22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸಿರಿ ಕೇಂದ್ರ ಕಛೇರಿಯಲ್ಲಿ ಸಿಬ್ಬಂದಿಗಳಿಗೆ ಧ್ಯಾನ ತರಬೇತಿ ಕಾರ್ಯಕ್ರಮ

ಉಜಿರೆ: ಸುರತ್ಕಲ್‌ನ ಶ್ರೀ ಎಂ. ಶಂಕರ ನಾರಾಯಣ ಚಾರಿಟೇಬಲ್ ಟ್ರಸ್ಟ್ ಮತ್ತು ಬುದ್ಧ ಸಿಇಒ ವತಿಯಿಂದ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಸಿಬ್ಬಂದಿಗಳಿಗೆ ಧ್ಯಾನ ತರಬೇತಿ ಕಾರ್ಯಕ್ರಮ ಜೂ 6 ರಂದು ಸಿರಿ ಕೇಂದ್ರ ಕಛೇರಿಯಲ್ಲಿ ನಡೆಯಿತು.


ಶ್ರೀ ಎಂ. ಶಂಕರ ನಾರಾಯಣ ಚಾರಿಟೇಬಲ್ ಟ್ರಸ್ಟ್‌ನ ರಾಕೇಶ್ ಜಾಲುಮನೆ ಮತ್ತು ಚಂದ್ರರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಸರಳ ಧ್ಯಾನದ ವಿಧಾನ, ಧ್ಯಾನದಿಂದ ಮನಸ್ಸಿನ ಮೇಲೆ ಪ್ರಭಾವ ಬೀರುವ ಮತ್ತು ಉಸಿರಿನ ಮೇಲೆ ನಿಯಂತ್ರಣ ಸಾಧಿಸುವ ಮೂಲಕ ಧ್ಯಾನದಿಂದ ದಿನನಿತ್ಯದ ಬದುಕಿನಲ್ಲಿ ಆಗುವ ಉಪಯೋಗಗಳ ಬಗ್ಗೆ ಹಾಗೂ ಸರಿಯಾದ ನಿದ್ರೆ, ಉತ್ತಮ ಆಹಾರ ಪದ್ಧತಿ, ವಿವೇಕಯುಕ್ತ ಮಾತು, ಸಕಾರಾತ್ಮಕ ಯೋಚನೆಗಳನ್ನು ಅಳವಡಿಸಿಕೊಂಡಲ್ಲಿ ಮಾತ್ರ ಪ್ರತಿಯೊಬ್ಬ ಮನುಷ್ಯನೂ ಆರೋಗ್ಯಕರವಾಗಿ ಜೀವಿಸಲು ಸಾಧ್ಯ ಎಂದು ಸಿರಿ ಸಿಬ್ಬಂದಿಗಳಿಗೆ ಸವಿಸ್ತಾರವಾದ ಮಾಹಿತಿ ನೀಡಿದರು.

ಧ್ಯಾನ ತರಬೇತಿ ಪಡೆದ ಸಿರಿ ಸಿಬ್ಬಂದಿಗಳು ಧ್ಯಾನವನ್ನು ಮಾಡಿದಾಗ ತಮ್ಮ ದೇಹ ಹಾಗೂ ಮನಸ್ಸಿನಲ್ಲಾದ ಅನುಭವಗಳ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿ, ಮುಂದಿನ ದಿನಗಳಲ್ಲಿ ತಮ್ಮ ದೈನಂದಿನ ಜೀವನದಲ್ಲಿ ಧ್ಯಾನವನ್ನು ಅಳವಡಿಸಿಕೊಂಡು ಉತ್ತಮ ಜೀವನವನ್ನು ನಡೆಸುವುದಾಗಿ ತಿಳಿಸಿದರು.

ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನರವರು ಪ್ರಾಸ್ತಾವಿಕವಾಗಿ ಮಾತನಾಡಿ, ಸಂಸ್ಥೆಗೆ ಆಗಮಿಸಿ ಸಿರಿ ಸಿಬ್ಬಂದಿಗಳಿಗೆ ಧ್ಯಾನದ ಮಹತ್ವವನ್ನು ತಿಳಿಸಿದ ಗಣ್ಯರಿಗೆ ಸಂಸ್ಥೆಯ ವತಿಯಿಂದ ಸನ್ಮಾನಿಸಿ, ಗೌರವಿಸಿದರು.

ಈ ಸಂದರ್ಭದಲ್ಲಿ ಸಿರಿ ಸಂಸ್ಥೆಯ ಎಲ್ಲಾ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದು, ಧ್ಯಾನದ ಬಗ್ಗೆ ಮಾಹಿತಿ ಪಡೆದುಕೊಂಡರು. ಜೀವನ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.

Related posts

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಪಟ್ರಮೆ ಗ್ರಾಮ ಪಂಚಾಯತ್ ಬಳಿ ಬಿಜೆಪಿ ಪ್ರತಿಭಟನೆ

Suddi Udaya

ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪ್ರಶಸ್ತಿ

Suddi Udaya

ಮುತ್ತೂಟ್ ಫೈನಾನ್ಸ್ ಬೆಳ್ತಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ: ಗ್ರಾಹಕರ ವಿಶ್ವಾಸ ಗಳಿಸಿದಾಗ ಸಂಸ್ಥೆ ಬೆಳೆಯುತ್ತದೆ : ಕುಸುಮಾಧರ್

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಸಂವಿಧಾನ ದಿನಾಚರಣೆಯ ಪ್ರಯುಕ್ತ ರಸಪ್ರಶ್ನೆ ಕಾರ್ಯಕ್ರಮ

Suddi Udaya

ಮೋಟೋ ಕ್ರಾಸ್ ಡರ್ಟ್ ಬೈಕ್ ರೇಸ್‌ನಲ್ಲಿ ಹವಾ ಎಬ್ಬಿಸಿದ 6 ವರ್ಷದ ಬಾಲಕ ಸುರಾಗ್ ಎಸ್.ರೈ

Suddi Udaya
error: Content is protected !!