25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಮ್ ಕಾಲೇಜಿನಲ್ಲಿ ಆಂಗ್ಲ ವಿಭಾಗದಿಂದ ಅಧ್ಯಯನ ವಿನಿಮಯ ಕಾರ್ಯಕ್ರಮ 

ಉಜಿರೆ: ಸಾಹಿತ್ಯವೆಂಬುದು ಭಾವನೆಗಳ ಸ್ಪುರಣೆ, ಇದು ಗತಿಬಿಂಬ, ಪ್ರತಿಬಿಂಬ, ಸ್ಥಿತಿಬಿಂಬವಾಗಿದೆ. ಸಾಹಿತ್ಯದ ಬಗೆಗಿನ ಒಲವನ್ನು ವಿದ್ಯಾರ್ಥಿಗಳಿಗೆ ನೀಡುವುದರ ಜೊತೆ ಇಂಗ್ಲಿಷ್ ಸಾಹಿತಿ ಜಾರ್ಜ್ ಆರ್ವೆಲ್’ರ ಸಾಹಿತ್ಯದ ಬಗ್ಗೆ ಸರಕಾರಿ ಪ್ರಥಮ ದರ್ಜೆ ಕಾಲೇಜ್’ನ ಸಹಾಯಕ ಪ್ರಾದ್ಯಾಪಕ ವಿನಯ್ ಏನ್ ಎಸ್ ಮಾಹಿತಿ ನೀಡಿದರು.

ಉಜಿರೆಯ ಶ್ರೀ.ಧ.ಮ ಕಾಲೇಜಿನಲ್ಲಿ ಆಂಗ್ಲ ಮಾಧ್ಯಮ ವಿಭಾಗವು ಏರ್ಪಡಿಸಿದ್ದ ಅಧ್ಯಯನ ವಿನಿಮಯ ಕಾರ್ಯಕ್ರಮದಲ್ಲಿ ಇವರು ಮಾತನಾಡುತ್ತಿದ್ದರು.

ಶಿಕ್ಷಣದಲ್ಲಿ ಸೃಜನಶೀಲತೆ ಮತ್ತು ಕ್ರಿಯಾತ್ಮಕತೆ ಮುಖ್ಯ ಈ ನಿಟ್ಟಿನಲ್ಲಿ ನಮ್ಮ ಕಾಲೇಜಿನ ಆಂಗ್ಲ ವಿಭಾಗವು ವಿದ್ಯಾರ್ಥಿಗಳಿಗೆ ಪಠ್ಯ ಮತ್ತು ಸಹ ಶಿಕ್ಷಣದಲ್ಲಿ ತೊಡಗಿಕೊಳ್ಳಲು ವಿಫುಲ ಅವಕಾಶಗಳನ್ನು ನೀಡಿದೆ. ಶೈಕ್ಷಣಿಕ ವಡಂಬಡಿಕೆಯಿಂದ ಸಮೀಪ ಕಾಲೇಜುಗಳನ್ನು ಒಳಗೊಂಡು ವಿಸ್ಕ್ರತವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಎಂದು ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲ ಬಿ.ಎ ಕುಮಾರ್ ಹೆಗಡೆ ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ವಿವೆಕಾನಂದ ಕಾಲೇಜ್ ಪುತ್ತೂರು , ಕೆ.ಎಸ್.ಎಸ್ ಕಾಲೇಜ್ ಸುಬ್ರಹ್ಮಣ್ಯ , ಎಸ್.ವಿ.ಎಸ್ ಕಾಲೇಜ್ ಬಂಟ್ವಾಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಹದಿನೈದಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಸಂಶೋಧನಾ ಪತ್ರಗಳನ್ನು ಮಂಡಿಸಿದರು. ಹಾಗೂ ಇಂಗ್ಲಿಷ್ ನಾಟಕವನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು.

ಈ ಕಾರ್ಯಕ್ರಮದಲ್ಲಿ ಆಂಗ್ಲ ವಿಭಾಗದ ಮುಖ್ಯಸ್ಥ ಜಿ.ಆರ್ ಭಟ್, ವಿಭಾಗದ ಸಹಪ್ರಾದ್ಯಾಪಕರು ಹಾಗೂ ಪ್ರೊಫೆಸರ್ ಗೋವಿಂದ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಖುಷಿ ಕುಮಾರ್, ಮೌಲ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು. ಮಯೂರಿ ವಂದಿಸಿದರು.

Related posts

ನೀಟ್ ಫಲಿತಾಂಶ ಪ್ರಕಟ: ರಾಷ್ಟ್ರಮಟ್ಟದಲ್ಲಿ ಕ್ರಿಯೇಟಿವ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಎಸ್.ಡಿ.ಪಿ.ಐ ಕುವೆಟ್ಟು ಬ್ಲಾಕ್ ಸಮಿತಿ ವತಿಯಿಂದ ರಸ್ತೆ ದುರಸ್ಥಿಗೆ ಆಗ್ರಹಿಸಿ ಪ್ರತಿಭಟನೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಹಿಂದೂ ಕಮಿಟಿ ಹಾರ್ಝಿಲಿಯ ಇಸ್ರೇಲ್ ಸಂಘಟನೆಯಿಂದ ವೈದ್ಯಕೀಯ ನೆರವು ಹಸ್ತಾಂತರ-ಅಶಕ್ತ ಕುಟುಂಬಕ್ಕೆ ಆರ್ಥಿಕ ಸಹಕಾರ

Suddi Udaya

ನಿಡಿಗಲ್: ನಡ್ವಾಲ್ ಸಿರಿಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿಯಲ್ಲಿ ಮೊಬೈಲ್ ಅಸೋಸಿಯೇಶನ್ ನಿಂದ ಲಕ್ಕಿ ಕೂಪನ್ ಡ್ರಾ

Suddi Udaya
error: Content is protected !!