23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಇ ಹುಂಡಿ ಉದ್ಘಾಟನೆ

ಸೌತಡ್ಕ :ಬಯಲು ಆಲಯ ಗಂಟೆ ಗಣಪತಿ ಎಂದೇ ಪ್ರಸಿದ್ಧವಾಗಿರುವ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಜೂ 8 ರಂದು ಕೆನರಾ ಬ್ಯಾಂಕಿನ ಪ್ರಾಯೋಜಕತ್ವದಲ್ಲಿ ಇ ಹುಂಡಿಯನ್ನು ಉದ್ಘಾಟಿಸಿ ಪ್ರಾರಂಭಿಸಲಾಯಿತು.

ದೇವಸ್ಥಾನದ ಇ ಹುಂಡಿಯನ್ನು ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡುವೆಟ್ನಾಯರು ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕೆನರಾ ಬ್ಯಾಂಕಿನ ಎಜಿಎಂ ನಂದೀಶ್ ರೆಡ್ಡಿ, ಕೆನರಾ ಬ್ಯಾಂಕಿನ ಕೊಕ್ಕಡ ಶಾಖೆಯ ಪ್ರಬಂಧಕರು ಅಂಕಿತ್ ಸಿಂಗ್, ನೆಲ್ಯಾಡಿ ಕೆನರಾ ಬ್ಯಾಂಕಿನ ಪ್ರಬಂಧಕರು ಬಿಪಿನ್, ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಅಧ್ಯಕ್ಷ ಕೃಷ್ಣ ಭಟ್ ಹಿತ್ತಿಲು, ಕೊಕ್ಕಡ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಕೊಕ್ಕಡ ಗ್ರಾಮ ಪಂಚಾಯತ್ ಅಧ್ಯಕ್ಷ ಯೋಗೀಶ್ ಆಲಂಬಿಲ, ಗ್ರಾಮ ಪಂಚಾಯತ್ ಸದಸ್ಯರಾದ ಪ್ರಭಾಕರ ಗೌಡ ಮಲ್ಲಿಗೆ ಮಜಲು, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪಾಡಿ, ಸದಸ್ಯರಾದ ಪುರಂದರ ಕಡಿರ, ಪ್ರಶಾಂತ ಪೂವಾಜೆ , ವಿಠಲ ಕುರ್ಲೆ, ಶ್ರೀಮತಿ ಯಶೋಧ ಉಮೇಶ ಶಬರಾಡಿ, ಶ್ರೀಮತಿ ಹೇಮಾವತಿ ಶಿವಾನಂದ ಸಂಕೇಶ, ಅರ್ಚಕರಾದ ಸುಬ್ರಹ್ಮಣ್ಯ ತೋಡ್ತಿಲ್ಲಾಯರು, ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾನಂದ ಹೆಗ್ಡೆ, ಕೊರಗಪ್ಪ ಶೆಟ್ಟಿ ಮುಂಡ್ರೆಲು, ದೇವಸ್ಥಾನದ ಸಿಬ್ಬಂದಿಗಳು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.

ಇಂದಿನಿಂದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಭಕ್ತಾದಿಗಳು ಕ್ಯೂಆರ್ ಕೋಡ್ ಬಳಸಿ ದೇವರಿಗೆ ಕಾಣಿಕೆಯನ್ನು ಸಮರ್ಪಿಸಬಹುದು.

Related posts

ಕಣಿಯೂರು ಗ್ರಾಮ ಪಂಚಾಯತ್ ನವೀಕರಣ ತಡೆಕೋರಿ ಸಲ್ಲಿಸಿದ್ದ ಅರ್ಜಿ ವಜಾ

Suddi Udaya

ಕುತ್ಲೂರು: ಅಳಂಬ ನಿವಾಸಿ ಶಾರದಾ ಗಣಪತಿ ನಿಧನ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಬೆಂಗಳೂರು ಹೈಕೋರ್ಟ್ ಗೆ ಹಾಜರು

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿ ವಿಭಾಗದ ವಿದ್ಯಾರ್ಥಿ‌‌ಸಂಘ ಉದ್ಘಾಟನಾ ಸಮಾರಂಭದೊಂದಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ – ಚಾಮಾ೯ಡಿ‌ ಹೆದ್ದಾರಿ ಕಾಮಗಾರಿ ಗುತ್ತಿಗೆಯಲ್ಲಿ ಬದಲಾವಣೆ: ಮೊಗ್ರೋಡಿ ಕನ್ ಸ್ಟ್ರಕ್ಷನ್ ಗೆ ನೀಡುವ ಕುರಿತು ನಿಧಾ೯ರ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ರವರ ಅಕೌಂಟ್ ಹ್ಯಾಕ್

Suddi Udaya
error: Content is protected !!