25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ಟೀಂ ಅಭಯಹಸ್ತ ಆಯೋಜನಾ ಸಮಿತಿಯಿಂದ ಸುಲ್ಕೇರಿಮೊಗ್ರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ಹಾಗೂ ಕಲಿಕಾ ಸಾಮಾಗ್ರಿಗಳ ವಿತರಣೆ

ಬೆಳ್ತಂಗಡಿ: ಸೇವೆ ಸಂಘಟನೆ ಸಾಮರಸ್ಯದ ಧ್ಯೇಯವಾಕ್ಯದೊಂದಿಗೆ, ಸೇವೆಗಾಗಿ ಕ್ರೀಡೆ ಎಂಬ ಪರಿಕಲ್ಪನೆಯಡಿ ಕಳೆದ ಆರು ವರ್ಷಗಳಿಂದ ಸಮಾಜಮುಖಿ ಕಾರ್ಯ ನಡೆಸುತ್ತಿರುವ ಟೀಂ ಅಭಯಹಸ್ತ ಆಯೋಜನಾ ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಸುಲ್ಕೇರಿಮೊಗ್ರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ಹಾಗೂ ಕಲಿಕಾ ಸಾಮಾಗ್ರಿಗಳ ವಿತರಣಾ ಕಾರ್ಯಕ್ರಮ ಜೂ.7 ರಂದು ಜರುಗಿತು.


ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿದ ಸಂಘಟನೆಯ ಸ್ಥಾಪಕ ಸಂದೀಪ್ ಎಸ್ ನೀರಲ್ಕೆ ಅರ್ವರವರು “ಸಂಘಟನೆ ಅನೇಕ ವರ್ಷಗಳಿಂದ ಅಶಕ್ತರ, ಅನಾರೋಗ್ಯ ಪೀಡಿತರ, ಸ್ವ ಉದ್ಯೋಗ ಆಸಕ್ತ ಬಡವರ, ವಿದ್ಯಾರ್ಥಿಗಳ ಧ್ವನಿಯಾಗಿ ಸೇವಾ ಕಾರ್ಯ ನಡೆಸುತ್ತಿದೆ. ಗುರುಹಿರಿಯರ, ಊರವರ ಪ್ರೋತ್ಸಾಹ, ಸಹಕಾರ, ಮಾರ್ಗದರ್ಶನದಿಂದ ಸಂಘಟನೆ ಉತ್ತಮ ರೀತಿಯಲ್ಲಿ ಸಾಗಿಬರುತ್ತಿದೆ” ಎಂದರು
ಕಾರ್ಯಕ್ರಮದಲ್ಲಿ ಸಂಘಟನೆಯ ಸಲಹೆಗಾರ ರವೀಂದ್ರ ಬಿ ಅಮೀನ್, ಎಸ್ ಡಿ ಎಂ ಸಿ ಅಧ್ಯಕ್ಷೆ, ಮುಖ್ಯೋಪಾಧ್ಯಾಯರಾದ ಸುಬ್ರಹ್ಮಣ್ಯ ಭಟ್, ಶಿಕ್ಷಕರಾದ ನಾಗಭೂಷಣ್, ಶ್ರೀಮತಿ ಶಾಂತಿ, ಸಹಶಿಕ್ಷಕರು, ಸಂಘಟನೆಯ ಸದಸ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಕಳೆದ ರಾತ್ರಿ ಸುರಿದ ಗುಡುಗು ಸಹಿತ ಜೋರಾದ ಗಾಳಿ ಮಳೆ: ಮುಂಡಾಜೆ- ಕಲ್ಮಂಜದಲ್ಲಿ 2 ಮನೆಗಳಿಗೆ ಮರ ಬಿದ್ದು ಸಂಪೂರ್ಣ ಹಾನಿ

Suddi Udaya

ಬಾರ್ಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ರೈ ಆಯ್ಕೆ

Suddi Udaya

ಕೋರಂ ಕೊರತೆ ಹಾಗೂ ಇಲಾಖಾಧಿಕಾರಿಗಳ ಗೈರುಹಾಜರಿಯಲ್ಲಿ ರದ್ದುಗೊಂಡ ಮಡಂತ್ಯಾರು ಗ್ರಾಮಸಭೆ

Suddi Udaya

ಶಾಸಕ ಪೂಂಜರ ಕಚೇರಿ ಶ್ರಮಿಕಕ್ಕೆ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಭೇಟಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಬಳಂಜ ಶಾಲೆಯ ಹಳೆ ವಿದ್ಯಾರ್ಥಿ ಪ್ರವೀಣ್ ಜೈನ್ ಅವರಿಗೆ ಡಾಕ್ಟರೇಟ್ ಪದವಿ

Suddi Udaya
error: Content is protected !!