37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಪಂಚಾಯತ್ ರಾಜ್ ಇಲಾಖೆಯ ನಿವೃತ್ತ ಇಂಜಿನಿಯರ್ ತಮ್ಮನ ಗೌಡ ಪಾಟೀಲ್ ಅವರಿಗೆ ಸನ್ಮಾನ

ಪೆರಾಡಿ: ಮರೋಡಿ ಗ್ರಾಮ‌ಪಂಚಾಯತ್ ನ ಗ್ರಾಮ ಸಭೆಯಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಕಿರಿಯ ಅಭಿಯಂತರ ತಮ್ಮನ ಗೌಡ ಪಾಟೀಲ್ ಅವರನ್ನು ಗ್ರಾ.ಪಂ ವತಿಯಿಂದ ಸನ್ಮಾನಿಸಲಾಯಿತು.

ಹಲವಾರು ವರ್ಷಗಳಿಂದ ಮರೋಡಿ- ಪೆರಾಡಿ ಗ್ರಾಮದ ಅಭಿವೃದ್ಧಿಗೆ ತಮ್ಮನ ಪಾಟೀಲ್ ಅವರು ಇಂಜಿನಿಯರಿಂಗ್ ಇಲಾಖೆಯಿಂದ ಸಂಪೂರ್ಣ ಸಹಕಾರ ಹಾಗೂ ಮಾರ್ಗದರ್ಶನ ನೀಡಿದ್ದು ಇದೀಗ ಸೇವೆಯಿಂದ ನಿವೃತ್ತಗೊಂಡಿರುವ ಅವರ ಮುಂದಿನ ಜೀವನ ಸುಖಕರವಾಗಿರಲೆಂದು ಹಾರೈಸಿ ಮರೋಡಿ ಪಂ ಮಾಜಿ ಅಧ್ಯಕ್ಷ ಜಯಂತ್ ಕೋಟ್ಯಾನ್ ಹಾಗೂ ಮಂಜುಶ್ರೀ ಎಲೆಕ್ಟ್ರಿಕಲ್ ನ ಮಾಲಕ ರವಿ ಕುಲಾಲ್ ಸನ್ಮಾನ ನೇರವೇರಿಸಿದರು.

ಸನ್ಮಾನ ಸ್ವೀಕರಿಸಿ ತಮ್ಮನ ಗೌಡ ಪಾಟೀಲ್ ರವರು ಎಲ್ಲರ ಪ್ರೀತಿಗೆ ಧನ್ಯವಾದ ಅರ್ಪಿಸಿದರು.

ಈ ಸಂದರ್ಭದಲ್ಲಿ ಜಯಂತ್ ಕೋಟ್ಯಾನ್, ಹೇಮರಾಜ್ ಬೆಳ್ಳಿಬೀಡು,ಪಂ ಅಧ್ಯಕ್ಷೆ ಪದ್ಮಶ್ರೀ ಜೈನ್, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಕೆ.ಎನ್ ಚಂದ್ರಶೇಖರ್,ಪಂ.ಅ.ಅಧಿಕಾರಿ ,ಪಂ ಉಪಾಧ್ಯಕ್ಷ ಯಶೋಧರ ಆಚಾರ್ಯ, ಸದಸ್ಯರಾದ ರತ್ನಾಕರ ಬುಣ್ಣನ್,ಉಮೇಶ್,ಅಶೋಕ್ ,ಶುಭರಾಜ ಹೆಗ್ಡೆ, ಧನಲಕ್ಷ್ಮಿ,ಉಮಾವತಿ,ಸವಿತಾ,ಸುನಂದ,ಯಶೋಧ,ಪಂ ಸಿಬ್ವಂದಿ ಗಣೇಶ್, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಪ್ರತಿಷ್ಠಿತ ಸಿ.ಎಸ್.ಐ.ಆರ್ ನಿರ್ದೇಶಕ ಹುದ್ದೆಗೆ ಉಜಿರೆ ಕಾಲೇಜಿನ ಹಿರಿಯ ವಿದ್ಯಾರ್ಥಿ ನೇಮಕಾತಿ

Suddi Udaya

ಬೆಳ್ತಂಗಡಿ: ಬುರುಡೆ ಚಿನ್ನಯ್ಯ ಜೈಲಿನಿಂದ ಬಿಡುಗಡೆ

Suddi Udaya

18 ಬಿಜೆಪಿ ಶಾಸಕರ ಅಮಾನತು ವಾಪಸ್ ಪಡೆಯುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಕಲ್ಮಂಜ ಗ್ರಾ.ಪಂ. ವತಿಯಿಂದ ನಿಡಿಗಲ್ ಸೇತುವೆಯಲ್ಲಿ ಸಿಸಿಟಿವಿ ಅಳವಡಿಕೆ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸೈನಿಕರಿಗಾಗಿ ವಿಶೇಷ ದುವಾ ಪ್ರಾರ್ಥನೆ

Suddi Udaya

ಉದ್ಯಮಿ ಒಕ್ಕಲಿಗ ಸಂಸ್ಥೆ ಮಂಗಳೂರಿನಲ್ಲಿ ಶುಭಾರಂಭ

Suddi Udaya
error: Content is protected !!