September 6, 2026
Uncategorizedಪ್ರಮುಖ ಸುದ್ದಿವರದಿ

ಎಸ್. ಡಿ. ಎಮ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

ಉಜಿರೆ: ಪ್ರತಿಯೊಂದೂ ದಿನಾಚರಣೆಯ ಹಿಂದಿನ ಉದ್ದೇಶ ಸ್ಪಷ್ಟವಾಗಿ ಅರ್ಥಮಾಡಿಕೊಂಡು ಅದನ್ನು ನಿತ್ಯಾನುಷ್ಠಾನಕ್ಕೆ ಕಾರ್ಯ ತತ್ಪರವಾದಾಗ ಮಾತ್ರ ಆ ದಿನದ ಆಚರಣೆಯು ಸಾರ್ಥಕ ವಾಗುತ್ತದೆ ಎಂದು ಎಸ್. ಡಿ. ಎಮ್ ಪದವಿ ಪೂರ್ವ ಕಾಲೇಜಿನ ಪ್ರಚಾರ್ಯರಾದ ಪ್ರಮೋದ್ ಕುಮಾರ್ ಅಭಿಪ್ರಾಯ ಪಟ್ಟರು.

ಅವರು ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಪರಿಸರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ಯಾವುದೇ ಆಚರಣೆಗಳು ಕೇವಲ ಆಚರಣೆಗಷ್ಟೇ ಸೀಮಿತವಾಗಿ ಇರಬಾರದು. ಒಂದು ದಿನದ ಸಂಭ್ರಮ ಕ್ಕೆ ಅಥವಾ ಆಚರಣೆಗೆ ನಾವು ಸೀಮಿತವಾಗಬಾರದು, ಆ ಆಚರಣೆಯ ಹಿನ್ನೆಲೆ ನಮ್ಮ ಮನದಲ್ಲಿ ಗಟ್ಟಿಯಾಗಬೇಕು ಹಾಗೂ ಅದು ನಿರಂತರವಾಗಿರಬೇಕು, ಸಸಿ ನಾಟಿ ಮಾಡಿ ಅದನ್ನು ಹಾಗೆಯೇ ಬಿಡಬಾರದು ಅದರ ಬಗ್ಗೆ ನಿರಂತರ ಕಾಳಜಿ ವಹಿಸಿ ತಮ್ಮದೇ ಸ್ವಂತ ಎನ್ನುವ ರೀತಿಯಲ್ಲಿ ಅದನ್ನು ನಿರಂತರ ಪೋಷಿಸಬೇಕು ಆವಾಗಲೇ ನಿಮ್ಮ ಕಾರ್ಯ ಸಾರ್ಥಕ ವಾಗುತ್ತದೆ ಹಾಗೂ ಪ್ರಯೋಜನಕಾರಿಯಾಗಿ ಸಮಾಜಕ್ಕೆ ಉಪಯುಕ್ತ ಕೊಡುಗೆ ನೀಡಲು ಸಹಾಯಕವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಕಾಲೇಜಿನ ಈ ವರ್ಷದ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಕಾರ್ಯ ಚಟುವಟಿಕೆಗಳನ್ನು ಗಿಡ ನೆಡುವುದರ ಮೂಲಕ ಉದ್ಘಾಟಿಸಲಾಯಿತು. ರೋವರ್ಸ್ ಮತ್ತು ರೇಂಜರ್ಸ್ ಲೇಡಿರ್ಸ್ ಗಳಾದ ಲಕ್ಷ್ಮೀಶ್ ಭಟ್ ಮತ್ತು ಅಂಕಿತಾ ಎಮ್ ಕೆ ಹಾಗೂ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ರಾಜು ಎ ಎ ಉಪಸ್ಥಿತರಿದ್ದರು.

Related posts

ಉರ್ಬಂದಗುಡ್ಡೆ ಫ್ರೆಂಡ್ಸ್ ಮರೋಡಿ ಬಳಗದವರಿಂದ ಪೆರಾಡಿ-ಮರೋಡಿ ಸಂಪರ್ಕ ರಸ್ತೆ ದುರಸ್ತಿ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ವಾಣಿಜ್ಯ ಕಟ್ಟಡಕ್ಕೆ ಮಳೆ ನೀರು ಸೋರದಂತೆ ಶೀಟ್ ಅಳವಡಿಸಲು ತಹಶೀಲ್ದಾರರಿಗೆ ಮನವಿ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಬೆಳ್ತಂಗಡಿ ಟೀಮ್ ನವಭಾರತ್ ವತಿಯಿಂದ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ

Suddi Udaya

ಡಿಕೆಶಿ ಮುಖ್ಯಮಂತ್ರಿ, ಇದು ಕಾರ್ಯಕರ್ತರ ಗೆಲುವು: ರಂಜನ್ ಜಿ ಗೌಡ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ

Suddi Udaya

ಪೆಟ್ರೋಲ್ ದರ ಏರಿಸುವ ಮೂಲಕ ರಾಜ್ಯಸರಕಾರದ ಬಣ್ಣ ಬಯಲಾಗಿದೆ : ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್

Suddi Udaya
error: Content is protected !!