24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಧಾರ್ಮಿಕವರದಿ

ಉಜಿರೆ ಶ್ರೀ ಜನಾರ್ದನಸ್ವಾಮಿ ಯಕ್ಷಗಾನ ಚಿಕ್ಕಮೇಳ ತಿರುಗಾಟ ಆರಂಭ

ಉಜಿರೆ: ಉಜಿರೆ ಶ್ರೀ ಜನಾರ್ದನ ಸ್ವಾಮಿ ಕೃಪಾಶ್ರಿತ ಯಕ್ಷಗಾನ ಚಿಕ್ಕಮೇಳ  ತನ್ನ ಮಳೆಗಾಲದ ಮನೆ ಮನೆ ತಿರುಗಾಟವನ್ನು ಜೂ 7 ರಂದು  ಶ್ರೀ ಜನಾರ್ದನ ಸ್ವಾಮಿ ಸನ್ನಿಧಿಯಲ್ಲಿ  ಗೆಜ್ಜೆ ಕಟ್ಟಿ ಸೇವಾ ಪ್ರದರ್ಶನ ನೀಡುವ ಮೂಲಕ  ಆರಂಭಿಸಿದೆ. ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರು  ಶ್ರೀ ದೇವರಲ್ಲಿ ಪ್ರಾರ್ಥಿಸಿ, ಚಿಕ್ಕ ಮೇಳದ ವ್ಯವಸ್ಥಾಪಕ, ಕಲಾವಿದ  ಚಂದ್ರಶೇಖರ ಧರ್ಮಸ್ಥಳ  ಅವರಿಗೆ  ಗೆಜ್ಜೆ ನೀಡಿ, ಶ್ರೀ ದೇವರ ಭಾವಚಿತ್ರ ನೀಡುವ   ಮೂಲಕ  ಮಳೆಗಾಲದ ಕಲಾ ಪ್ರದರ್ಶನ ತಿರುಗಾಟಕ್ಕೆ ಚಾಲನೆ ನೀಡಿದರು.

ಚಿಕ್ಕಮೇಳ ತಂಡ   ಮಳೆಗಾಲದ 3 ತಿಂಗಳ ಕಾಲ ಪ್ರತಿ ಸಂಜೆ 5.30 ರಿಂದ  ರಾತ್ರಿ 11.3೦ ರವರೆಗೆ ಬೆಳ್ತಂಗಡಿ ತಾಲೂಕಿನ ಮನೆ ಮನೆಗಳಿಗೆ ತೆರಳಿ  ಯಕ್ಷಗಾನ ಕಿರು ಪ್ರಸಂಗವನ್ನು ಪ್ರದರ್ಶಿಸಿ ಯಕ್ಷಗಾನ ಕಲೆಯನ್ನು ಪಸರಿಸುವ ಹಾಗೂ ಯುವ ಜನಾಂಗವನ್ನು ಕಲೆಯತ್ತ ಆಕರ್ಷಿಸುವ ಕಾರ್ಯದಲ್ಲಿ  ತೊಡಗಿಸಿಕೊಳ್ಳಲಿದೆ. 

ತಿರುಗಾಟದ ಚಿಕ್ಕಮೇಳ ತಂಡದಲ್ಲಿ ಹಾಡುಗಾರಿಕೆಯಲ್ಲಿ ಭಾಗವತರಾಗಿ  ಅಶೋಕ, ಹಿಮ್ಮೇಳದಲ್ಲಿ ನಾಗರಾಜ್ ,ಪುರುಷ ಪಾತ್ರದಲ್ಲಿ ನಿತಿನ್ ಶೆಟ್ಟಿ ಹಾಗೂ ಸ್ತ್ರೀ ಪಾತ್ರದಲ್ಲಿ ಮೇಳದ ಸಂಚಾಲಕ, ಧರ್ಮಸ್ಥಳ ಮೇಳದ ಕಲಾವಿದ ಶರತ್ ಶೆಟ್ಟಿ  ನಿರ್ವಹಿಸಲಿದ್ದಾರೆ.  ಉಜಿರೆ ಶ್ರೀ ಜನಾರ್ದನ ಸ್ವಾಮಿ ಸನ್ನಿಧಿಯಲ್ಲಿ ನಡೆದ ಸೇವಾ ಪ್ರದರ್ಶನದಲ್ಲಿ  ಭಾಗವತರಾದ ವೆಂಕಟ್ರಮಣ ರಾವ್ ಬನ್ನೆಂಗಳ, ಧರ್ಮಸ್ಥಳ ಮೇಳದ ವ್ಯವಸ್ಥಾಪಕ ಗಿರೀಶ್ ಹೆಗ್ಡೆ ಉಪಸ್ಥಿತರಿದ್ದು ಶುಭ ಕೋರಿದರು. ನಂತರ ತಂಡ ಪಡುವೆಟ್ಟು ಮನೆ ಹಾಗು ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥಸ್ವಾಮಿ ಸನ್ನಿಧಿಯಲ್ಲಿ ಸೇವಾ ಪ್ರದರ್ಶನ ನೀಡಿ ತಿರುಗಾಟಕ್ಕೆ  ಶುಭಾರಂಭಮಾಡಿತು.

Related posts

ಇಂದು(ಜ.11) ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಉದ್ಘಾಟನೆ; ನಂಬಿಕೆ, ಪರಂಪರೆಯ ಶ್ರೇಷ್ಠ ಸ್ವರ್ಣೋದ್ಯಮ ಸಂಸ್ಥೆ ಮುಳಿಯ: ಸಂಪತ್ ಬಿ. ಸುವರ್ಣ; 50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಗ್ಯಾರಂಟಿ ಗಿಫ್ಟ್

Suddi Udaya

ಎಲ್‌ಸಿಆರ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ನೈಜ್ಯ ಆರೋಪಿಗಳ ಪತ್ತೆಯಾಗಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಬಂದಾರು: ಕುಂಟಾಲಪಲ್ಕೆ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ ಪುನರ್ ರಚನೆ

Suddi Udaya
error: Content is protected !!