September 6, 2026
ಗ್ರಾಮಾಂತರ ಸುದ್ದಿ

ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆ

ಬೆಳ್ತಂಗಡಿ : ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆಯು ಜೂ:08 ರಂದು ಅಧ್ಯಕ್ಷರಾದ ಶ್ರೀಮತಿ ಸುಭಾಷಿಣಿ.ಕೆ.ರವರ ಅಧ್ಯಕ್ಷತೆಯಲ್ಲಿ ಜರಗಿತು.
ವಾರ್ಡ್ ಸಭೆ ಮತ್ತು ಗ್ರಾಮ ಸಭೆ ನಡೆಸುವ ಕುರಿತು ಚರ್ಚಿಸಲಾಯಿತು. ಮಳೆಗಾಲ ಪ್ರಾರಂಭದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಚರಂಡಿ ಮತ್ತು ಚರಲ್ ಹಾಕಿ ರಸ್ತೆಗಳನ್ನು ದುರಸ್ಥಿ ಪಡಿಸಲು ವಾರ್ಡ್ ಸದಸ್ಯರಿಗೆ ಮಾಹಿತಿ ನೀಡಿ ಮಾಡುವುದೆಂದು ತೀರ್ಮಾನಿಸಲಾಯಿತು. ಸರಕಾರದ ವಿವಿದ ಇಲಾಖೆಗಳ ಸುತ್ತೋಲೆಗಳನ್ನು ಸಭೆಗೆ ಓದಿ ಹೇಳಲಾಯಿತು. ರಸ್ತೆ ಬದಿಯಲ್ಲಿರುವ ಅಪಾಯದಂಚಿನ ಮರಗಳನ್ನು ಕಡಿಯಲು ಅರಣ್ಯ ಇಲಾಖೆಗೆ ಪತ್ರ ಬರೆಯುವುದೆಂದು ತೀರ್ಮಾನಿಸಲಾಯಿತು. ನ್ಯಾಯ ಸಮಿತಿಗೆ ಬಂದ ವಿವಿದ ಅರ್ಜಿಗಳನ್ನು ಸ್ಥಳ ತನಿಖೆ ನಡೆಸುವುದೆಂದು ದಿನಾಂಕ ನಿಗದಿಪಡಿಸಲಾಯಿತು. ಏಲಂ ಅವಧಿ ಮುಗಿದ ಮೀನು ಮಾರುಕಟ್ಟೆಯನ್ನು ಏಲಂ ಮಾಡುವುದೆಂದು ತೀರ್ಮಾನಿಸಲಾಯಿತು. ಅಭಿವೃದ್ಧಿ ಅಧಿಕಾರಿಗಳು ಎಲ್ಲಾ ಸದಸ್ಯರು ಹಾಜರಿದ್ದರು. ಕಾರ್ಯದರ್ಶಿ ಕುಂಞ ಕೆ ಸ್ವಾಗತಿಸಿ ಕೊನೆಯಲ್ಲಿ ದನ್ಯವಾದವಿತ್ತರು.

Related posts

ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ

Suddi Udaya

ಪಿಲ್ಯ: ಸದಾಶಿವ ಆಠವಳೆ ನಿಧನ

Suddi Udaya

ಕಾಪಿನಡ್ಕ ಗೆಳೆಯರ ಬಳಗದ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಲತೀಶ್ ಎ.ಆರ್.,

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಹಾಗೂ ಬಂಗಾಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ: ಬೆಳ್ತಂಗಡಿ ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ದ್ವಿತೀಯ ಪಿಯುಸಿ ಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಅನನ್ಯ ರಿಗೆ ಜೆಸಿಐ ಕೊಕ್ಕಡ ಕಪಿಲ ಘಟಕದಿಂದ ಸನ್ಮಾನ

Suddi Udaya
error: Content is protected !!