು.

Related posts

ಕೊಕ್ಕಡ: ಸರ್ವಿಸ್ ಸ್ಟೇಷನ್ ಮಾಲಕ ಶಾಂತಪ್ಪ ಗೌಡ ಆತ್ಮಹತ್ಯೆ

Suddi Udaya

ಅಳದಂಗಡಿ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಡಾ. ರಮೇಶ್ ನೇಮಕ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya

ಕಾಶಿಪಟ್ಣ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ನಾಡಿನ ಪುಣ್ಯಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya
error: Content is protected !!