22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆ

ಬೆಳ್ತಂಗಡಿ : ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆಯು ಜೂ:08 ರಂದು ಅಧ್ಯಕ್ಷರಾದ ಶ್ರೀಮತಿ ಸುಭಾಷಿಣಿ.ಕೆ.ರವರ ಅಧ್ಯಕ್ಷತೆಯಲ್ಲಿ ಜರಗಿತು.
ವಾರ್ಡ್ ಸಭೆ ಮತ್ತು ಗ್ರಾಮ ಸಭೆ ನಡೆಸುವ ಕುರಿತು ಚರ್ಚಿಸಲಾಯಿತು. ಮಳೆಗಾಲ ಪ್ರಾರಂಭದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಚರಂಡಿ ಮತ್ತು ಚರಲ್ ಹಾಕಿ ರಸ್ತೆಗಳನ್ನು ದುರಸ್ಥಿ ಪಡಿಸಲು ವಾರ್ಡ್ ಸದಸ್ಯರಿಗೆ ಮಾಹಿತಿ ನೀಡಿ ಮಾಡುವುದೆಂದು ತೀರ್ಮಾನಿಸಲಾಯಿತು. ಸರಕಾರದ ವಿವಿದ ಇಲಾಖೆಗಳ ಸುತ್ತೋಲೆಗಳನ್ನು ಸಭೆಗೆ ಓದಿ ಹೇಳಲಾಯಿತು. ರಸ್ತೆ ಬದಿಯಲ್ಲಿರುವ ಅಪಾಯದಂಚಿನ ಮರಗಳನ್ನು ಕಡಿಯಲು ಅರಣ್ಯ ಇಲಾಖೆಗೆ ಪತ್ರ ಬರೆಯುವುದೆಂದು ತೀರ್ಮಾನಿಸಲಾಯಿತು. ನ್ಯಾಯ ಸಮಿತಿಗೆ ಬಂದ ವಿವಿದ ಅರ್ಜಿಗಳನ್ನು ಸ್ಥಳ ತನಿಖೆ ನಡೆಸುವುದೆಂದು ದಿನಾಂಕ ನಿಗದಿಪಡಿಸಲಾಯಿತು. ಏಲಂ ಅವಧಿ ಮುಗಿದ ಮೀನು ಮಾರುಕಟ್ಟೆಯನ್ನು ಏಲಂ ಮಾಡುವುದೆಂದು ತೀರ್ಮಾನಿಸಲಾಯಿತು. ಅಭಿವೃದ್ಧಿ ಅಧಿಕಾರಿಗಳು ಎಲ್ಲಾ ಸದಸ್ಯರು ಹಾಜರಿದ್ದರು. ಕಾರ್ಯದರ್ಶಿ ಕುಂಞ ಕೆ ಸ್ವಾಗತಿಸಿ ಕೊನೆಯಲ್ಲಿ ದನ್ಯವಾದವಿತ್ತರು.

Related posts

ಬೆಳ್ತಂಗಡಿ: ಬಸ್ಸಿನಲ್ಲಿ ಮಹಿಳೆಯರ ಬಗ್ಗೆ ಅಶ್ಲೀಲ ಪದ ಬಳಕೆ:ಮೂವರ ಮೇಲೆ ಅಪರಿಚಿತರಿಂದ ಹಲ್ಲೆ; ಪ್ರಕರಣ ದಾಖಲು

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಕ್ರೀಡಾ ದಿನದ ಮಹತ್ವದ ಕುರಿತು ಕಾರ್ಯಕ್ರಮ

Suddi Udaya

ವಾಣಿ ಕಾಲೇಜು: ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ‘ವಿದ್ಯಾ ಪ್ರವೇಶಂ’ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್ ವತಿಯಿಂದ ನಂದಗೋಕುಲ ಗೋಶಾಲೆಗೆ ದೇಣಿಗೆ ವಿತರಣೆ

Suddi Udaya

ಕಡಿರುದ್ಯಾವರ : ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯೆಯ ಮನೆ ದುರಸ್ತಿ ಕಾರ್ಯ ನಡೆಸಿದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು

Suddi Udaya

ಶಾಸಕ ಹರೀಶ್ ಪೂಂಜರಿಂದ “ಕಲಾಟಿಯನ್ ಟೈಗರ್ಸ್” ಲೋಗೋ ಅನಾವರಣ

Suddi Udaya
error: Content is protected !!