25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮರಿಯಾಂಬಿಕ ಆಂ.ಮಾ.ಪ್ರೌ. ಶಾಲೆ ಶೈಕ್ಷಣಿಕ ವರ್ಷ ಉದ್ಘಾಟನೆ ಹಾಗೂ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

ಬಂಗಾಡಿ :ಬೆದ್ರಬೆಟ್ಟು ಇಲ್ಲಿನ ಪ್ರತಿಷ್ಟಿತ ಮರಿಯಾoಬಿಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಧಿಕೃತವಾಗಿ ಶಾಲಾ ಶೈಕ್ಷಣಿಕ ವರ್ಷ ಕ್ಕೆ ಪ್ರಾರಂಭ ಜೂ.8ರಂದು ನೀಡಲಾಯಿತು.

ಮಕ್ಕಳ ನಡಿಗೆ ಉತ್ತಮ ಫಲಿತಾ೦ಶದೆಡೆಗೆ ಎಂಬ ಘೋಷಣೆಯೊಂದಿಗೆ ದೀಪ ಬೆಳಗಿಸಿ ಶೈಕ್ಷಣಿಕ ವರ್ಷವನ್ನು ಕರ್ನಾಟಕ ಕ್ಯಾಥೋಲಿಕ್ ಎಜುಕೇಷನಲ್ ಆಂಡ್ ಚಾರಿಟೇಬಲ್ ಸೊಸೈಟಿ ಯ ಕಾರ್ಯದರ್ಶಿ ವಂ. ಶಾಜಿ ಮಾತ್ಯು ಉದ್ಘಾಟಿಸಿದರು. ಉತ್ತಮ ಫಲಿತಾಂಶದ ಕನಸನ್ನು ಆರಂಭದಲ್ಲೇ ಕಂಡು ಅದನ್ನು ಸಾಕಾರಗೊಳಿಸುವ ಪ್ರಯತ್ನಕ್ಕೆ ಶೈಕ್ಷಣಿಕ ವರ್ಷವನ್ನು ಮೀಸಲಿಟ್ಟಾಗ ಎಲ್ಲಾ ವಿದ್ಯಾರ್ಥಿಗಳಿಗೂ ಗುರಿ ಮುಟ್ಟಲು ಸಾಧ್ಯ ಎಂದು ಕಾರ್ಯದರ್ಶಿ ವಂ. ಶಾಜಿಮಾತ್ಯು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.

ಪ್ರಜಾಪ್ರಭುತ್ವ ವ್ಯವಸ್ಥೆ ಯ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಲು ಮತ್ತು ನಾಯಕತ್ವ ಗುಣ ಬೆಳೆಸಲು ವಿದ್ಯಾರ್ಥಿಮಂತ್ರಿ ಮಂಡಲದ ರಚನೆ ಚುನಾವಣೆ ಮೂಲಕ ನಡೆಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾದ ವಂ. ಸೇಬಾಸ್ಟಿನ್ ಸಿ ಕೆ, ಎಸ್ ಎಸ್ ಎಲ್ ಸಿ ಯಲ್ಲಿ ಉತ್ತಮ ಫಲಿತಾಂಶ ಪಡೆಯಲು ಸಹಕರಿಸಿದ ಅಧ್ಯಾಪಕರನ್ನು ಶಾಲಾ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಯಿನಿ ವಂ. ಭಗೀನಿ ಸಿ| ಶೆರಿನ್ ಎಸ್ ಎ ಬಿ ಎಸ್ ಉಪಸ್ಥಿತರಿದ್ದರು.

ಸಹ ಶಿಕ್ಷಕ ಕೃಷ್ಣಪ್ಪ ಕಾರ್ಯಕ್ರಮ ನಿರೂಪಿಸಿ, ಸಹ ಶಿಕ್ಷಕ ಜೀವನ್ ಪ್ರದೀಪ್ ಸ್ವಾಗತಿಸಿ, ಶಿಕ್ಷಕಿ ಮರೀಟಾ ವಂದಿಸಿದರು.

Related posts

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ರಕ್ಷಾಬಂಧನ

Suddi Udaya

ಸಜ್ಜನಿಕ ನಡೆ, ಸಂಘರ್ಷದ ಹೋರಾಟ, ಸೌಜನ್ಯಯುತ ರಾಯಭಾರಿತ್ವ ಹೊಂದಿದ ಅಪರೂಪದ ರಾಜಕಾರಣಿ ವಸಂತ ಬಂಗೇರ – ಶಾಸಕ ಹರೀಶ್ ಪೂಂಜ

Suddi Udaya

ಕನ್ಯಾಡಿ: ಕುರ್ಮಾಣಿಯ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಶಿಬಾಜೆ ಗ್ರಾ.ಪಂನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ವಿಶೇಷ ಗ್ರಾಮ ಸಭೆ

Suddi Udaya

ಚಾಮಾ೯ಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ: ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ವಾಹನ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

Suddi Udaya
error: Content is protected !!