23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಮ್ ಕಾಲೇಜಿನಲ್ಲಿ ಆಂಗ್ಲ ವಿಭಾಗದಿಂದ ಅಧ್ಯಯನ ವಿನಿಮಯ ಕಾರ್ಯಕ್ರಮ 

ಉಜಿರೆ: ಸಾಹಿತ್ಯವೆಂಬುದು ಭಾವನೆಗಳ ಸ್ಪುರಣೆ, ಇದು ಗತಿಬಿಂಬ, ಪ್ರತಿಬಿಂಬ, ಸ್ಥಿತಿಬಿಂಬವಾಗಿದೆ. ಸಾಹಿತ್ಯದ ಬಗೆಗಿನ ಒಲವನ್ನು ವಿದ್ಯಾರ್ಥಿಗಳಿಗೆ ನೀಡುವುದರ ಜೊತೆ ಇಂಗ್ಲಿಷ್ ಸಾಹಿತಿ ಜಾರ್ಜ್ ಆರ್ವೆಲ್’ರ ಸಾಹಿತ್ಯದ ಬಗ್ಗೆ ಸರಕಾರಿ ಪ್ರಥಮ ದರ್ಜೆ ಕಾಲೇಜ್’ನ ಸಹಾಯಕ ಪ್ರಾದ್ಯಾಪಕ ವಿನಯ್ ಏನ್ ಎಸ್ ಮಾಹಿತಿ ನೀಡಿದರು.

ಉಜಿರೆಯ ಶ್ರೀ.ಧ.ಮ ಕಾಲೇಜಿನಲ್ಲಿ ಆಂಗ್ಲ ಮಾಧ್ಯಮ ವಿಭಾಗವು ಏರ್ಪಡಿಸಿದ್ದ ಅಧ್ಯಯನ ವಿನಿಮಯ ಕಾರ್ಯಕ್ರಮದಲ್ಲಿ ಇವರು ಮಾತನಾಡುತ್ತಿದ್ದರು.

ಶಿಕ್ಷಣದಲ್ಲಿ ಸೃಜನಶೀಲತೆ ಮತ್ತು ಕ್ರಿಯಾತ್ಮಕತೆ ಮುಖ್ಯ ಈ ನಿಟ್ಟಿನಲ್ಲಿ ನಮ್ಮ ಕಾಲೇಜಿನ ಆಂಗ್ಲ ವಿಭಾಗವು ವಿದ್ಯಾರ್ಥಿಗಳಿಗೆ ಪಠ್ಯ ಮತ್ತು ಸಹ ಶಿಕ್ಷಣದಲ್ಲಿ ತೊಡಗಿಕೊಳ್ಳಲು ವಿಫುಲ ಅವಕಾಶಗಳನ್ನು ನೀಡಿದೆ. ಶೈಕ್ಷಣಿಕ ವಡಂಬಡಿಕೆಯಿಂದ ಸಮೀಪ ಕಾಲೇಜುಗಳನ್ನು ಒಳಗೊಂಡು ವಿಸ್ಕ್ರತವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಎಂದು ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲ ಬಿ.ಎ ಕುಮಾರ್ ಹೆಗಡೆ ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ವಿವೆಕಾನಂದ ಕಾಲೇಜ್ ಪುತ್ತೂರು , ಕೆ.ಎಸ್.ಎಸ್ ಕಾಲೇಜ್ ಸುಬ್ರಹ್ಮಣ್ಯ , ಎಸ್.ವಿ.ಎಸ್ ಕಾಲೇಜ್ ಬಂಟ್ವಾಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಹದಿನೈದಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಸಂಶೋಧನಾ ಪತ್ರಗಳನ್ನು ಮಂಡಿಸಿದರು. ಹಾಗೂ ಇಂಗ್ಲಿಷ್ ನಾಟಕವನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು.

ಈ ಕಾರ್ಯಕ್ರಮದಲ್ಲಿ ಆಂಗ್ಲ ವಿಭಾಗದ ಮುಖ್ಯಸ್ಥ ಜಿ.ಆರ್ ಭಟ್, ವಿಭಾಗದ ಸಹಪ್ರಾದ್ಯಾಪಕರು ಹಾಗೂ ಪ್ರೊಫೆಸರ್ ಗೋವಿಂದ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಖುಷಿ ಕುಮಾರ್, ಮೌಲ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು. ಮಯೂರಿ ವಂದಿಸಿದರು.

Related posts

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸೇವಾದಳ ಅಧ್ಯಕ್ಷರಾಗಿ ಇಸುಬು ಯು.ಕೆ ನೇಮಕ

Suddi Udaya

ಎಲ್‌ಸಿಆರ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಸುದೆಮುಗೇರು ವೃದ್ಧಾಶ್ರಮದಲ್ಲಿ. ದೇಶದ ಪ್ರಥಮ ಮಹಿಳಾ ಪ್ರಧಾನಿ , ಭೂಸುಧಾರಣಾ ಕಾಯ್ದೆಯ ರೂವಾರಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ

Suddi Udaya

ಬೆಳ್ತಂಗಡಿ : ಆಭರಣ ಜ್ಯುವೆಲರಿಗೆ ಐಟಿ ದಾಳಿ ಪ್ರಕರಣ: ಬೆಳ್ತಂಗಡಿ ಆಭರಣ ಶಾಪ್ ನ ಐಟಿ ದಾಳಿ ಮುಕ್ತಾಯ

Suddi Udaya

ಎಕ್ಸೆಲ್ ನಲ್ಲಿ ಅಮೆರಿಕಾ ವಿಜ್ಞಾನಿಗಳ ಜೊತೆ ಸಂವಾದ

Suddi Udaya

ನಾಳ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯ

Suddi Udaya
error: Content is protected !!