23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಪಂಚಾಯತ್ ರಾಜ್ ಇಲಾಖೆಯ ನಿವೃತ್ತ ಇಂಜಿನಿಯರ್ ತಮ್ಮನ ಗೌಡ ಪಾಟೀಲ್ ಅವರಿಗೆ ಸನ್ಮಾನ

ಪೆರಾಡಿ: ಮರೋಡಿ ಗ್ರಾಮ‌ಪಂಚಾಯತ್ ನ ಗ್ರಾಮ ಸಭೆಯಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಕಿರಿಯ ಅಭಿಯಂತರ ತಮ್ಮನ ಗೌಡ ಪಾಟೀಲ್ ಅವರನ್ನು ಗ್ರಾ.ಪಂ ವತಿಯಿಂದ ಸನ್ಮಾನಿಸಲಾಯಿತು.

ಹಲವಾರು ವರ್ಷಗಳಿಂದ ಮರೋಡಿ- ಪೆರಾಡಿ ಗ್ರಾಮದ ಅಭಿವೃದ್ಧಿಗೆ ತಮ್ಮನ ಪಾಟೀಲ್ ಅವರು ಇಂಜಿನಿಯರಿಂಗ್ ಇಲಾಖೆಯಿಂದ ಸಂಪೂರ್ಣ ಸಹಕಾರ ಹಾಗೂ ಮಾರ್ಗದರ್ಶನ ನೀಡಿದ್ದು ಇದೀಗ ಸೇವೆಯಿಂದ ನಿವೃತ್ತಗೊಂಡಿರುವ ಅವರ ಮುಂದಿನ ಜೀವನ ಸುಖಕರವಾಗಿರಲೆಂದು ಹಾರೈಸಿ ಮರೋಡಿ ಪಂ ಮಾಜಿ ಅಧ್ಯಕ್ಷ ಜಯಂತ್ ಕೋಟ್ಯಾನ್ ಹಾಗೂ ಮಂಜುಶ್ರೀ ಎಲೆಕ್ಟ್ರಿಕಲ್ ನ ಮಾಲಕ ರವಿ ಕುಲಾಲ್ ಸನ್ಮಾನ ನೇರವೇರಿಸಿದರು.

ಸನ್ಮಾನ ಸ್ವೀಕರಿಸಿ ತಮ್ಮನ ಗೌಡ ಪಾಟೀಲ್ ರವರು ಎಲ್ಲರ ಪ್ರೀತಿಗೆ ಧನ್ಯವಾದ ಅರ್ಪಿಸಿದರು.

ಈ ಸಂದರ್ಭದಲ್ಲಿ ಜಯಂತ್ ಕೋಟ್ಯಾನ್, ಹೇಮರಾಜ್ ಬೆಳ್ಳಿಬೀಡು,ಪಂ ಅಧ್ಯಕ್ಷೆ ಪದ್ಮಶ್ರೀ ಜೈನ್, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಕೆ.ಎನ್ ಚಂದ್ರಶೇಖರ್,ಪಂ.ಅ.ಅಧಿಕಾರಿ ,ಪಂ ಉಪಾಧ್ಯಕ್ಷ ಯಶೋಧರ ಆಚಾರ್ಯ, ಸದಸ್ಯರಾದ ರತ್ನಾಕರ ಬುಣ್ಣನ್,ಉಮೇಶ್,ಅಶೋಕ್ ,ಶುಭರಾಜ ಹೆಗ್ಡೆ, ಧನಲಕ್ಷ್ಮಿ,ಉಮಾವತಿ,ಸವಿತಾ,ಸುನಂದ,ಯಶೋಧ,ಪಂ ಸಿಬ್ವಂದಿ ಗಣೇಶ್, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಅಕ್ಷಯ ಕೆರಿಯರ್ ಅಕಾಡೆಮಿಯ “ಡಿಪ್ಲೊಮ ಇನ್ ಏವಿಯೇಷನ್” ಶಾರ್ಟ್ ಟಾರ್ಮ್ ಕೋರ್ಸ್ ನ ಹೊಸ ಬ್ಯಾಚ್ ಪ್ರಾರಂಭ

Suddi Udaya

ಡಿ.31: ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ತೆಕ್ಕಾರು, ತಣ್ಣೀರುಪಂತ, ಕಣಿಯೂರು, ಕೊಯ್ಯೂರು ನಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಕುದ್ಯಾಡಿ ಸ. ಕಿ. ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಯುಗಾದಿ ಹಬ್ಬದ ಸಂಭ್ರಮ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಎ.30: ಲಾಯಿಲ 48ನೇ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!