23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ  ಎಸ್. ಡಿ. ಎಮ್ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಮೌಲ್ಯ ಆಧಾರಿತ ತರಗತಿಗಳ ಉದ್ಘಾಟನೆ

ಶ್ರೀ ಕೃಷ್ಣ ಭಗವದ್ಗೀತೆ ಬೋಧನೆ ಮೂಲಕ ಗುರುವಾದ, ವಸುದೇವ ದೇವಕಿಗೆ ನೀಡಿದ ಪರಮಾನಂದದಿಂದ  ಜಗದ್ಗುರು ಎನಿಸಿಕೊಂಡ ಪರಮಾತ್ಮನಾದ.ಯಾವ ವಿದ್ಯಾರ್ಥಿಗಳು ತಂದೆ, ತಾಯಿ,ಗುರುಗಳಿಗೆ ಭಕ್ತಿ,ಪ್ರೀತಿ, ವಿಧೇಯತೆ ತೋರುವರೋ ಅಂತವರು ಉತ್ತರೋತ್ತರ ಅಭಿವೃದ್ದಿ ಹೊಂದುವರು. ಮೌಲ್ಯತುಂಬಿದ ಬದುಕು ಎಲ್ಲಕ್ಕಿಂತ ಶ್ರೇಷ್ಠ.  ದುರ್ಗುಣಗಳಿಂದ ದೂರ ಇದ್ದು ತಪ್ಪುಗಳನ್ನು ಒಪ್ಪಿಕೊಂಡು ಮುಂದೆ ತಪ್ಪಾಗದಂತೆ ಸಾಗುವ ಮನಸ್ಥಿತಿ ಬೆಳಿಸಿಕೊಳ್ಳಬೇಕು.ವಾದ -ವಿವಾದದಲ್ಲಿ ದಿನ ಕಳೆಯದೆ ಕೆಲಸದ ಮೂಲಕ ಸಾಧನೆ ತೋರುವವರಾಗಬೇಕು ,ಮಾತಿಗಿಂತ ಮೌನವೇ ಬೆಲೆಯುಳ್ಳದ್ದು ಎಂಬಂತೆ ಎಲ್ಲಿ ಅವಶ್ಯವೋ ಅಲ್ಲಿ ಮಾತ್ರವೇ  ಮಾತಿರಲಿ.ಅಂಕ ಗಳಿಕೆಯೊಂದಿಗೆ ಮೌಲ್ಯಧಾರಿತ ಬದುಕಿನ ಗಳಿಕೆಯು ಬಹುಮುಖ್ಯ ಎಂದು ಎಸ್. ಡಿ.ಎಮ್ ಪದವಿ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥರಾಗಿರುವ ಡಾ. ಶ್ರೀಧರ್ ಎನ್ ಭಟ್ ಹೇಳಿದರು.

 ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಸತಿ ಪದವಿಪೂರ್ವ ಕಾಲೇಜಿನಲ್ಲಿ ‘ಮೌಲ್ಯಧಾರಿತ ತರಗತಿಗಳ ಉದ್ಘಾಟನೆ’ ನೆರವೇರಿಸಿ ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿದರು.

 ಕಾಲೇಜಿನ ಪ್ರಾಚಾರ್ಯರಾದ ಸುನೀಲ್ ಪಂಡಿತ್ ಇವರು ಎಸ್. ಡಿ. ಎಮ್. ಸಂಸ್ಥೆ ಮೌಲ್ಯಧಾರಿತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ವರ್ಷಪೂರ್ತಿ ಮೌಲ್ಯಯುತ ಕಾರ್ಯಕ್ರಮಗಳನ್ನು ನಡೆಸಲಿದೆ ಇದರ ಪ್ರಯೋಜನ ಪಡೆದುಕೊಳ್ಳಿ ಹಾಗೂ ಬದುಕಲ್ಲಿ ಅಳವಡಿಸಿಕೊಳ್ಳಿ ಎಂದರು.

 ಕಾಲೇಜಿನ ನಿಲಯ ಪಾಲಕರು ಹಾಗೂ ದೈಹಿಕ ಶಿಕ್ಷಕರಾಗಿರುವ ಲಕ್ಷ್ಮಣ್ ಗೌಡ ಜಿ. ಉಪಸ್ಥಿತರಿದ್ದರು.

ಕಾಲೇಜಿನ ಗಣಿತಶಾಸ್ತ್ರ ಉಪನ್ಯಾಸಕರಾದ ಕೃಷ್ಣಪ್ರಸಾದ್ ನಿರೂಪಿಸಿ, ವಂದಿಸಿದರು.

Related posts

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಚಾಮಾ೯ಡಿ : ಮರಳು ಸಾಗಾಟದ ಲಾರಿ ವಶ

Suddi Udaya

ನಾಲ್ಕೂರು: ಕುದ್ರೋಟ್ಟು ಬೊಕ್ಕಸ ಪರಿಸರದಲ್ಲಿ ಕಾಡುಕೋಣ ಚಿರತೆ ಹಾವಳಿ: ಕರುಣಾಕರ ಹೆಗ್ಡೆಯವರ ಬೇಡಿಕೆಗೆ ಸ್ಪಂದಿಸಿ ದಾರಿದೀಪ ಅಳವಡಿಸಿದ ಬಳಂಜ ಗ್ರಾ.ಪಂ.

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರದಲ್ಲಿ ಸಾನಿಧ್ಯ ದೈವಗಳ ವಾರ್ಷಿಕ ಪ್ರತಿಷ್ಠಾಪನಾ ಮಹೋತ್ಸವ

Suddi Udaya

ಶಿರ್ಲಾಲು: ಕೈತ್ಯರಡ್ಡ ನಿವಾಸಿ ಲೀಲಾ ನಿಧನ

Suddi Udaya

ಫೆ.20 ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಸಾಂಸ್ಕೃತಿಕ ವೈಭವ

Suddi Udaya
error: Content is protected !!