23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

ಬೆಳ್ತಂಗಡಿ : ಸಿದ್ದರಾಮಯ್ಯ ಅವರಿಂದ 24 ಹಿಂದೂ ಕಾರ್ಯಕರ್ತರ ಹತ್ಯೆ’ ಹೇಳಿಕೆ ಕುರಿತಂತೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ಜೂ 9 ರಂದು ತಡೆ ವಿಧಿಸಿದೆ.
ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದ ಹೈಕೋರ್ಟ್, ಐಪಿಸಿ ಸೆ.153 ಎ ಅಡಿ ಕೇಸ್ ದಾಖಲಿಸಲು ಪ್ರಕರಣ ಯೋಗ್ಯವಾಗಿಲ್ಲ ಎಂದು ಹೇಳಿದೆ.

ಹೇಳಿಕೆ ತರುವಾಯ ಯಾವುದೇ ಶಾಂತಿಭಂಗದ ಕೃತ್ಯ ನಡೆದಿಲ್ಲ. ವಿಳಂಬವಾಗಿ ದೂರು ದಾಖಲಿಸಲಾಗಿದೆ ಎಂದು ಹರೀಶ್ ಪೂಂಜಾ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದ ಮಂಡಿಸಿದರು. ತನಿಖೆಗೆ ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶ ನೀಡಿದೆ.

ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿ ವಿಜಯೋತ್ಸವದಲ್ಲಿ ಹರೀಶ್ ಪೂಂಜಾ ಅವರು ಕೆಲ ಹಿಂದೂ ಪರ ಸಂಘಟನೆಯ ನಾಯಕರ ವಿರುದ್ಧ ವಾಗ್ದಾಳಿ ನಡೆಸುವ ವೇಳೆ ’24 ಹಿಂದೂ ಕಾರ್ಯಕರ್ತರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹತ್ಯೆ ಮಾಡಿದ ಸಿದ್ದರಾಮಯ್ಯ ಪರ ನೀವು ಮತ ಕೇಳಿದ್ದೀರಲ್ಲ. ಇದು ಯಾವ ಹಿಂದುತ್ವ’ ಎಂದು ಕಿಡಿ ಕಾರಿದ್ದರು.

Related posts

ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆರಂಬೋಡಿ ಕಿ. ಪ್ರಾ. ಶಾಲೆಗೆ ಬಟ್ಟಲು ಮತ್ತು ಗ್ಯಾಸ್ ಸ್ಟವ್ ವಿತರಣೆ

Suddi Udaya

ಓಡಿಲ್ನಾಳ: ಬಟ್ಟೆಮಾರ್ ನಲ್ಲಿ ಧರ್ಣಪ್ಪ ಪೂಜಾರಿ ಯವರ ಮನೆಗೆ ಗುಡ್ಡ ಕುಸಿತ

Suddi Udaya

ಕುತ್ಲೂರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ತ್ರೈಮಾಸಿಕ ಸಭೆ ಹಾಗೂ ಮಂಜೂರಾತಿ ಪತ್ರ ವಿತರಣೆ

Suddi Udaya

ಉಜಿರೆ: ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಸೈಂಧವ ವಧೆ ತಾಳಮದ್ದಳೆ

Suddi Udaya

ನಿಡಿಗಲ್ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ ಶಾಂತಿ ಸಭೆ

Suddi Udaya
error: Content is protected !!