April 2, 2025
ಗ್ರಾಮಾಂತರ ಸುದ್ದಿ

ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆ

ಬೆಳ್ತಂಗಡಿ : ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆಯು ಜೂ:08 ರಂದು ಅಧ್ಯಕ್ಷರಾದ ಶ್ರೀಮತಿ ಸುಭಾಷಿಣಿ.ಕೆ.ರವರ ಅಧ್ಯಕ್ಷತೆಯಲ್ಲಿ ಜರಗಿತು.
ವಾರ್ಡ್ ಸಭೆ ಮತ್ತು ಗ್ರಾಮ ಸಭೆ ನಡೆಸುವ ಕುರಿತು ಚರ್ಚಿಸಲಾಯಿತು. ಮಳೆಗಾಲ ಪ್ರಾರಂಭದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಚರಂಡಿ ಮತ್ತು ಚರಲ್ ಹಾಕಿ ರಸ್ತೆಗಳನ್ನು ದುರಸ್ಥಿ ಪಡಿಸಲು ವಾರ್ಡ್ ಸದಸ್ಯರಿಗೆ ಮಾಹಿತಿ ನೀಡಿ ಮಾಡುವುದೆಂದು ತೀರ್ಮಾನಿಸಲಾಯಿತು. ಸರಕಾರದ ವಿವಿದ ಇಲಾಖೆಗಳ ಸುತ್ತೋಲೆಗಳನ್ನು ಸಭೆಗೆ ಓದಿ ಹೇಳಲಾಯಿತು. ರಸ್ತೆ ಬದಿಯಲ್ಲಿರುವ ಅಪಾಯದಂಚಿನ ಮರಗಳನ್ನು ಕಡಿಯಲು ಅರಣ್ಯ ಇಲಾಖೆಗೆ ಪತ್ರ ಬರೆಯುವುದೆಂದು ತೀರ್ಮಾನಿಸಲಾಯಿತು. ನ್ಯಾಯ ಸಮಿತಿಗೆ ಬಂದ ವಿವಿದ ಅರ್ಜಿಗಳನ್ನು ಸ್ಥಳ ತನಿಖೆ ನಡೆಸುವುದೆಂದು ದಿನಾಂಕ ನಿಗದಿಪಡಿಸಲಾಯಿತು. ಏಲಂ ಅವಧಿ ಮುಗಿದ ಮೀನು ಮಾರುಕಟ್ಟೆಯನ್ನು ಏಲಂ ಮಾಡುವುದೆಂದು ತೀರ್ಮಾನಿಸಲಾಯಿತು. ಅಭಿವೃದ್ಧಿ ಅಧಿಕಾರಿಗಳು ಎಲ್ಲಾ ಸದಸ್ಯರು ಹಾಜರಿದ್ದರು. ಕಾರ್ಯದರ್ಶಿ ಕುಂಞ ಕೆ ಸ್ವಾಗತಿಸಿ ಕೊನೆಯಲ್ಲಿ ದನ್ಯವಾದವಿತ್ತರು.

Related posts

ಸುಲ್ಕೇರಿಮೊಗ್ರು ಶಾಲಾಭಿವೃದ್ಧಿ ಸಮಿತಿಯಿಂದ ಅಳದಂಗಡಿ ಗ್ರಾ.ಪಂ. ನ ನೂತನ ಅಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಯುವವಾಹಿನಿ ಘಟಕದ ಅಧ್ಯಕ್ಷರಾಗಿ ಸದಾಶಿವ ಊರ, ಪ್ರಧಾನ ಕಾರ್ಯದರ್ಶಿಯಾಗಿ ಯಶೋಧರ ಆಯ್ಕೆ

Suddi Udaya

ಬಳ್ಳಮಂಜ ವಡ್ಡದಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ದೈವಗಳ ನೇಮೋತ್ಸವ

Suddi Udaya

ಮುಂಡಾಜೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಗುರುವಾಯನಕೆರೆಯ ‘ಕೆರೆ’ ಗೆ ಲೋಕಾಯುಕ್ತ ನ್ಯಾಯಾಮೂರ್ತಿ ಭೇಟಿ, ಪರಿಶೀಲನೆ

Suddi Udaya

ಕರಾಯ ಅಲ್ ಬಿರ್ರ್ ಸ್ಕೂಲಿನಲ್ಲಿ ಇಶ್ಕೇ ರಸೂಲ್ ಮೀಲಾದ್ ಕಾರ್ಯಕ್ರಮ: ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ

Suddi Udaya
error: Content is protected !!