22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

ಬೆಳ್ತಂಗಡಿ : ಸಿದ್ದರಾಮಯ್ಯ ಅವರಿಂದ 24 ಹಿಂದೂ ಕಾರ್ಯಕರ್ತರ ಹತ್ಯೆ’ ಹೇಳಿಕೆ ಕುರಿತಂತೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ಜೂ 9 ರಂದು ತಡೆ ವಿಧಿಸಿದೆ.
ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದ ಹೈಕೋರ್ಟ್, ಐಪಿಸಿ ಸೆ.153 ಎ ಅಡಿ ಕೇಸ್ ದಾಖಲಿಸಲು ಪ್ರಕರಣ ಯೋಗ್ಯವಾಗಿಲ್ಲ ಎಂದು ಹೇಳಿದೆ.

ಹೇಳಿಕೆ ತರುವಾಯ ಯಾವುದೇ ಶಾಂತಿಭಂಗದ ಕೃತ್ಯ ನಡೆದಿಲ್ಲ. ವಿಳಂಬವಾಗಿ ದೂರು ದಾಖಲಿಸಲಾಗಿದೆ ಎಂದು ಹರೀಶ್ ಪೂಂಜಾ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದ ಮಂಡಿಸಿದರು. ತನಿಖೆಗೆ ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶ ನೀಡಿದೆ.

ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿ ವಿಜಯೋತ್ಸವದಲ್ಲಿ ಹರೀಶ್ ಪೂಂಜಾ ಅವರು ಕೆಲ ಹಿಂದೂ ಪರ ಸಂಘಟನೆಯ ನಾಯಕರ ವಿರುದ್ಧ ವಾಗ್ದಾಳಿ ನಡೆಸುವ ವೇಳೆ ’24 ಹಿಂದೂ ಕಾರ್ಯಕರ್ತರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹತ್ಯೆ ಮಾಡಿದ ಸಿದ್ದರಾಮಯ್ಯ ಪರ ನೀವು ಮತ ಕೇಳಿದ್ದೀರಲ್ಲ. ಇದು ಯಾವ ಹಿಂದುತ್ವ’ ಎಂದು ಕಿಡಿ ಕಾರಿದ್ದರು.

Related posts

ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 56ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ

Suddi Udaya

ಇಂದಿನಿಂದ ದ.ಕ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಗೆ ನಾಮಪತ್ರಗಳ ಸ್ವೀಕಾರ ಆರಂಭ: ಜಿಲ್ಲಾಧಿಕಾರಿ

Suddi Udaya

ನಾವರ ಪ್ರಗತಿ ಬಂಧು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಮುಳಿಯಾ’ಸ್ ಟೈಮ್ ಝೋನ್’ ವಾಚ್ ಶೋರೂಂ ಶುಭಾರಂಭ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ

Suddi Udaya
error: Content is protected !!