24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿ

ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆ

ಬೆಳ್ತಂಗಡಿ : ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆಯು ಜೂ:08 ರಂದು ಅಧ್ಯಕ್ಷರಾದ ಶ್ರೀಮತಿ ಸುಭಾಷಿಣಿ.ಕೆ.ರವರ ಅಧ್ಯಕ್ಷತೆಯಲ್ಲಿ ಜರಗಿತು.
ವಾರ್ಡ್ ಸಭೆ ಮತ್ತು ಗ್ರಾಮ ಸಭೆ ನಡೆಸುವ ಕುರಿತು ಚರ್ಚಿಸಲಾಯಿತು. ಮಳೆಗಾಲ ಪ್ರಾರಂಭದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಚರಂಡಿ ಮತ್ತು ಚರಲ್ ಹಾಕಿ ರಸ್ತೆಗಳನ್ನು ದುರಸ್ಥಿ ಪಡಿಸಲು ವಾರ್ಡ್ ಸದಸ್ಯರಿಗೆ ಮಾಹಿತಿ ನೀಡಿ ಮಾಡುವುದೆಂದು ತೀರ್ಮಾನಿಸಲಾಯಿತು. ಸರಕಾರದ ವಿವಿದ ಇಲಾಖೆಗಳ ಸುತ್ತೋಲೆಗಳನ್ನು ಸಭೆಗೆ ಓದಿ ಹೇಳಲಾಯಿತು. ರಸ್ತೆ ಬದಿಯಲ್ಲಿರುವ ಅಪಾಯದಂಚಿನ ಮರಗಳನ್ನು ಕಡಿಯಲು ಅರಣ್ಯ ಇಲಾಖೆಗೆ ಪತ್ರ ಬರೆಯುವುದೆಂದು ತೀರ್ಮಾನಿಸಲಾಯಿತು. ನ್ಯಾಯ ಸಮಿತಿಗೆ ಬಂದ ವಿವಿದ ಅರ್ಜಿಗಳನ್ನು ಸ್ಥಳ ತನಿಖೆ ನಡೆಸುವುದೆಂದು ದಿನಾಂಕ ನಿಗದಿಪಡಿಸಲಾಯಿತು. ಏಲಂ ಅವಧಿ ಮುಗಿದ ಮೀನು ಮಾರುಕಟ್ಟೆಯನ್ನು ಏಲಂ ಮಾಡುವುದೆಂದು ತೀರ್ಮಾನಿಸಲಾಯಿತು. ಅಭಿವೃದ್ಧಿ ಅಧಿಕಾರಿಗಳು ಎಲ್ಲಾ ಸದಸ್ಯರು ಹಾಜರಿದ್ದರು. ಕಾರ್ಯದರ್ಶಿ ಕುಂಞ ಕೆ ಸ್ವಾಗತಿಸಿ ಕೊನೆಯಲ್ಲಿ ದನ್ಯವಾದವಿತ್ತರು.

Related posts

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ದಯಾ ವಿಶೇಷ ಶಾಲೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಬಳಂಜ: ಮುಡಾಯಿಬೆಟ್ಟು ನಿವಾಸಿ ಲಲಿತ ನಿಧನ

Suddi Udaya

ಮಡಂತ್ಯಾರು: ಮಾಲಾಡಿ ಬಿ ಎಂ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ವತಿಯಿಂದ ಸ್ವಸಹಾಯ ಸಂಘದ ಸದಸ್ಯರಿಗೆ ಫಿನೈಲ್ ಹಾಗೂ ಸೋಪ್ ಆಯಿಲ್ ತರಬೇತಿ

Suddi Udaya

ಮಾ.10: ವೇಣೂರು 33ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!