23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆ

ಬೆಳ್ತಂಗಡಿ : ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆಯು ಜೂ:08 ರಂದು ಅಧ್ಯಕ್ಷರಾದ ಶ್ರೀಮತಿ ಸುಭಾಷಿಣಿ.ಕೆ.ರವರ ಅಧ್ಯಕ್ಷತೆಯಲ್ಲಿ ಜರಗಿತು.
ವಾರ್ಡ್ ಸಭೆ ಮತ್ತು ಗ್ರಾಮ ಸಭೆ ನಡೆಸುವ ಕುರಿತು ಚರ್ಚಿಸಲಾಯಿತು. ಮಳೆಗಾಲ ಪ್ರಾರಂಭದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಚರಂಡಿ ಮತ್ತು ಚರಲ್ ಹಾಕಿ ರಸ್ತೆಗಳನ್ನು ದುರಸ್ಥಿ ಪಡಿಸಲು ವಾರ್ಡ್ ಸದಸ್ಯರಿಗೆ ಮಾಹಿತಿ ನೀಡಿ ಮಾಡುವುದೆಂದು ತೀರ್ಮಾನಿಸಲಾಯಿತು. ಸರಕಾರದ ವಿವಿದ ಇಲಾಖೆಗಳ ಸುತ್ತೋಲೆಗಳನ್ನು ಸಭೆಗೆ ಓದಿ ಹೇಳಲಾಯಿತು. ರಸ್ತೆ ಬದಿಯಲ್ಲಿರುವ ಅಪಾಯದಂಚಿನ ಮರಗಳನ್ನು ಕಡಿಯಲು ಅರಣ್ಯ ಇಲಾಖೆಗೆ ಪತ್ರ ಬರೆಯುವುದೆಂದು ತೀರ್ಮಾನಿಸಲಾಯಿತು. ನ್ಯಾಯ ಸಮಿತಿಗೆ ಬಂದ ವಿವಿದ ಅರ್ಜಿಗಳನ್ನು ಸ್ಥಳ ತನಿಖೆ ನಡೆಸುವುದೆಂದು ದಿನಾಂಕ ನಿಗದಿಪಡಿಸಲಾಯಿತು. ಏಲಂ ಅವಧಿ ಮುಗಿದ ಮೀನು ಮಾರುಕಟ್ಟೆಯನ್ನು ಏಲಂ ಮಾಡುವುದೆಂದು ತೀರ್ಮಾನಿಸಲಾಯಿತು. ಅಭಿವೃದ್ಧಿ ಅಧಿಕಾರಿಗಳು ಎಲ್ಲಾ ಸದಸ್ಯರು ಹಾಜರಿದ್ದರು. ಕಾರ್ಯದರ್ಶಿ ಕುಂಞ ಕೆ ಸ್ವಾಗತಿಸಿ ಕೊನೆಯಲ್ಲಿ ದನ್ಯವಾದವಿತ್ತರು.

Related posts

ಉಜಿರೆ : ಅಜಿತ್ ನಗರ ನಿವಾಸಿ ವಾಲ್ಟರ್ ಕಾರ್ಲೊ ನಿಧನ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 233.13 ಕೋಟಿ ವ್ಯವಹಾರ, ಸದಸ್ಯರಿಗೆ ಶೇ. 15 ಡಿವಿಡೆಂಟ್

Suddi Udaya

ನಾಡಿನಾದ್ಯಂತ ನವರಾತ್ರಿ ಸಂಭ್ರಮ; ಕರಾವಳಿಯಲ್ಲಿ ಮಾರ್ನೆಮಿ ವೇಷಗಳ ಸದ್ದು ಆರಂಭ

Suddi Udaya

ಇಂದಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಇಬ್ರಾಹಿಂ ರವರ ಮನೆ ಕುಸಿತ

Suddi Udaya

ಕರ್ನಾಟಕ ರಾಜ್ಯ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಆಳ್ವಾಸ್ ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಶೈಕ್ಷಣಿಕ ಸಮ್ಮೇಳನ

Suddi Udaya
error: Content is protected !!