September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ಟೀಂ ಅಭಯಹಸ್ತ ಆಯೋಜನಾ ಸಮಿತಿಯಿಂದ ಸುಲ್ಕೇರಿಮೊಗ್ರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ಹಾಗೂ ಕಲಿಕಾ ಸಾಮಾಗ್ರಿಗಳ ವಿತರಣೆ

ಬೆಳ್ತಂಗಡಿ: ಸೇವೆ ಸಂಘಟನೆ ಸಾಮರಸ್ಯದ ಧ್ಯೇಯವಾಕ್ಯದೊಂದಿಗೆ, ಸೇವೆಗಾಗಿ ಕ್ರೀಡೆ ಎಂಬ ಪರಿಕಲ್ಪನೆಯಡಿ ಕಳೆದ ಆರು ವರ್ಷಗಳಿಂದ ಸಮಾಜಮುಖಿ ಕಾರ್ಯ ನಡೆಸುತ್ತಿರುವ ಟೀಂ ಅಭಯಹಸ್ತ ಆಯೋಜನಾ ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಸುಲ್ಕೇರಿಮೊಗ್ರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ಹಾಗೂ ಕಲಿಕಾ ಸಾಮಾಗ್ರಿಗಳ ವಿತರಣಾ ಕಾರ್ಯಕ್ರಮ ಜೂ.7 ರಂದು ಜರುಗಿತು.


ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿದ ಸಂಘಟನೆಯ ಸ್ಥಾಪಕ ಸಂದೀಪ್ ಎಸ್ ನೀರಲ್ಕೆ ಅರ್ವರವರು “ಸಂಘಟನೆ ಅನೇಕ ವರ್ಷಗಳಿಂದ ಅಶಕ್ತರ, ಅನಾರೋಗ್ಯ ಪೀಡಿತರ, ಸ್ವ ಉದ್ಯೋಗ ಆಸಕ್ತ ಬಡವರ, ವಿದ್ಯಾರ್ಥಿಗಳ ಧ್ವನಿಯಾಗಿ ಸೇವಾ ಕಾರ್ಯ ನಡೆಸುತ್ತಿದೆ. ಗುರುಹಿರಿಯರ, ಊರವರ ಪ್ರೋತ್ಸಾಹ, ಸಹಕಾರ, ಮಾರ್ಗದರ್ಶನದಿಂದ ಸಂಘಟನೆ ಉತ್ತಮ ರೀತಿಯಲ್ಲಿ ಸಾಗಿಬರುತ್ತಿದೆ” ಎಂದರು
ಕಾರ್ಯಕ್ರಮದಲ್ಲಿ ಸಂಘಟನೆಯ ಸಲಹೆಗಾರ ರವೀಂದ್ರ ಬಿ ಅಮೀನ್, ಎಸ್ ಡಿ ಎಂ ಸಿ ಅಧ್ಯಕ್ಷೆ, ಮುಖ್ಯೋಪಾಧ್ಯಾಯರಾದ ಸುಬ್ರಹ್ಮಣ್ಯ ಭಟ್, ಶಿಕ್ಷಕರಾದ ನಾಗಭೂಷಣ್, ಶ್ರೀಮತಿ ಶಾಂತಿ, ಸಹಶಿಕ್ಷಕರು, ಸಂಘಟನೆಯ ಸದಸ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಗೌರವ

Suddi Udaya

ಉಜಿರೆ: ಪಾಕತಜ್ಞ ಕೃಷ್ಣಮೂರ್ತಿ ರಾವ್ ನಿಧನ

Suddi Udaya

ಶಿಬಾಜೆ : ಭಂಡಿಹೊಳೆ ಶ್ರೀಹರಿ ದಾಮಲೆ ನಿಧನ

Suddi Udaya

ವಂದೇ ಮಾತರಂ’ ನನ್ನ ಸೇವೆ ದೇಶಕ್ಕಾಗಿ.. ನೇತ್ರಾವತಿ ನದಿ ಸ್ವಚ್ಛತಾ ಕಾರ್ಯಕ್ರಮ ಆರಂಭ : ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಸೇರಿದಂತೆ ಹಲವು ಸಂಘಟನೆಗಳ ಸಾಥ್

Suddi Udaya

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಅಪ್ರಾಪ್ತ ಬಾಲಕರ ಮೇಲೆ ಪ್ರಕರಣ ದಾಖಲು

Suddi Udaya

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya
error: Content is protected !!