July 23, 2026
ಸಾಧಕರು

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ ವೈದ್ಯಕೀಯ ನಿರ್ದೇಶಕಡಾ.ಮುರಳಿಕೃಷ್ಣ ಇರ್ವತ್ರಾಯರಿಗೆ”ವಿಕ ಹಿರೋಸ್” ಪ್ರಶಸ್ತಿ

ಬೆಳ್ತಂಗಡಿ: ತಾಲೂಕು ಕೇಂದ್ರದಿಂದ ಸುಮಾರು 18 ಕಿ ಮಿ ದೂರದ ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಕ್ಕಿಂಜೆ ಎಂಬ ಗ್ರಾಮೀಣ ಪ್ರದೇಶದಲ್ಲಿ,ಸುತ್ತಲಿನ ಹಲವಾರು ಗ್ರಾಮದ ಜನರಿಗೆ ಉತ್ಕೃಷ್ಟ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಾರಂಭವಾದ ಶ್ರೀ ಕೃಷ್ಣ ಆಸ್ಪತ್ರೆಯು ಇಂದು ಹಲವಾರು ವಿಶೇಷ ಸೌಲಭ್ಯಗಳನ್ನು,ನುರಿತ ವೈದ್ಯಕೀಯ ಸಿಬ್ಬಂದಿಗಳನ್ನೊಳಗೊಂಡು, ಆರೋಗ್ಯ ಸೇವೆ ಒದಗಿಸುತ್ತಿದ್ದು, ವಿಜಯಕರ್ನಾಟಕ ದೈನಿಕ ನೀಡುವ “ವಿಕ ಹಿರೋಸ್” ಎಂಬ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ.

ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಮುರಳಿಕೃಷ್ಣ ಇರ್ವತ್ರಾಯರು ವೈದ್ಯಕೀಯ ಕ್ಷೇತ್ರದ ಸವಾಲುಗಳ ನಡುವೆ,ಸುಮಾರು ಎಂಟು ವರ್ಷಗಳ ಹಿಂದೆ “ಶ್ರೀ ಕೃಷ್ಣ ಯೋಗಕ್ಷೇಮ” – ನಿಮ್ಮ ಮನೆಬಾಗಿಲಿಗೆ ವೈದ್ಯಕೀಯ ಸೇವೆ, ಎಂಬ ವಿನೂತನ ಯೋಜನೆಯನ್ನು ರೂಪಿಸಿ ಗ್ರಾಮೀಣ ಗುಡ್ಡಗಾಡು ಪ್ರದೇಶದ ಜನರಿಗೆ ಆಸ್ಪತ್ರೆಗೆ ಹೊಗುವುದು ಅಸಾಧ್ಯವಾದ, ಹಾಸಿಗೆ ಹಿಡಿದಂತ ರೋಗಿಗಳಿಗೆ ಅವರ ಮನೆಬಾಗಿಲಿಗೆ ಹೋಗಿ ಚಿಕಿತ್ಸೆ ನೀಡವುದಾಗಿದೆ.,ಅಲ್ಲದೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ಹಾಗೂ ಬಣಕಲ್ ನಲ್ಲಿ ಆಸ್ಪತ್ರೆಯನ್ನು ಸ್ಥಾಪಿಸಿ ಆರೋಗ್ಯ ಸೇವೆ ನೀಡುತ್ತಿದ್ದಾರೆ.

ಇವರ ಈ ವೈದ್ಯಕೀಯ ಕ್ಷೇತ್ರದ ವಿಶೇಷ ಸೇವೆಯನ್ನು ಗುರುತಿಸಿ ಕರ್ನಾಟಕದ ಹೆಮ್ಮೆಯ ದಿನಪತ್ರಿಕೆ ವಿಜಯಕರ್ನಾಟಕ ದೈನಿಕವು “ವಿಕ ಹಿರೋಸ್” ಎಂಬ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

Related posts

ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ

Suddi Udaya

ಎಂಜಿನಿಯರಿಂಗ್ ನಲ್ಲಿ ಅಳದಂಗಡಿಯ ಶ್ರೀಪ್ರಿಯಾಗೆ 7ನೆ ರ‌್ಯಾಂಕ್

Suddi Udaya

ಭಾರತೀಯ ಭೂ ಸೇನೆಯಲ್ಲಿ 32 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಕರ್ನಲ್ ನಿತಿನ್ ಆರ್. ಭಿಡೆಯವರಿಗೆ ವಿವಿಧ ಸಂಘ-ಸಂಸ್ಥೆಗಳಿಂದ ಅಭಿನಂದನೆ

Suddi Udaya

ಫೆ.1: ಭೂಸೇನೆಯಲ್ಲಿ 22 ವರ್ಷ ದೇಶ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಎ.ಸಿ.ಪಿ ಹವಾಲ್ದಾರ್ ದೇವಕುಮಾರ್ ಗೌಡರಿಗೆ ಹುಟ್ಟೂರಿನಲ್ಲಿ ಸ್ವಾಗತ ಅಭಿನಂದನಾ ಕಾರ್ಯಕ್ರಮ

Suddi Udaya

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ತೇಜಸ್ವಿನಿ ಪೂಜಾರಿಯವರಿಗೆ ಸನ್ಮಾನ

Suddi Udaya

ಗೇರುಕಟ್ಟೆ ದಿವಾಕರ ಆಚಾರ್ಯ ರವರಿಗೆ ಯಕ್ಷಗಾನದಲ್ಲಿ ಡಿಪ್ಲೊಮಾ ಪದವಿ ಪ್ರದಾನ

Suddi Udaya
error: Content is protected !!