September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ  ಎಸ್. ಡಿ. ಎಮ್ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಮೌಲ್ಯ ಆಧಾರಿತ ತರಗತಿಗಳ ಉದ್ಘಾಟನೆ

ಶ್ರೀ ಕೃಷ್ಣ ಭಗವದ್ಗೀತೆ ಬೋಧನೆ ಮೂಲಕ ಗುರುವಾದ, ವಸುದೇವ ದೇವಕಿಗೆ ನೀಡಿದ ಪರಮಾನಂದದಿಂದ  ಜಗದ್ಗುರು ಎನಿಸಿಕೊಂಡ ಪರಮಾತ್ಮನಾದ.ಯಾವ ವಿದ್ಯಾರ್ಥಿಗಳು ತಂದೆ, ತಾಯಿ,ಗುರುಗಳಿಗೆ ಭಕ್ತಿ,ಪ್ರೀತಿ, ವಿಧೇಯತೆ ತೋರುವರೋ ಅಂತವರು ಉತ್ತರೋತ್ತರ ಅಭಿವೃದ್ದಿ ಹೊಂದುವರು. ಮೌಲ್ಯತುಂಬಿದ ಬದುಕು ಎಲ್ಲಕ್ಕಿಂತ ಶ್ರೇಷ್ಠ.  ದುರ್ಗುಣಗಳಿಂದ ದೂರ ಇದ್ದು ತಪ್ಪುಗಳನ್ನು ಒಪ್ಪಿಕೊಂಡು ಮುಂದೆ ತಪ್ಪಾಗದಂತೆ ಸಾಗುವ ಮನಸ್ಥಿತಿ ಬೆಳಿಸಿಕೊಳ್ಳಬೇಕು.ವಾದ -ವಿವಾದದಲ್ಲಿ ದಿನ ಕಳೆಯದೆ ಕೆಲಸದ ಮೂಲಕ ಸಾಧನೆ ತೋರುವವರಾಗಬೇಕು ,ಮಾತಿಗಿಂತ ಮೌನವೇ ಬೆಲೆಯುಳ್ಳದ್ದು ಎಂಬಂತೆ ಎಲ್ಲಿ ಅವಶ್ಯವೋ ಅಲ್ಲಿ ಮಾತ್ರವೇ  ಮಾತಿರಲಿ.ಅಂಕ ಗಳಿಕೆಯೊಂದಿಗೆ ಮೌಲ್ಯಧಾರಿತ ಬದುಕಿನ ಗಳಿಕೆಯು ಬಹುಮುಖ್ಯ ಎಂದು ಎಸ್. ಡಿ.ಎಮ್ ಪದವಿ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥರಾಗಿರುವ ಡಾ. ಶ್ರೀಧರ್ ಎನ್ ಭಟ್ ಹೇಳಿದರು.

 ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಸತಿ ಪದವಿಪೂರ್ವ ಕಾಲೇಜಿನಲ್ಲಿ ‘ಮೌಲ್ಯಧಾರಿತ ತರಗತಿಗಳ ಉದ್ಘಾಟನೆ’ ನೆರವೇರಿಸಿ ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿದರು.

 ಕಾಲೇಜಿನ ಪ್ರಾಚಾರ್ಯರಾದ ಸುನೀಲ್ ಪಂಡಿತ್ ಇವರು ಎಸ್. ಡಿ. ಎಮ್. ಸಂಸ್ಥೆ ಮೌಲ್ಯಧಾರಿತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ವರ್ಷಪೂರ್ತಿ ಮೌಲ್ಯಯುತ ಕಾರ್ಯಕ್ರಮಗಳನ್ನು ನಡೆಸಲಿದೆ ಇದರ ಪ್ರಯೋಜನ ಪಡೆದುಕೊಳ್ಳಿ ಹಾಗೂ ಬದುಕಲ್ಲಿ ಅಳವಡಿಸಿಕೊಳ್ಳಿ ಎಂದರು.

 ಕಾಲೇಜಿನ ನಿಲಯ ಪಾಲಕರು ಹಾಗೂ ದೈಹಿಕ ಶಿಕ್ಷಕರಾಗಿರುವ ಲಕ್ಷ್ಮಣ್ ಗೌಡ ಜಿ. ಉಪಸ್ಥಿತರಿದ್ದರು.

ಕಾಲೇಜಿನ ಗಣಿತಶಾಸ್ತ್ರ ಉಪನ್ಯಾಸಕರಾದ ಕೃಷ್ಣಪ್ರಸಾದ್ ನಿರೂಪಿಸಿ, ವಂದಿಸಿದರು.

Related posts

ಬೆಳ್ತಂಗಡಿ ಪ.ಪಂ. ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಗರ್ಡಾಡಿ ಯುವಕ ಮಂಡಲ ವತಿಯಿಂದ 34ನೇ ವರ್ಷದ ಮೊಸರು ಕುಡಿಕೆ ಉತ್ಸವ: ಅಧ್ಯಕ್ಷರಾಗಿ ಹರೀಶ್ ಪೂಜಾರಿ ಬರಮೇಲು

Suddi Udaya

ಯಕ್ಷಭಾರತಿ ಸಂಸ್ಥೆಯ ವತಿಯಿಂದ ಕೋಳ್ಯೂರು ರಾಮಚಂದ್ರ ರಾವ್ ರವರಿಗೆ ಸನ್ಮಾನ

Suddi Udaya

ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ಬಳಂಜರವರು ನಂದಗೋಕುಲ ಗೋಶಾಲೆಗೆ ಭೇಟಿ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಂದ್ರಾಳ ಸೈಂಟ್ ಸಾವ್ಯೂ ಶಾಲಾ ವಿದ್ಯಾರ್ಥಿ ಅಶ್ರಿಫಾ ಫಾತಿಮಾ ನೆರಿಯ ಅವರಿಗೆ ಅತ್ಯುನ್ನತ್ತ ಅಂಕ

Suddi Udaya

ಸುದ್ದಿ ಉದಯ ಪತ್ರಿಕೆಯ ಪ್ರತಿನಿಧಿ ಕರುಣಾಕರ ಶಿಶಿಲ ರವರ ನೂತನ ಗೃಹ “ಮತ್ಸ್ಯ ಕೃಪಾ” ಕ್ಕೆ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ, ಶುಭಹಾರೈಕೆ

Suddi Udaya
error: Content is protected !!