ಜೆಸಿಐ ಬೆಳ್ತಂಗಡಿ ವತಿಯಿಂದ ವಾಣಿ ಆಂ.ಮಾ. ಶಾಲೆಯಲ್ಲಿ ಆಯೋಜಿಸಿದ ವಿಶ್ವ ಪರಿಸರ ದಿನಾಚರಣೆಯ ಸ್ಪರ್ಧೆಗಳ ಪ್ರಶಸ್ತಿ ವಿತರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಜೂ 5 ರಂದು ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ನಡೆಸಿದ ಚಿತ್ರಕಲಾ ಸ್ಪರ್ಧೆಯ ವಿಜೇತರುಗಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಪ್ರೌಢಶಾಲಾ ವಿಭಾಗದಿಂದ 9ನೇ ತರಗತಿಯ ಆಶೀಶ್ ಪಿ. ಆರ್ ಪ್ರಥಮ, 10ನೇ ತರಗತಿಯ ಸೃಷ್ಟಿ ಎಸ್ ದ್ವಿತೀಯ ಮತ್ತು ಅಭಿಜ್ಞ ತೃತೀಯ ಬಹುಮಾನ ಪಡೆದಿರುತ್ತಾರೆ.

ಪ್ರಾಥಮಿಕ ಶಾಲಾ ವಿಭಾಗದಿಂದ 7ನೇ ತರಗತಿಯ ದಿಶಾ ಪ್ರಥಮ ಸ್ಥಾನ, 7ನೇ ತರಗತಿಯ ಧನಲಕ್ಷ್ಮೀ ದ್ವಿತೀಯ ಸ್ಥಾನ ಮತ್ತು 6ನೇ ತರಗತಿಯ ವರ್ಷಿತ್ ಬಿ. ಶೆಟ್ಟಿ ತೃತೀಯ ಬಹುಮಾನ ಪಡೆದಿರುತ್ತಾರೆ.

ಪ್ರಶಸ್ತಿಗಳನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷ ಶಂಕರ್ ರಾವ್ ಕಾರ್ಯದರ್ಶಿ ಸುಧೀರ್ ಕೆ. ಎನ್ ನೀಡಿದರು.

ಕಾರ್ಯಕ್ರಮದಲ್ಲಿ ವಾಣಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಲಕ್ಷೀ ನಾರಾಯಣ ಕೆ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸುಹಾಸಿನಿ ಮತ್ತು ಶಾಲಾ ಶಿಕ್ಷಕ ವರ್ಗದವರು ಉಪಸ್ಥಿತರಿದ್ದರು.

Leave a Comment

error: Content is protected !!