23.5 C
ಪುತ್ತೂರು, ಬೆಳ್ತಂಗಡಿ
March 7, 2026
ಸಾಧಕರು

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ ವೈದ್ಯಕೀಯ ನಿರ್ದೇಶಕಡಾ.ಮುರಳಿಕೃಷ್ಣ ಇರ್ವತ್ರಾಯರಿಗೆ”ವಿಕ ಹಿರೋಸ್” ಪ್ರಶಸ್ತಿ

ಬೆಳ್ತಂಗಡಿ: ತಾಲೂಕು ಕೇಂದ್ರದಿಂದ ಸುಮಾರು 18 ಕಿ ಮಿ ದೂರದ ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಕ್ಕಿಂಜೆ ಎಂಬ ಗ್ರಾಮೀಣ ಪ್ರದೇಶದಲ್ಲಿ,ಸುತ್ತಲಿನ ಹಲವಾರು ಗ್ರಾಮದ ಜನರಿಗೆ ಉತ್ಕೃಷ್ಟ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಾರಂಭವಾದ ಶ್ರೀ ಕೃಷ್ಣ ಆಸ್ಪತ್ರೆಯು ಇಂದು ಹಲವಾರು ವಿಶೇಷ ಸೌಲಭ್ಯಗಳನ್ನು,ನುರಿತ ವೈದ್ಯಕೀಯ ಸಿಬ್ಬಂದಿಗಳನ್ನೊಳಗೊಂಡು, ಆರೋಗ್ಯ ಸೇವೆ ಒದಗಿಸುತ್ತಿದ್ದು, ವಿಜಯಕರ್ನಾಟಕ ದೈನಿಕ ನೀಡುವ “ವಿಕ ಹಿರೋಸ್” ಎಂಬ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ.

ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಮುರಳಿಕೃಷ್ಣ ಇರ್ವತ್ರಾಯರು ವೈದ್ಯಕೀಯ ಕ್ಷೇತ್ರದ ಸವಾಲುಗಳ ನಡುವೆ,ಸುಮಾರು ಎಂಟು ವರ್ಷಗಳ ಹಿಂದೆ “ಶ್ರೀ ಕೃಷ್ಣ ಯೋಗಕ್ಷೇಮ” – ನಿಮ್ಮ ಮನೆಬಾಗಿಲಿಗೆ ವೈದ್ಯಕೀಯ ಸೇವೆ, ಎಂಬ ವಿನೂತನ ಯೋಜನೆಯನ್ನು ರೂಪಿಸಿ ಗ್ರಾಮೀಣ ಗುಡ್ಡಗಾಡು ಪ್ರದೇಶದ ಜನರಿಗೆ ಆಸ್ಪತ್ರೆಗೆ ಹೊಗುವುದು ಅಸಾಧ್ಯವಾದ, ಹಾಸಿಗೆ ಹಿಡಿದಂತ ರೋಗಿಗಳಿಗೆ ಅವರ ಮನೆಬಾಗಿಲಿಗೆ ಹೋಗಿ ಚಿಕಿತ್ಸೆ ನೀಡವುದಾಗಿದೆ.,ಅಲ್ಲದೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ಹಾಗೂ ಬಣಕಲ್ ನಲ್ಲಿ ಆಸ್ಪತ್ರೆಯನ್ನು ಸ್ಥಾಪಿಸಿ ಆರೋಗ್ಯ ಸೇವೆ ನೀಡುತ್ತಿದ್ದಾರೆ.

ಇವರ ಈ ವೈದ್ಯಕೀಯ ಕ್ಷೇತ್ರದ ವಿಶೇಷ ಸೇವೆಯನ್ನು ಗುರುತಿಸಿ ಕರ್ನಾಟಕದ ಹೆಮ್ಮೆಯ ದಿನಪತ್ರಿಕೆ ವಿಜಯಕರ್ನಾಟಕ ದೈನಿಕವು “ವಿಕ ಹಿರೋಸ್” ಎಂಬ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

Related posts

ಅಧ್ಯಾಪಕ ಶಂಕರ ತಾಮನ್ಕರ್ ಇವರ 4ನೇ ಕವನ ಸಂಕಲನ ‘ಚಂದ್ರನಿಗೊಂದಂಗಿ’ಗೆ ಪ್ರಥಮ ಬಹುಮಾನ ಮತ್ತು ನಗದು ಪುರಸ್ಕಾರ

Suddi Udaya

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಕನ್ಯಾನ ಸದಾಶಿವ ಶೆಟ್ಟಿ ಆಯ್ಕೆ

Suddi Udaya

4ನೇ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್: ಉಜಿರೆ ತಂಡಕ್ಕೆ ಹಲವು ಪ್ರಶಸ್ತಿ

Suddi Udaya

ಮಂಜೂಷಾ ವಸ್ತು ಸಂಗ್ರಹಾಲಯವನ್ನು ವಿಶ್ವದಲ್ಲೇ ಅತಿದೊಡ್ಡ ಏಕ ವ್ಯಕ್ತಿ ಸಂಗ್ರಹಾಲಯ ಎಂದು ಗುರುತಿಸಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya

ರಿಷಿಕಾ ಕುಂದೇಶ್ವರರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 2 ನೇ ರ್ಯಾಂಕ್ ಗಳಿಸಿರುವ ವಿದ್ಯಾರ್ಥಿ ಚಿನ್ಮಯ್ ಜಿ.ಕೆ.ಗೆ ವಿದ್ವತ್ ಪದವಿಪೂರ್ವ ಕಾಲೇಜಿನಲ್ಲಿ ಸನ್ಮಾನ

Suddi Udaya
error: Content is protected !!