July 23, 2026
ಗ್ರಾಮಾಂತರ ಸುದ್ದಿ

ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆ

ಬೆಳ್ತಂಗಡಿ : ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆಯು ಜೂ:08 ರಂದು ಅಧ್ಯಕ್ಷರಾದ ಶ್ರೀಮತಿ ಸುಭಾಷಿಣಿ.ಕೆ.ರವರ ಅಧ್ಯಕ್ಷತೆಯಲ್ಲಿ ಜರಗಿತು.
ವಾರ್ಡ್ ಸಭೆ ಮತ್ತು ಗ್ರಾಮ ಸಭೆ ನಡೆಸುವ ಕುರಿತು ಚರ್ಚಿಸಲಾಯಿತು. ಮಳೆಗಾಲ ಪ್ರಾರಂಭದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಚರಂಡಿ ಮತ್ತು ಚರಲ್ ಹಾಕಿ ರಸ್ತೆಗಳನ್ನು ದುರಸ್ಥಿ ಪಡಿಸಲು ವಾರ್ಡ್ ಸದಸ್ಯರಿಗೆ ಮಾಹಿತಿ ನೀಡಿ ಮಾಡುವುದೆಂದು ತೀರ್ಮಾನಿಸಲಾಯಿತು. ಸರಕಾರದ ವಿವಿದ ಇಲಾಖೆಗಳ ಸುತ್ತೋಲೆಗಳನ್ನು ಸಭೆಗೆ ಓದಿ ಹೇಳಲಾಯಿತು. ರಸ್ತೆ ಬದಿಯಲ್ಲಿರುವ ಅಪಾಯದಂಚಿನ ಮರಗಳನ್ನು ಕಡಿಯಲು ಅರಣ್ಯ ಇಲಾಖೆಗೆ ಪತ್ರ ಬರೆಯುವುದೆಂದು ತೀರ್ಮಾನಿಸಲಾಯಿತು. ನ್ಯಾಯ ಸಮಿತಿಗೆ ಬಂದ ವಿವಿದ ಅರ್ಜಿಗಳನ್ನು ಸ್ಥಳ ತನಿಖೆ ನಡೆಸುವುದೆಂದು ದಿನಾಂಕ ನಿಗದಿಪಡಿಸಲಾಯಿತು. ಏಲಂ ಅವಧಿ ಮುಗಿದ ಮೀನು ಮಾರುಕಟ್ಟೆಯನ್ನು ಏಲಂ ಮಾಡುವುದೆಂದು ತೀರ್ಮಾನಿಸಲಾಯಿತು. ಅಭಿವೃದ್ಧಿ ಅಧಿಕಾರಿಗಳು ಎಲ್ಲಾ ಸದಸ್ಯರು ಹಾಜರಿದ್ದರು. ಕಾರ್ಯದರ್ಶಿ ಕುಂಞ ಕೆ ಸ್ವಾಗತಿಸಿ ಕೊನೆಯಲ್ಲಿ ದನ್ಯವಾದವಿತ್ತರು.

Related posts

ಬಳಂಜ: ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಭಾರತಿ ಸಂತೋಷ್ ಆಯ್ಕೆ

Suddi Udaya

ಹಾಟ್‌ಮಿಕ್ಸ್ ಘಟಕದ ವಿರುದ್ಧ ಪಿಐಎಲ್ ಸಲ್ಲಿಕೆ : ಹೈಕೋರ್ಟ್ ನಿಂದ ನೋಟಿಸ್ ಆದೇಶ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ:ಸಿರಿ ಕೇಂದ್ರ ಕಛೇರಿಯಲ್ಲಿ ಸಮಗ್ರ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಸಂಸ್ಥಾಪನಾ ದಿನಾಚರಣೆ ಮತ್ತು ಧ್ವಜ ಚೀಟಿ ಬಿಡುಗಡೆ

Suddi Udaya

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya
error: Content is protected !!