April 2, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

ಬೆಳ್ತಂಗಡಿ : ಸಿದ್ದರಾಮಯ್ಯ ಅವರಿಂದ 24 ಹಿಂದೂ ಕಾರ್ಯಕರ್ತರ ಹತ್ಯೆ’ ಹೇಳಿಕೆ ಕುರಿತಂತೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ಜೂ 9 ರಂದು ತಡೆ ವಿಧಿಸಿದೆ.
ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದ ಹೈಕೋರ್ಟ್, ಐಪಿಸಿ ಸೆ.153 ಎ ಅಡಿ ಕೇಸ್ ದಾಖಲಿಸಲು ಪ್ರಕರಣ ಯೋಗ್ಯವಾಗಿಲ್ಲ ಎಂದು ಹೇಳಿದೆ.

ಹೇಳಿಕೆ ತರುವಾಯ ಯಾವುದೇ ಶಾಂತಿಭಂಗದ ಕೃತ್ಯ ನಡೆದಿಲ್ಲ. ವಿಳಂಬವಾಗಿ ದೂರು ದಾಖಲಿಸಲಾಗಿದೆ ಎಂದು ಹರೀಶ್ ಪೂಂಜಾ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದ ಮಂಡಿಸಿದರು. ತನಿಖೆಗೆ ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶ ನೀಡಿದೆ.

ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿ ವಿಜಯೋತ್ಸವದಲ್ಲಿ ಹರೀಶ್ ಪೂಂಜಾ ಅವರು ಕೆಲ ಹಿಂದೂ ಪರ ಸಂಘಟನೆಯ ನಾಯಕರ ವಿರುದ್ಧ ವಾಗ್ದಾಳಿ ನಡೆಸುವ ವೇಳೆ ’24 ಹಿಂದೂ ಕಾರ್ಯಕರ್ತರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹತ್ಯೆ ಮಾಡಿದ ಸಿದ್ದರಾಮಯ್ಯ ಪರ ನೀವು ಮತ ಕೇಳಿದ್ದೀರಲ್ಲ. ಇದು ಯಾವ ಹಿಂದುತ್ವ’ ಎಂದು ಕಿಡಿ ಕಾರಿದ್ದರು.

Related posts

ರಸ್ತೆ ಬದಿ ವಾಹನ ನಿಲ್ಲಿಸುವರಿಗೆ ಎಚ್ಚರಿಕೆ, ಬ್ಯಾಟರಿ ಕಳ್ಳರಿದ್ದಾರೆ: ಸುಲ್ಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಲವು ವಾಹನಗಳ ಬ್ಯಾಟರಿ ಕಳವು; ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ದ.ಕ ಟೆಲಿಕಾಂ ಸಲಹಾ ಸಮಿತಿ ಸದಸ್ಯರಾಗಿ ಕೊರಗಪ್ಪ ನಾಯ್ಕ ಮುಂಡಾಜೆ ನೇಮಕ

Suddi Udaya

ಬಿಜೆಪಿ ಜಿಲ್ಲಾ ಎಸ್.ಟಿ ಮೋರ್ಚಾ ವತಿಯಿಂದ ಎಸ್.ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ರವರ ಮೇಲೆ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾದ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿನಿ ಕು.ಸಿಂಚನ ರವರಿಂದ ಗ್ರಾಮೀಣಾಭಿವೃದ್ದಿ ಸೇವೆಗೆ ಪ್ರಮಾಣ ಪತ್ರ

Suddi Udaya

ಚಂದ್ರಯಾನ -3 ಯಶಸ್ವಿ ಸಂಭ್ರಮಿಸಿದ ಬೆಳ್ತಂಗಡಿ ಎಸ್ ಡಿಎಮ್ ಸ್ಕೌಟ್ ಗೈಡ್ಸ್ ನ ವಿದ್ಯಾರ್ಥಿಗಳು

Suddi Udaya

ಕೊಯ್ಯೂರು ಗ್ರಾ.ಪಂ. ಅಧ್ಯಕ್ಷರಾಗಿ ದಯಾಮಣಿ, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

Suddi Udaya
error: Content is protected !!