September 6, 2026
ಗ್ರಾಮಾಂತರ ಸುದ್ದಿ

ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆ

ಬೆಳ್ತಂಗಡಿ : ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆಯು ಜೂ:08 ರಂದು ಅಧ್ಯಕ್ಷರಾದ ಶ್ರೀಮತಿ ಸುಭಾಷಿಣಿ.ಕೆ.ರವರ ಅಧ್ಯಕ್ಷತೆಯಲ್ಲಿ ಜರಗಿತು.
ವಾರ್ಡ್ ಸಭೆ ಮತ್ತು ಗ್ರಾಮ ಸಭೆ ನಡೆಸುವ ಕುರಿತು ಚರ್ಚಿಸಲಾಯಿತು. ಮಳೆಗಾಲ ಪ್ರಾರಂಭದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಚರಂಡಿ ಮತ್ತು ಚರಲ್ ಹಾಕಿ ರಸ್ತೆಗಳನ್ನು ದುರಸ್ಥಿ ಪಡಿಸಲು ವಾರ್ಡ್ ಸದಸ್ಯರಿಗೆ ಮಾಹಿತಿ ನೀಡಿ ಮಾಡುವುದೆಂದು ತೀರ್ಮಾನಿಸಲಾಯಿತು. ಸರಕಾರದ ವಿವಿದ ಇಲಾಖೆಗಳ ಸುತ್ತೋಲೆಗಳನ್ನು ಸಭೆಗೆ ಓದಿ ಹೇಳಲಾಯಿತು. ರಸ್ತೆ ಬದಿಯಲ್ಲಿರುವ ಅಪಾಯದಂಚಿನ ಮರಗಳನ್ನು ಕಡಿಯಲು ಅರಣ್ಯ ಇಲಾಖೆಗೆ ಪತ್ರ ಬರೆಯುವುದೆಂದು ತೀರ್ಮಾನಿಸಲಾಯಿತು. ನ್ಯಾಯ ಸಮಿತಿಗೆ ಬಂದ ವಿವಿದ ಅರ್ಜಿಗಳನ್ನು ಸ್ಥಳ ತನಿಖೆ ನಡೆಸುವುದೆಂದು ದಿನಾಂಕ ನಿಗದಿಪಡಿಸಲಾಯಿತು. ಏಲಂ ಅವಧಿ ಮುಗಿದ ಮೀನು ಮಾರುಕಟ್ಟೆಯನ್ನು ಏಲಂ ಮಾಡುವುದೆಂದು ತೀರ್ಮಾನಿಸಲಾಯಿತು. ಅಭಿವೃದ್ಧಿ ಅಧಿಕಾರಿಗಳು ಎಲ್ಲಾ ಸದಸ್ಯರು ಹಾಜರಿದ್ದರು. ಕಾರ್ಯದರ್ಶಿ ಕುಂಞ ಕೆ ಸ್ವಾಗತಿಸಿ ಕೊನೆಯಲ್ಲಿ ದನ್ಯವಾದವಿತ್ತರು.

Related posts

ರೇಷ್ಮೆರೋಡ್: ಅಶ್ವತನಗರ ನವರಾತ್ರಿ ಪೂಜೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ವತಿಯಿಂದ ಉಚಿತ ದಂತ ಚಿಕಿತ್ಸೆ ಮತ್ತು ಡೆಂಟಲ್ ಪಿಲ್ಲಿಂಗ್ಸ್ ಹಾಗೂ ವೀಲ್ ಚೇರ್ ವಿತರಣಾ ಕಾರ್ಯಕ್ರಮ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗೆಡೆಯವರಿಂದ ಸಂವಾದ ಕಾರ್ಯಕ್ರಮ

Suddi Udaya

ಪದ್ಮುಂಜ ಸಿಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡ ನಿಧನ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಯಂತ್ರೋಪಕರಣ ಖರೀದಿ ಪ್ರಶಸ್ತಿ

Suddi Udaya
error: Content is protected !!