30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಶ್ರೀ ಧ.ಮಂ. ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಬಾಷ್ (BOSCH) ಆಟೋಮೋಟಿವ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯಿಂದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಔದ್ಯೋಗಿಕ ನೇರ ಸಂದರ್ಶನ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಬಾಷ್ (BOSCH) ಆಟೋಮೋಟಿವ್ ಎಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವತಿಯಿಂದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಔದ್ಯೋಗಿಕ ನೇರ ಸಂದರ್ಶನ ನಡೆಯಿತು.

BOSCH ಸಂಸ್ಥೆಯ ಮಾನವ ಸಂಪನ್ಮೂಲ ಅಧಿಕಾರಿ ನರಸಿಂಹ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಮಾನವ ಸಂಪನ್ಮೂಲ ವಿಭಾಗದ ಸ್ವಸ್ತಿಕ್, ಅಸಿಸ್ಟೆಂಟ್ ಮ್ಯಾನೇಜರ್ ನವೀನ್, ಅಭಿಯಂತರರಾದ ಆಕಾಶ್ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ನ ಪ್ರಾಂಶುಪಾಲ ಸಂತೋಷ್ ಉಪಸ್ಥಿತರಿದ್ದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ನ ನೇಮಕಾತಿ ಅಧಿಕಾರಿ ಅಮರೇಶ್ ಹೆಬ್ಬಾರ್ ಸ್ವಾಗತಿಸಿದರು. ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಶ್ರೇಯಾಂಕ್ ಜೈನ್ ವಂದಿಸಿದರು.

Related posts

ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ: ಎನ್ ಎಸ್ ಎಸ್ ಮತ್ತು ಯುವಜನತೆ ವಿಶೇಷ ಉಪನ್ಯಾಸ

Suddi Udaya

ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್‌ ಮತ್ತು ರೇಂಜರ್ಸ್‌ ದಳದಿಂದ ಚಾರಣ, ಸ್ವಚ್ಚತಾ ಆಂದೋಲನ ಮತ್ತು ಯುವ ದಿನಾಚರಣೆ

Suddi Udaya

ಕಲ್ಮಂಜ: ಮೃತ್ಯುಂಜಯ-ನೇತ್ರಾವತಿ ನದಿಯ ಸಂಗಮ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಲೋಕಸಭಾ ಚುನಾವಣಾ ನೀತಿ ಸಂಹಿತೆ: ಗ್ರಾ.ಪಂ. ನೌಕರರ ಶಾಂತಿಯುತ ಪ್ರತಿಭಟನೆ ಮುಕ್ತಾಯ: ಆ.20 ರಿಂದ ಬೆಂಗಳೂರು ವಿಧಾನಸೌಧ ಮುಂಭಾಗ ಬೃಹತ್ ಪ್ರತಿಭಟನೆ

Suddi Udaya

ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಆಗಿ ಮತ್ತೆ ಪೃಥ್ವಿ ಸಾನಿಕಂ ನೇಮಕ

Suddi Udaya
error: Content is protected !!