23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ :ಶ್ರೀ ಧ .ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಸ್ತ್ರೀಯ ಸಂಗೀತ, ನೃತ್ಯ ತರಗತಿ ಆರಂಭ

ಧರ್ಮಸ್ಥಳ: ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ವಿಶೇಷ  ಒತ್ತು ನೀಡುವ ಸಲುವಾಗಿ ಧರ್ಮಸ್ಥಳದ  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಸ್ತ್ರೀಯ ಸಂಗೀತ ಹಾಗೂ ಶಾಸ್ತ್ರೀಯ ನೃತ್ಯದ ತರಗತಿಗಳ ಉದ್ಘಾಟನಾ ಸಮಾರಂಭ ಜೂ 7ರಂದು  ನೆರವೇರಿತು.   ಅದೇ ಶಾಲೆಯ ಹಳೆಯ ವಿದ್ಯಾರ್ಥಿನಿ ಭರತನಾಟ್ಯದಲ್ಲಿ ವಿಶೇಷ ಸಾಧನೆ ಮಾಡಿರುವ  ಕುಮಾರಿ ಧರಿತ್ರಿ ಭಿಡೆ ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು .                                                                                             

 ಈ ಸಂದರ್ಭದಲ್ಲಿ ಮಾತನಾಡಿದ  ಅವರು  ಮನಸ್ಸನ್ನು ಕೇಂದ್ರೀಕರಿಸಲು ನೃತ್ಯ ಹಾಗೂ ಸಂಗೀತ ಎರಡು ಉತ್ತಮ ಸಾಧನಗಳು. ಎರಡೂ  ಒಂದೇ ನಾಣ್ಯದ ಮುಖಗಳಿದ್ದಂತೆ. ಶ್ರದ್ಧೆ ಹಾಗೂ ಏಕಾಗ್ರತೆ ಇದ್ದರೆ ಬದುಕಿನಲ್ಲಿ ಏನನ್ನು ಬೇಕಾದರೂ ಸಾಧಿಸಬಹುದು. ಹಲವು ರೋಗಗಳಿಗೆ ಇದು ರಾಮಬಾಣವೂ ಹೌದು ಎಂದು ತನ್ನ ವೈಯಕ್ತಿಕ ಜೀವನದ ಹಲವು ಯಶಸ್ಸಿನ ಉದಾಹರಣೆಗಳನ್ನು ನೀಡಿ ಶುಭ ಕೋರಿದರು. .   ಶಾಸ್ತ್ರೀಯ ಸಂಗೀತದ ತರಬೇತುದಾರರಾಗಿರುವ ನಿವೃತ್ತ ಶಿಕ್ಷಕಿ  ಶ್ರೀಮತಿ ಮನೋರಮ ತೋಳ್ಪಡಿತ್ತಾಯ ವಿದ್ಯಾರ್ಥಿ ಜೀವನದಲ್ಲಿ ಸಂಗೀತದ ಮಹತ್ವವನ್ನು ವಿವರಿಸಿದರು. ಭರತನಾಟ್ಯದ ತರಭೇತುದಾರರಾದ ಶ್ರೀಮತಿ ವಿದ್ಯಾ ಟೋಸರ್ ನಾಟ್ಯದ ಆರಂಭಿಕ ಹಂತದ ವಿಧಾನ ತಿಳಿಸಿದರು.                                                   

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ. ಶಾಲೆಯಲ್ಲಿ ಸಂಗೀತ, ನೃತ್ಯ ತರಬೇತಿ ಆರಂಭಿಸಿದ ಉದ್ದೇಶ ,ವಿದ್ಯಾರ್ಥಿಗಳು ಅದನ್ನು ಸದುಪಯೋಗಪಡಿಸಿಕೊಳ್ಳುವ ರೀತಿ ಹಾಗೂ ಅದರ ಪರಿಣಾಮಗಳನ್ನು ಸವಿಸ್ತಾರವಾಗಿ ವಿವರಿಸಿದರು. ಆರಾಧ್ಯ ಪಿ ಜೋಶಿ  ನಿರೂಪಿಸಿದ  ಕಾರ್ಯಕ್ರಮದಲ್ಲಿ ಸನಾ ರಾಜೀವ್ ಸ್ವಾಗತಿಸಿ, ವೈಷ್ಣವಿ  ವಂದಿಸಿದರು . ಅತಿಥಿಗಳನ್ನು  ವಿದ್ಯಾರ್ಥಿಗಳಾದ  ಸಮ್ಯಕ್, ವಿದ್ವತ್ ಜೈನ್ ಮತ್ತು ಪ್ರಣವ್ ಜೋಯಿಷಾ ಪರಿಚಯಿಸಿದರು .ಶಾಲಾ ಶಿಕ್ಷಕರು, ವಿದ್ಯಾರ್ಥಿ ಪೋಷಕರು ಹಾಗೂ ವಿದ್ಯಾರ್ಥಿಗಳು  ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು 

Related posts

ಉಜಿರೆ ರುಡ್ ಸೆಟ್ ಸಂಸ್ಥೆಯ ಹುಟ್ಟು ಹಬ್ಬ ಮತ್ತು ವಿಶ್ವ ಯುವ ಕೌಶಲ್ಯ ದಿನಾಚರಣೆ

Suddi Udaya

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಟೆಂಪೋ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya

ಬೆಳಾಲು ಶ್ರೀ.ಧ. ಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya

ಜಿಲ್ಲಾ ಮಟ್ಟದ ಕ್ಲೇ ಮಾಡೆಲಿಂಗ್ ಸ್ಪರ್ಧೆ : ಅಂಡಿಂಜೆ ಸ.ಉ. ಪ್ರಾ.ಶಾಲೆ ವಿದ್ಯಾರ್ಥಿ ಹಾಷಿಕ್ ಪ್ರಥಮ ಸ್ಥಾನ

Suddi Udaya
error: Content is protected !!