24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ  ಎಸ್. ಡಿ. ಎಮ್ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಮೌಲ್ಯ ಆಧಾರಿತ ತರಗತಿಗಳ ಉದ್ಘಾಟನೆ

ಶ್ರೀ ಕೃಷ್ಣ ಭಗವದ್ಗೀತೆ ಬೋಧನೆ ಮೂಲಕ ಗುರುವಾದ, ವಸುದೇವ ದೇವಕಿಗೆ ನೀಡಿದ ಪರಮಾನಂದದಿಂದ  ಜಗದ್ಗುರು ಎನಿಸಿಕೊಂಡ ಪರಮಾತ್ಮನಾದ.ಯಾವ ವಿದ್ಯಾರ್ಥಿಗಳು ತಂದೆ, ತಾಯಿ,ಗುರುಗಳಿಗೆ ಭಕ್ತಿ,ಪ್ರೀತಿ, ವಿಧೇಯತೆ ತೋರುವರೋ ಅಂತವರು ಉತ್ತರೋತ್ತರ ಅಭಿವೃದ್ದಿ ಹೊಂದುವರು. ಮೌಲ್ಯತುಂಬಿದ ಬದುಕು ಎಲ್ಲಕ್ಕಿಂತ ಶ್ರೇಷ್ಠ.  ದುರ್ಗುಣಗಳಿಂದ ದೂರ ಇದ್ದು ತಪ್ಪುಗಳನ್ನು ಒಪ್ಪಿಕೊಂಡು ಮುಂದೆ ತಪ್ಪಾಗದಂತೆ ಸಾಗುವ ಮನಸ್ಥಿತಿ ಬೆಳಿಸಿಕೊಳ್ಳಬೇಕು.ವಾದ -ವಿವಾದದಲ್ಲಿ ದಿನ ಕಳೆಯದೆ ಕೆಲಸದ ಮೂಲಕ ಸಾಧನೆ ತೋರುವವರಾಗಬೇಕು ,ಮಾತಿಗಿಂತ ಮೌನವೇ ಬೆಲೆಯುಳ್ಳದ್ದು ಎಂಬಂತೆ ಎಲ್ಲಿ ಅವಶ್ಯವೋ ಅಲ್ಲಿ ಮಾತ್ರವೇ  ಮಾತಿರಲಿ.ಅಂಕ ಗಳಿಕೆಯೊಂದಿಗೆ ಮೌಲ್ಯಧಾರಿತ ಬದುಕಿನ ಗಳಿಕೆಯು ಬಹುಮುಖ್ಯ ಎಂದು ಎಸ್. ಡಿ.ಎಮ್ ಪದವಿ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥರಾಗಿರುವ ಡಾ. ಶ್ರೀಧರ್ ಎನ್ ಭಟ್ ಹೇಳಿದರು.

 ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಸತಿ ಪದವಿಪೂರ್ವ ಕಾಲೇಜಿನಲ್ಲಿ ‘ಮೌಲ್ಯಧಾರಿತ ತರಗತಿಗಳ ಉದ್ಘಾಟನೆ’ ನೆರವೇರಿಸಿ ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿದರು.

 ಕಾಲೇಜಿನ ಪ್ರಾಚಾರ್ಯರಾದ ಸುನೀಲ್ ಪಂಡಿತ್ ಇವರು ಎಸ್. ಡಿ. ಎಮ್. ಸಂಸ್ಥೆ ಮೌಲ್ಯಧಾರಿತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ವರ್ಷಪೂರ್ತಿ ಮೌಲ್ಯಯುತ ಕಾರ್ಯಕ್ರಮಗಳನ್ನು ನಡೆಸಲಿದೆ ಇದರ ಪ್ರಯೋಜನ ಪಡೆದುಕೊಳ್ಳಿ ಹಾಗೂ ಬದುಕಲ್ಲಿ ಅಳವಡಿಸಿಕೊಳ್ಳಿ ಎಂದರು.

 ಕಾಲೇಜಿನ ನಿಲಯ ಪಾಲಕರು ಹಾಗೂ ದೈಹಿಕ ಶಿಕ್ಷಕರಾಗಿರುವ ಲಕ್ಷ್ಮಣ್ ಗೌಡ ಜಿ. ಉಪಸ್ಥಿತರಿದ್ದರು.

ಕಾಲೇಜಿನ ಗಣಿತಶಾಸ್ತ್ರ ಉಪನ್ಯಾಸಕರಾದ ಕೃಷ್ಣಪ್ರಸಾದ್ ನಿರೂಪಿಸಿ, ವಂದಿಸಿದರು.

Related posts

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾಂಗ್ರೇಸ್ ಪಕ್ಷದ ಚುನಾವಣಾ ಕಛೇರಿಯ ಉದ್ಘಾಟನೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಶ್ವಥಕಟ್ಟೆ ನಿರ್ಮಾಣದ ಶಿಲಾನ್ಯಾಸ

Suddi Udaya

ಬೆಳ್ತಂಗಡಿ: ಮಿಷ್ ಮಷ್ ಫ್ಯಾನ್ಸಿಯಲ್ಲಿ ಲಕ್ಕಿ ಡ್ರಾ: ರೂ.499 ರ ಹೆಚ್ಚಿನ ಖರೀದಿಗೆ ಲಕ್ಕಿ ಕೂಪನ್

Suddi Udaya

ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನೇತ್ರಾ ಅಶೋಕ್, ಪ್ರ.ಕಾರ್ಯದರ್ಶಿಯಾಗಿ ಪ್ರೀತಿ ರತೀಶ್ ರಾವ್, ಕೋಶಾಧಿಕಾರಿಯಾಗಿ ರೇಖಾ ಸುಧೀರ್ ರಾವ್

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya
error: Content is protected !!