July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಕೆ.ಎಸ್.ಎಸ್.ಎಫ್ ಬೊಳ್ಮನಾರ್ ಶಾಖೆಯ ವತಿಯಿಂದ ಕೆಮ್ಮಟೆ ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

ಬೆಳ್ತಂಗಡಿ ತಾಲೂಕು ಪುದುವೆಟ್ಟು ಗ್ರಾಮ ಸಮಸ್ತ ಧಾರ್ಮಿಕ ವಿಧ್ಯಾರ್ಥಿ ಸಂಘಟನೆಯಾದ ಎಸ್.ಕೆ.ಎಸ್.ಎಸ್.ಎಫ್ ಬೊಳ್ಮಿನಾರ್ ಶಾಖೆಯ ವತಿಯಿಂದ ಕೆಮ್ಮಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಕೆಮ್ಮಟೆ ಶಾಲೆಯಲ್ಲಿ ಎಸ್.ಕೆ.ಎಸ್.ಎಸ್.ಎಫ್ ಬೊಳ್ಮಿನಾರ್ ಶಾಖೆ ಅಧ್ಯಕ್ಷರು ಹಾಗೂ ಎಸ್.ಡಿ.ಎಮ್.ಸಿ ಅಧ್ಯಕ್ಷ ಅಬೂಬಕರ್ ಕುಂಟ್ಯಾನ ರವರ ಅಧ್ಯಕ್ಷತೆಯಲ್ಲಿ ಜರಗಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಎಸ್.ಕೆ.ಎಸ್.ಎಸ್.ಎಫ್ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ನಝೀರ್ ಅಝ್ಹರಿಯವರು ಸಂಘಟನೆಯ ಧ್ಯೇಯ ಉದ್ದೇಶಗಳು ಮತ್ತು ಕಾರ್ಯಚಟುವಟಿಕೆಗಳ ಬಗ್ಗೆ ವಿವರಿಸಿದರು. ಪುದುವೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ರಾಮೇಂದ್ರನ್ ಮೇರ್ಲ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಸಂಘಟನೆಯ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಶಾಲಾ ಮುಖ್ಯ ಶಿಕ್ಷಕಿಯವರಾದ ಶಿಲ್ಪಾ ಟೀಚರ್ ವಿದ್ಯಾರ್ಥಿಗಳಿಗಾಗಿ ಉಚಿತ ಪುಸ್ತಕ ವಿತರಿಸಿದ ಕಾರ್ಯವನ್ನು ಶ್ಲಾಘಿಸುತ್ತಾ ಸಂಘಟಕರಿಗೆ ಸ್ವಾಗತಿಸಿ ಅಭಿನಂದಿಸಿದರು.

ಪುದುವೆಟ್ಟು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಗಫೂರ್ ಬೊಳ್ಮನಾರ್, ಮಾಜಿ ಉಪಾಧ್ಯಕ್ಷರಾದ ಬೊಮ್ಮಣ್ಣ ಗೌಡ, ಸಮಾಜ ಸೇವಕರಾದ ಶಶಿ ಕರಂಬಾರು ಸಂಘಟನೆ ಈ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮಾಜಿ ಪಂಚಾಯತ್ ಸದಸ್ಯರಾದ ನಾರಾಯಣ ಪಿಲಿಕ್ಕಳ, ಹಳೇ ವಿದ್ಯಾರ್ಥಿ ಸಂಘದ ಸದಸ್ಯರಾದ ಬಾಲಕೃಷ್ಣ, ಊರಿನ ಹಿರಿಯರಾದ ಕೂಸಪ್ಪ ಗೌಡ, ಎಸ್.ಕೆ.ಎಸ್.ಎಸ್.ಎಫ್ ಶಾಖೆಯ ಉಪಾಧ್ಯಕ್ಷರಾದ ರಫೀಖ್ ಅಲಪ್ಪಾಯ,ಕೋಶಾಧಿಕಾರಿ ಬಶೀರ್ ಅಲಪ್ಪಾಯ, ಸದಸ್ಯರಾದ ಬಶೀರ್ ಕಾಪಾಯ, ಹಳೇ ವಿದ್ಯಾರ್ಥಿ ಸಂಘದ ಸದಸ್ಯರಾದ ಸುರೇಶ್ ಕುಂಟ್ಯಾಣ, ರಹಿಮಾನ್ ಅಲಪ್ಪಾಯ ಅತಿಥಿಗಳಾಗಿ ಭಾಗವಹಿಸಿದರು.

ಶಾಲಾ ಶಿಕ್ಷಕಿರಾದ ಪ್ರೀತಿಕುಮಾರಿ ,ಅಶ್ವಿನಿ,ಪವಿತ್ರ ಇತರ ಪೋಷಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಎಸ್.ಕೆ.ಎಸ್.ಎಸ್.ಎಫ್ ಶಾಖೆಯ ಸಂಘಟನಾ ಕಾರ್ಯದರ್ಶಿ ರಹೀಂ ಮಖ್ದೂಮಿ ಅಬೀರಿ ಪ್ರಾಸ್ತಾವಿಕ ಮಾತುಗಳನ್ನಾಡಿ ವಿದ್ಯಾರ್ಥಿಗಳಿಗೆ ಉಪದೇಶವಿತ್ತರು. ನಂತರ ವಿದ್ಯಾರ್ಥಿಗಳಿಗೆ ಪುಸ್ತಕ, ಪೆನ್ನು ಹಾಗೂ ಅಂಗನವಾಡಿ ವಿದ್ಯಾರ್ಥಿಗಳಿಗೆ ಸ್ಲೇಟು ಮತ್ತು ಬರಹ ಕಡ್ಡಿಗಳನ್ನು ವಿತರಿಸಲಾಯಿತು. ಎಸ್.ಕೆ.ಎಸ್.ಎಸ್.ಎಫ್ ಶಾಖಾ ಕಾರ್ಯದರ್ಶಿ ಸಿಧ್ಧೀಖ್ ಅಲಪ್ಪಾಯ ವಂದಿಸಿದರು.

Related posts

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ: ಹಸಿರು ವಾಣಿ ಮತ್ತು ಪುಷ್ಪಗನ್ನಡಿ ಸಮರ್ಪಣೆ

Suddi Udaya

ಕುಕ್ಕೇಡಿ ಸ್ಫೋಟ ಪ್ರಕರಣ: ಮೃತ ಕುಟುಂಬಕ್ಕೆ ಬೆಳ್ತಂಗಡಿ ಕೆಎಸ್ಎಂಸಿಎ ಯಿಂದ ಸಹಾಯ ಹಸ್ತ

Suddi Udaya

ನೆರಿಯದಲ್ಲಿ ಅಲ್ಟ್ರಾಟೆಕ್ ಸಿಮೆಂಟ್ ಗ್ರಾಹಕರ ಸಮಾವೇಶ

Suddi Udaya

ಜಿಲ್ಲಾ ವಕ್ಫ್‌ ಅಧಿಕಾರಿ ಹಾಜಿ ಅಬೂಬಕ್ಕರ್ ಸೇವೆಯಿಂದ ನಿವೃತ್ತಿ: ಕಾಜೂರು- ಕಿಲ್ಲೂರು ವತಿಯಿಂದ ಗೌರವಾರ್ಪಣೆ

Suddi Udaya

ಶ್ರೀ ಕ್ಷೇತ್ರ ಪಜೀರಡ್ಕದಲ್ಲಿ ಗಣಹೋಮ ಹಾಗೂ 31 ಜೋಡಿ ಸತ್ಯನಾರಾಯಣ ಪೂಜೆ

Suddi Udaya
error: Content is protected !!