ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನದಲ್ಲಿ ಗ್ರಾಮ ಸುಭಿಕ್ಷೆಗಾಗಿ ಸೀಯಾಳ ಅಭಿಷೇಕ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಅಜಿಲ ಸೀಮೆಯ ತಿಮ್ಮಣ್ಣರಸರಾದ ಪದ್ಮಪ್ರಸಾದ್ ಅಜಿಲರ ಉಪಸ್ಥಿತಿಯಲ್ಲಿ ಗ್ರಾಮ ಸುಭಿಕ್ಷೆಗಾಗಿ ಸೀಯಾಳ ಅಭಿಷೇಕ ಸೇವೆಯನ್ನು ಜೂ.9 ರಂದು ನಡೆಸಲಾಯಿತು.
ದೇವಳದ ಅರ್ಚಕರಾದ ಪ್ರಕಾಶ್ ಹೊಳ್ಳ, ಕಿರಣ್ ಭಟ್ ಹಾಗೂ ಮುರಳಿ ಭಟ್ ರವರು ಶಾಸ್ತ್ರೋಕ್ತವಾಗಿ ಪೂಜಾ ಕೈಂಕರ್ಯವನ್ನು ನೆರವೇರಿಸಿದರು.


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಳದಂಗಡಿ, ವಲಯ ಜನ ಜಾಗೃತಿ ವೇದಿಕೆ ಅಳದಂಗಡಿ, ವಲಯ ವಿಪತ್ತು ನಿರ್ವಹಣಾ ಘಟಕ ಅಳದಂಗಡಿ, ವಲಯದವರ ಸಹಯೋಗದೊಂದಿಗೆ ಸೇವಾ ಕಾರ್ಯಕ್ರಮವನ್ನು ಮಾಡಲಾಯಿತು.


ವಲಯ ಮೇಲ್ವಿಚಾರಕಿ ಶ್ರೀಮತಿ ಸುಮಂಗಲ, ಸೇವಾ ಪ್ರತಿನಿಧಿಗಳು, ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷರಾದ ನಾರಾಯಣ ಸಾಲಿಯಾನ್, ಶ್ರೀಮತಿ ಗುಣಮ್ಮ, ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ವಿಪತ್ತು ನಿರ್ವಹಣಾ ಘಟಕದ ಸಂಯೋಜಕ ಹಾಗೂ ಸ್ವಯಂಸೇವಕರು ಉಪಸ್ಥಿತರಿದ್ದರು.

Leave a Comment

error: Content is protected !!