27.8 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಧಾರ್ಮಿಕವರದಿ

ಉಜಿರೆ ಶ್ರೀ ಜನಾರ್ದನಸ್ವಾಮಿ ಯಕ್ಷಗಾನ ಚಿಕ್ಕಮೇಳ ತಿರುಗಾಟ ಆರಂಭ

ಉಜಿರೆ: ಉಜಿರೆ ಶ್ರೀ ಜನಾರ್ದನ ಸ್ವಾಮಿ ಕೃಪಾಶ್ರಿತ ಯಕ್ಷಗಾನ ಚಿಕ್ಕಮೇಳ  ತನ್ನ ಮಳೆಗಾಲದ ಮನೆ ಮನೆ ತಿರುಗಾಟವನ್ನು ಜೂ 7 ರಂದು  ಶ್ರೀ ಜನಾರ್ದನ ಸ್ವಾಮಿ ಸನ್ನಿಧಿಯಲ್ಲಿ  ಗೆಜ್ಜೆ ಕಟ್ಟಿ ಸೇವಾ ಪ್ರದರ್ಶನ ನೀಡುವ ಮೂಲಕ  ಆರಂಭಿಸಿದೆ. ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರು  ಶ್ರೀ ದೇವರಲ್ಲಿ ಪ್ರಾರ್ಥಿಸಿ, ಚಿಕ್ಕ ಮೇಳದ ವ್ಯವಸ್ಥಾಪಕ, ಕಲಾವಿದ  ಚಂದ್ರಶೇಖರ ಧರ್ಮಸ್ಥಳ  ಅವರಿಗೆ  ಗೆಜ್ಜೆ ನೀಡಿ, ಶ್ರೀ ದೇವರ ಭಾವಚಿತ್ರ ನೀಡುವ   ಮೂಲಕ  ಮಳೆಗಾಲದ ಕಲಾ ಪ್ರದರ್ಶನ ತಿರುಗಾಟಕ್ಕೆ ಚಾಲನೆ ನೀಡಿದರು.

ಚಿಕ್ಕಮೇಳ ತಂಡ   ಮಳೆಗಾಲದ 3 ತಿಂಗಳ ಕಾಲ ಪ್ರತಿ ಸಂಜೆ 5.30 ರಿಂದ  ರಾತ್ರಿ 11.3೦ ರವರೆಗೆ ಬೆಳ್ತಂಗಡಿ ತಾಲೂಕಿನ ಮನೆ ಮನೆಗಳಿಗೆ ತೆರಳಿ  ಯಕ್ಷಗಾನ ಕಿರು ಪ್ರಸಂಗವನ್ನು ಪ್ರದರ್ಶಿಸಿ ಯಕ್ಷಗಾನ ಕಲೆಯನ್ನು ಪಸರಿಸುವ ಹಾಗೂ ಯುವ ಜನಾಂಗವನ್ನು ಕಲೆಯತ್ತ ಆಕರ್ಷಿಸುವ ಕಾರ್ಯದಲ್ಲಿ  ತೊಡಗಿಸಿಕೊಳ್ಳಲಿದೆ. 

ತಿರುಗಾಟದ ಚಿಕ್ಕಮೇಳ ತಂಡದಲ್ಲಿ ಹಾಡುಗಾರಿಕೆಯಲ್ಲಿ ಭಾಗವತರಾಗಿ  ಅಶೋಕ, ಹಿಮ್ಮೇಳದಲ್ಲಿ ನಾಗರಾಜ್ ,ಪುರುಷ ಪಾತ್ರದಲ್ಲಿ ನಿತಿನ್ ಶೆಟ್ಟಿ ಹಾಗೂ ಸ್ತ್ರೀ ಪಾತ್ರದಲ್ಲಿ ಮೇಳದ ಸಂಚಾಲಕ, ಧರ್ಮಸ್ಥಳ ಮೇಳದ ಕಲಾವಿದ ಶರತ್ ಶೆಟ್ಟಿ  ನಿರ್ವಹಿಸಲಿದ್ದಾರೆ.  ಉಜಿರೆ ಶ್ರೀ ಜನಾರ್ದನ ಸ್ವಾಮಿ ಸನ್ನಿಧಿಯಲ್ಲಿ ನಡೆದ ಸೇವಾ ಪ್ರದರ್ಶನದಲ್ಲಿ  ಭಾಗವತರಾದ ವೆಂಕಟ್ರಮಣ ರಾವ್ ಬನ್ನೆಂಗಳ, ಧರ್ಮಸ್ಥಳ ಮೇಳದ ವ್ಯವಸ್ಥಾಪಕ ಗಿರೀಶ್ ಹೆಗ್ಡೆ ಉಪಸ್ಥಿತರಿದ್ದು ಶುಭ ಕೋರಿದರು. ನಂತರ ತಂಡ ಪಡುವೆಟ್ಟು ಮನೆ ಹಾಗು ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥಸ್ವಾಮಿ ಸನ್ನಿಧಿಯಲ್ಲಿ ಸೇವಾ ಪ್ರದರ್ಶನ ನೀಡಿ ತಿರುಗಾಟಕ್ಕೆ  ಶುಭಾರಂಭಮಾಡಿತು.

Related posts

ಸವಣಾಲು : ರಿಕ್ಷಾಗೆ ಬೈಕ್ ಡಿಕ್ಕಿ: ಬೈಕ್‌ ಸವಾರ ಗಂಭೀರ ಗಾಯ

Suddi Udaya

ಕನ್ಯಾಡಿ ಸ್ವಾಮೀಜಿಯವರಿಂದ ರಾಮಕೃಷ್ಣ ಭಟ್ ಚೊಕ್ಕಾಡಿಯವರಿಗೆ ಸನ್ಮಾನ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ರವರಿಗೆ ಸೇವಾ ನಿವೃತ್ತಿ

Suddi Udaya

ಉಜಿರೆ: ಆಟೋರಿಕ್ಷಾ ಜಖಂ ಆದ ವಿಚಾರದಲ್ಲಿ ಪರಿಹಾರಕ್ಕಾಗಿ ಅನುಮತಿ ಪಡೆಯದೆ ಸಾರ್ವಜನಿಕ ರಸ್ತೆಯಲ್ಲಿ ಕೂತು ವಾಹನ ಸಂಚಾರಕ್ಕೆ ತಡೆಒಡ್ಡಿ ಜನಸಂಚಾರಕ್ಕೆ ಅಡ್ಡಿ ಉಂಟುಮಾಡಿದವರ ವಿರುದ್ಧ ಪ್ರಕರಣ ದಾಖಲು

Suddi Udaya

ಉಜಿರೆ: ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ಪುತ್ತಿಗೆ ಮಠದ ಪೀಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳರವರ ಭೇಟಿ

Suddi Udaya

ತೋಟತ್ತಾಡಿ ನಾರಾಯಣ ಧರ್ಮ ಪರಿಪಾಲನ ಯೋಗಂ ವತಿಯಿಂದ ನಡೆಯುವ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!