September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

ಬೆಳ್ತಂಗಡಿ : ಸಿದ್ದರಾಮಯ್ಯ ಅವರಿಂದ 24 ಹಿಂದೂ ಕಾರ್ಯಕರ್ತರ ಹತ್ಯೆ’ ಹೇಳಿಕೆ ಕುರಿತಂತೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ಜೂ 9 ರಂದು ತಡೆ ವಿಧಿಸಿದೆ.
ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದ ಹೈಕೋರ್ಟ್, ಐಪಿಸಿ ಸೆ.153 ಎ ಅಡಿ ಕೇಸ್ ದಾಖಲಿಸಲು ಪ್ರಕರಣ ಯೋಗ್ಯವಾಗಿಲ್ಲ ಎಂದು ಹೇಳಿದೆ.

ಹೇಳಿಕೆ ತರುವಾಯ ಯಾವುದೇ ಶಾಂತಿಭಂಗದ ಕೃತ್ಯ ನಡೆದಿಲ್ಲ. ವಿಳಂಬವಾಗಿ ದೂರು ದಾಖಲಿಸಲಾಗಿದೆ ಎಂದು ಹರೀಶ್ ಪೂಂಜಾ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದ ಮಂಡಿಸಿದರು. ತನಿಖೆಗೆ ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶ ನೀಡಿದೆ.

ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿ ವಿಜಯೋತ್ಸವದಲ್ಲಿ ಹರೀಶ್ ಪೂಂಜಾ ಅವರು ಕೆಲ ಹಿಂದೂ ಪರ ಸಂಘಟನೆಯ ನಾಯಕರ ವಿರುದ್ಧ ವಾಗ್ದಾಳಿ ನಡೆಸುವ ವೇಳೆ ’24 ಹಿಂದೂ ಕಾರ್ಯಕರ್ತರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹತ್ಯೆ ಮಾಡಿದ ಸಿದ್ದರಾಮಯ್ಯ ಪರ ನೀವು ಮತ ಕೇಳಿದ್ದೀರಲ್ಲ. ಇದು ಯಾವ ಹಿಂದುತ್ವ’ ಎಂದು ಕಿಡಿ ಕಾರಿದ್ದರು.

Related posts

ಗೇರುಕಟ್ಟೆ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಕಲ್ಮಂಜ: ಪುಟಾಣಿ ಮಕ್ಕಳ ನೂತನ ‘ಸದಾಶಿವೇಶ್ವರ’ ಭಜನಾ ತಂಡ ರಚನೆ

Suddi Udaya

ರೆಖ್ಯ: ಸಾರ್ವಜನಿಕ ಶ್ರೀ ಕೃಷ್ಣಾ ಜನ್ಮಾಷ್ಟಮಿ ಆಚರಣಾ ಸಮಿತಿ ರಚನೆ

Suddi Udaya

ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರತಿಭಟನಾ ಸಭೆ; ಸಾವಿರಾರು ಮಂದಿ ಭಾಗಿ

Suddi Udaya

ಸೋಮಂತಡ್ಕ ಬಳಿ ಕಾರು- ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಯುವ ಪೋಟೋಗ್ರಾಫರ್ ಗಣೇಶ್ ಗೌಡ ಕಳೆಂಜ ಸಾವು

Suddi Udaya

ಮುಂಡಾಜೆ: ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಅಧ್ಯಯನ ಕೇಂದ್ರ ಉದ್ಘಾಟನೆ

Suddi Udaya
error: Content is protected !!