September 6, 2026
ಸಾಧಕರು

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ ವೈದ್ಯಕೀಯ ನಿರ್ದೇಶಕಡಾ.ಮುರಳಿಕೃಷ್ಣ ಇರ್ವತ್ರಾಯರಿಗೆ”ವಿಕ ಹಿರೋಸ್” ಪ್ರಶಸ್ತಿ

ಬೆಳ್ತಂಗಡಿ: ತಾಲೂಕು ಕೇಂದ್ರದಿಂದ ಸುಮಾರು 18 ಕಿ ಮಿ ದೂರದ ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಕ್ಕಿಂಜೆ ಎಂಬ ಗ್ರಾಮೀಣ ಪ್ರದೇಶದಲ್ಲಿ,ಸುತ್ತಲಿನ ಹಲವಾರು ಗ್ರಾಮದ ಜನರಿಗೆ ಉತ್ಕೃಷ್ಟ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಾರಂಭವಾದ ಶ್ರೀ ಕೃಷ್ಣ ಆಸ್ಪತ್ರೆಯು ಇಂದು ಹಲವಾರು ವಿಶೇಷ ಸೌಲಭ್ಯಗಳನ್ನು,ನುರಿತ ವೈದ್ಯಕೀಯ ಸಿಬ್ಬಂದಿಗಳನ್ನೊಳಗೊಂಡು, ಆರೋಗ್ಯ ಸೇವೆ ಒದಗಿಸುತ್ತಿದ್ದು, ವಿಜಯಕರ್ನಾಟಕ ದೈನಿಕ ನೀಡುವ “ವಿಕ ಹಿರೋಸ್” ಎಂಬ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ.

ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಮುರಳಿಕೃಷ್ಣ ಇರ್ವತ್ರಾಯರು ವೈದ್ಯಕೀಯ ಕ್ಷೇತ್ರದ ಸವಾಲುಗಳ ನಡುವೆ,ಸುಮಾರು ಎಂಟು ವರ್ಷಗಳ ಹಿಂದೆ “ಶ್ರೀ ಕೃಷ್ಣ ಯೋಗಕ್ಷೇಮ” – ನಿಮ್ಮ ಮನೆಬಾಗಿಲಿಗೆ ವೈದ್ಯಕೀಯ ಸೇವೆ, ಎಂಬ ವಿನೂತನ ಯೋಜನೆಯನ್ನು ರೂಪಿಸಿ ಗ್ರಾಮೀಣ ಗುಡ್ಡಗಾಡು ಪ್ರದೇಶದ ಜನರಿಗೆ ಆಸ್ಪತ್ರೆಗೆ ಹೊಗುವುದು ಅಸಾಧ್ಯವಾದ, ಹಾಸಿಗೆ ಹಿಡಿದಂತ ರೋಗಿಗಳಿಗೆ ಅವರ ಮನೆಬಾಗಿಲಿಗೆ ಹೋಗಿ ಚಿಕಿತ್ಸೆ ನೀಡವುದಾಗಿದೆ.,ಅಲ್ಲದೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ಹಾಗೂ ಬಣಕಲ್ ನಲ್ಲಿ ಆಸ್ಪತ್ರೆಯನ್ನು ಸ್ಥಾಪಿಸಿ ಆರೋಗ್ಯ ಸೇವೆ ನೀಡುತ್ತಿದ್ದಾರೆ.

ಇವರ ಈ ವೈದ್ಯಕೀಯ ಕ್ಷೇತ್ರದ ವಿಶೇಷ ಸೇವೆಯನ್ನು ಗುರುತಿಸಿ ಕರ್ನಾಟಕದ ಹೆಮ್ಮೆಯ ದಿನಪತ್ರಿಕೆ ವಿಜಯಕರ್ನಾಟಕ ದೈನಿಕವು “ವಿಕ ಹಿರೋಸ್” ಎಂಬ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

Related posts

ಮಂಜೂಷಾ ವಸ್ತು ಸಂಗ್ರಹಾಲಯವನ್ನು ವಿಶ್ವದಲ್ಲೇ ಅತಿದೊಡ್ಡ ಏಕ ವ್ಯಕ್ತಿ ಸಂಗ್ರಹಾಲಯ ಎಂದು ಗುರುತಿಸಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya

ಸಮಾಜ ಸೇವಕ, ರಾಜಕೇಸರಿ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ. ರವರಿಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಸುಭಾಷ್ ಚಂದ್ರ ಎಂ ಪಿ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ಶ್ರೀ ಧಮ೯ಸ್ಥಳ ಭಜನಾ ಪರಿಷತ್ ಕಾಯ೯ದಶಿ೯ಯಾಗಿ ಸೇವೆ ಸಲ್ಲಿಸಿದ್ದ, ಜಯರಾಮ ನೆಲ್ಲಿತ್ತಾಯರಿಗೆ “ಸಮಾಜ ಭೂಷಣ”ಪ್ರಶಸ್ತಿ

Suddi Udaya

ಗೇರುಕಟ್ಟೆಯ ರಾಮಪ್ರಕಾಶ ಕಲ್ಲೂರಾಯರಿಗೆ ಶ್ರೀನಿಧಿ ಆಸ್ರಣ್ಣ ಪ್ರಶಸ್ತಿ.

Suddi Udaya

ಎಕ್ಸೆಲ್ ಗುರುವಾಯನಕೆರೆ: ಸಿ.ಇ.ಟಿ.ಯಲ್ಲಿ ಎಂದಿನಂತೆ ರ‍್ಯಾಂಕ್ ಗಳ ಸುರಿಮಳೆ : ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya
error: Content is protected !!