July 23, 2026
Uncategorizedಪ್ರಮುಖ ಸುದ್ದಿವರದಿ

ಎಸ್. ಡಿ. ಎಮ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

ಉಜಿರೆ: ಪ್ರತಿಯೊಂದೂ ದಿನಾಚರಣೆಯ ಹಿಂದಿನ ಉದ್ದೇಶ ಸ್ಪಷ್ಟವಾಗಿ ಅರ್ಥಮಾಡಿಕೊಂಡು ಅದನ್ನು ನಿತ್ಯಾನುಷ್ಠಾನಕ್ಕೆ ಕಾರ್ಯ ತತ್ಪರವಾದಾಗ ಮಾತ್ರ ಆ ದಿನದ ಆಚರಣೆಯು ಸಾರ್ಥಕ ವಾಗುತ್ತದೆ ಎಂದು ಎಸ್. ಡಿ. ಎಮ್ ಪದವಿ ಪೂರ್ವ ಕಾಲೇಜಿನ ಪ್ರಚಾರ್ಯರಾದ ಪ್ರಮೋದ್ ಕುಮಾರ್ ಅಭಿಪ್ರಾಯ ಪಟ್ಟರು.

ಅವರು ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಪರಿಸರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ಯಾವುದೇ ಆಚರಣೆಗಳು ಕೇವಲ ಆಚರಣೆಗಷ್ಟೇ ಸೀಮಿತವಾಗಿ ಇರಬಾರದು. ಒಂದು ದಿನದ ಸಂಭ್ರಮ ಕ್ಕೆ ಅಥವಾ ಆಚರಣೆಗೆ ನಾವು ಸೀಮಿತವಾಗಬಾರದು, ಆ ಆಚರಣೆಯ ಹಿನ್ನೆಲೆ ನಮ್ಮ ಮನದಲ್ಲಿ ಗಟ್ಟಿಯಾಗಬೇಕು ಹಾಗೂ ಅದು ನಿರಂತರವಾಗಿರಬೇಕು, ಸಸಿ ನಾಟಿ ಮಾಡಿ ಅದನ್ನು ಹಾಗೆಯೇ ಬಿಡಬಾರದು ಅದರ ಬಗ್ಗೆ ನಿರಂತರ ಕಾಳಜಿ ವಹಿಸಿ ತಮ್ಮದೇ ಸ್ವಂತ ಎನ್ನುವ ರೀತಿಯಲ್ಲಿ ಅದನ್ನು ನಿರಂತರ ಪೋಷಿಸಬೇಕು ಆವಾಗಲೇ ನಿಮ್ಮ ಕಾರ್ಯ ಸಾರ್ಥಕ ವಾಗುತ್ತದೆ ಹಾಗೂ ಪ್ರಯೋಜನಕಾರಿಯಾಗಿ ಸಮಾಜಕ್ಕೆ ಉಪಯುಕ್ತ ಕೊಡುಗೆ ನೀಡಲು ಸಹಾಯಕವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಕಾಲೇಜಿನ ಈ ವರ್ಷದ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಕಾರ್ಯ ಚಟುವಟಿಕೆಗಳನ್ನು ಗಿಡ ನೆಡುವುದರ ಮೂಲಕ ಉದ್ಘಾಟಿಸಲಾಯಿತು. ರೋವರ್ಸ್ ಮತ್ತು ರೇಂಜರ್ಸ್ ಲೇಡಿರ್ಸ್ ಗಳಾದ ಲಕ್ಷ್ಮೀಶ್ ಭಟ್ ಮತ್ತು ಅಂಕಿತಾ ಎಮ್ ಕೆ ಹಾಗೂ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ರಾಜು ಎ ಎ ಉಪಸ್ಥಿತರಿದ್ದರು.

Related posts

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಪರ್ಸಿನಿಂದ ರೂ 2.16ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಸಾವಿರ ನಗದು ಕಳವು

Suddi Udaya

ಬೆಳ್ತಂಗಡಿ ಯುವವಾಹಿನಿಯ ವಾರ್ಷಿಕ ಮಹಾಸಭೆ: ಅಧ್ಯಕ್ಷರಾಗಿ ಲೀಲಾವತಿ ಪಣಕಜೆ, ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಿ.ಕೆ.

Suddi Udaya

ಲಾಯಿಲ: ಪಡ್ಲಾಡಿ ಶಾಲಾ ವಠಾರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಉತ್ಸವ

Suddi Udaya

ಉಜಿರೆ : ರತ್ನಮಾನಸ ಪ್ರವೇಶ ದ್ವಾರದ ಉದ್ಘಾಟನೆ ಹಾಗೂ 8 ನೇ ತರಗತಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಫೆ.23: ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಸಂಯುಕ್ತ ಆಶ್ರಯದಲ್ಲಿ 12ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಮ್ಯಾಟ್‌ ಕಬಡ್ಡಿ ಪಂದ್ಯಾಟ ಹಾಗೂ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಮೇ 17: ಉಜಿರೆಯಲ್ಲಿ 5ನೇ ವರ್ಷದ ಸಂಭ್ರಮದ ಕೇರಳ ಸಾಂಪ್ರದಾಯಿಕ ವಿಷುಕಣಿ ಆಚರಣೆ: ಶಾಸಕ ಹರೀಶ್ ಪೂಂಜ

Suddi Udaya
error: Content is protected !!