22.6 C
ಪುತ್ತೂರು, ಬೆಳ್ತಂಗಡಿ
July 23, 2026
ಸಾಧಕರು

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ ವೈದ್ಯಕೀಯ ನಿರ್ದೇಶಕಡಾ.ಮುರಳಿಕೃಷ್ಣ ಇರ್ವತ್ರಾಯರಿಗೆ”ವಿಕ ಹಿರೋಸ್” ಪ್ರಶಸ್ತಿ

ಬೆಳ್ತಂಗಡಿ: ತಾಲೂಕು ಕೇಂದ್ರದಿಂದ ಸುಮಾರು 18 ಕಿ ಮಿ ದೂರದ ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಕ್ಕಿಂಜೆ ಎಂಬ ಗ್ರಾಮೀಣ ಪ್ರದೇಶದಲ್ಲಿ,ಸುತ್ತಲಿನ ಹಲವಾರು ಗ್ರಾಮದ ಜನರಿಗೆ ಉತ್ಕೃಷ್ಟ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಾರಂಭವಾದ ಶ್ರೀ ಕೃಷ್ಣ ಆಸ್ಪತ್ರೆಯು ಇಂದು ಹಲವಾರು ವಿಶೇಷ ಸೌಲಭ್ಯಗಳನ್ನು,ನುರಿತ ವೈದ್ಯಕೀಯ ಸಿಬ್ಬಂದಿಗಳನ್ನೊಳಗೊಂಡು, ಆರೋಗ್ಯ ಸೇವೆ ಒದಗಿಸುತ್ತಿದ್ದು, ವಿಜಯಕರ್ನಾಟಕ ದೈನಿಕ ನೀಡುವ “ವಿಕ ಹಿರೋಸ್” ಎಂಬ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ.

ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಮುರಳಿಕೃಷ್ಣ ಇರ್ವತ್ರಾಯರು ವೈದ್ಯಕೀಯ ಕ್ಷೇತ್ರದ ಸವಾಲುಗಳ ನಡುವೆ,ಸುಮಾರು ಎಂಟು ವರ್ಷಗಳ ಹಿಂದೆ “ಶ್ರೀ ಕೃಷ್ಣ ಯೋಗಕ್ಷೇಮ” – ನಿಮ್ಮ ಮನೆಬಾಗಿಲಿಗೆ ವೈದ್ಯಕೀಯ ಸೇವೆ, ಎಂಬ ವಿನೂತನ ಯೋಜನೆಯನ್ನು ರೂಪಿಸಿ ಗ್ರಾಮೀಣ ಗುಡ್ಡಗಾಡು ಪ್ರದೇಶದ ಜನರಿಗೆ ಆಸ್ಪತ್ರೆಗೆ ಹೊಗುವುದು ಅಸಾಧ್ಯವಾದ, ಹಾಸಿಗೆ ಹಿಡಿದಂತ ರೋಗಿಗಳಿಗೆ ಅವರ ಮನೆಬಾಗಿಲಿಗೆ ಹೋಗಿ ಚಿಕಿತ್ಸೆ ನೀಡವುದಾಗಿದೆ.,ಅಲ್ಲದೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ಹಾಗೂ ಬಣಕಲ್ ನಲ್ಲಿ ಆಸ್ಪತ್ರೆಯನ್ನು ಸ್ಥಾಪಿಸಿ ಆರೋಗ್ಯ ಸೇವೆ ನೀಡುತ್ತಿದ್ದಾರೆ.

ಇವರ ಈ ವೈದ್ಯಕೀಯ ಕ್ಷೇತ್ರದ ವಿಶೇಷ ಸೇವೆಯನ್ನು ಗುರುತಿಸಿ ಕರ್ನಾಟಕದ ಹೆಮ್ಮೆಯ ದಿನಪತ್ರಿಕೆ ವಿಜಯಕರ್ನಾಟಕ ದೈನಿಕವು “ವಿಕ ಹಿರೋಸ್” ಎಂಬ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

Related posts

ಗೇರುಕಟ್ಟೆ :ಪರಪ್ಪು ಹಿದಾಯತುಸ್ಪಿಬಿಯಾನ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ

Suddi Udaya

ಮಂಗಳೂರು ವಿವಿ ಸ್ನಾತಕ ಪದವಿ ಪರೀಕ್ಷೆ ಫಲಿತಾಂಶ: ಎಂ.ಎಸ್.ಡಬ್ಲ್ಯೂನಲ್ಲಿ ಅಜಿರದ ಯಶಸ್ವಿನಿಗೆ ಪ್ರಥಮ ರ‍್ಯಾಂಕ್

Suddi Udaya

ಅಗ್ನಿವೀರ್ ಜಿಡಿ ಹುದ್ದೆಗೆ ಆಯ್ಕೆಯಾದ ಗುರುಕಿರಣ್ ರವರಿಗೆ ಶ್ರೀ ರಾಮ್ ಫ್ರೆಂಡ್ಸ್ ಬಾಜಾರು ವತಿಯಿಂದ ಸನ್ಮಾನ

Suddi Udaya

ಅತ್ಯುನ್ನತ ಸೇವೆಗಾಗಿ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಪಡೆದ ವಿಜಯ ಕುಮಾರ್ ಕೆಲ್ಲಗುತ್ತು ರವರಿಗೆ ಪೊಲೀಸ್ ಮಹಾ ನಿರ್ದೇಶಕರಾದ ಡಾ. ಅಲೋಕ್ ಮೋಹನ್ ರಿಂದ ಸ್ಮರಣಿಕೆ ನೀಡಿ ಗೌರವ

Suddi Udaya

ಕೃಷಿ ಕ್ಷೇತ್ರ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ವಿಶೇಷ ಸಾಧನೆ : ನಿವೃತ್ತ ಯೋಧ ಉಜಿರೆಯ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಗೌರವ ಡಾಕ್ಟರೇಟ್ ಪದವಿ

Suddi Udaya

ನಡ ನಿವಾಸಿ ಅರುಣ್ ಜಿ. ಡಿ.ಸೋಜ ಅವರಿಗೆ ಜೈಪುರ ಮಾಳವೀಯ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಿಂದ ಪಿಹೆಚ್ ಡಿ ಪದವಿ

Suddi Udaya
error: Content is protected !!