22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ಟೀಂ ಅಭಯಹಸ್ತ ಆಯೋಜನಾ ಸಮಿತಿಯಿಂದ ಸುಲ್ಕೇರಿಮೊಗ್ರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ಹಾಗೂ ಕಲಿಕಾ ಸಾಮಾಗ್ರಿಗಳ ವಿತರಣೆ

ಬೆಳ್ತಂಗಡಿ: ಸೇವೆ ಸಂಘಟನೆ ಸಾಮರಸ್ಯದ ಧ್ಯೇಯವಾಕ್ಯದೊಂದಿಗೆ, ಸೇವೆಗಾಗಿ ಕ್ರೀಡೆ ಎಂಬ ಪರಿಕಲ್ಪನೆಯಡಿ ಕಳೆದ ಆರು ವರ್ಷಗಳಿಂದ ಸಮಾಜಮುಖಿ ಕಾರ್ಯ ನಡೆಸುತ್ತಿರುವ ಟೀಂ ಅಭಯಹಸ್ತ ಆಯೋಜನಾ ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಸುಲ್ಕೇರಿಮೊಗ್ರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ಹಾಗೂ ಕಲಿಕಾ ಸಾಮಾಗ್ರಿಗಳ ವಿತರಣಾ ಕಾರ್ಯಕ್ರಮ ಜೂ.7 ರಂದು ಜರುಗಿತು.


ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿದ ಸಂಘಟನೆಯ ಸ್ಥಾಪಕ ಸಂದೀಪ್ ಎಸ್ ನೀರಲ್ಕೆ ಅರ್ವರವರು “ಸಂಘಟನೆ ಅನೇಕ ವರ್ಷಗಳಿಂದ ಅಶಕ್ತರ, ಅನಾರೋಗ್ಯ ಪೀಡಿತರ, ಸ್ವ ಉದ್ಯೋಗ ಆಸಕ್ತ ಬಡವರ, ವಿದ್ಯಾರ್ಥಿಗಳ ಧ್ವನಿಯಾಗಿ ಸೇವಾ ಕಾರ್ಯ ನಡೆಸುತ್ತಿದೆ. ಗುರುಹಿರಿಯರ, ಊರವರ ಪ್ರೋತ್ಸಾಹ, ಸಹಕಾರ, ಮಾರ್ಗದರ್ಶನದಿಂದ ಸಂಘಟನೆ ಉತ್ತಮ ರೀತಿಯಲ್ಲಿ ಸಾಗಿಬರುತ್ತಿದೆ” ಎಂದರು
ಕಾರ್ಯಕ್ರಮದಲ್ಲಿ ಸಂಘಟನೆಯ ಸಲಹೆಗಾರ ರವೀಂದ್ರ ಬಿ ಅಮೀನ್, ಎಸ್ ಡಿ ಎಂ ಸಿ ಅಧ್ಯಕ್ಷೆ, ಮುಖ್ಯೋಪಾಧ್ಯಾಯರಾದ ಸುಬ್ರಹ್ಮಣ್ಯ ಭಟ್, ಶಿಕ್ಷಕರಾದ ನಾಗಭೂಷಣ್, ಶ್ರೀಮತಿ ಶಾಂತಿ, ಸಹಶಿಕ್ಷಕರು, ಸಂಘಟನೆಯ ಸದಸ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ನಾರಾವಿ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ

Suddi Udaya

ಕುಕ್ಕೇಡಿ ಗ್ರಾ.ಪಂ. ವತಿಯಿಂದ “ಆರೋಗ್ಯ ತಪಾಸಣಾ ಶಿಬಿರ”

Suddi Udaya

ಮದ್ದಡ್ಕ ನೆಲ್ಲಿಫಲ್ಕೆ ನಿವಾಸಿ ಬಾಬು ಮೊಗೇರ ನಿಧನ

Suddi Udaya
error: Content is protected !!