September 6, 2026
ಸಾಧಕರು

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ ವೈದ್ಯಕೀಯ ನಿರ್ದೇಶಕಡಾ.ಮುರಳಿಕೃಷ್ಣ ಇರ್ವತ್ರಾಯರಿಗೆ”ವಿಕ ಹಿರೋಸ್” ಪ್ರಶಸ್ತಿ

ಬೆಳ್ತಂಗಡಿ: ತಾಲೂಕು ಕೇಂದ್ರದಿಂದ ಸುಮಾರು 18 ಕಿ ಮಿ ದೂರದ ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಕ್ಕಿಂಜೆ ಎಂಬ ಗ್ರಾಮೀಣ ಪ್ರದೇಶದಲ್ಲಿ,ಸುತ್ತಲಿನ ಹಲವಾರು ಗ್ರಾಮದ ಜನರಿಗೆ ಉತ್ಕೃಷ್ಟ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಾರಂಭವಾದ ಶ್ರೀ ಕೃಷ್ಣ ಆಸ್ಪತ್ರೆಯು ಇಂದು ಹಲವಾರು ವಿಶೇಷ ಸೌಲಭ್ಯಗಳನ್ನು,ನುರಿತ ವೈದ್ಯಕೀಯ ಸಿಬ್ಬಂದಿಗಳನ್ನೊಳಗೊಂಡು, ಆರೋಗ್ಯ ಸೇವೆ ಒದಗಿಸುತ್ತಿದ್ದು, ವಿಜಯಕರ್ನಾಟಕ ದೈನಿಕ ನೀಡುವ “ವಿಕ ಹಿರೋಸ್” ಎಂಬ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ.

ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಮುರಳಿಕೃಷ್ಣ ಇರ್ವತ್ರಾಯರು ವೈದ್ಯಕೀಯ ಕ್ಷೇತ್ರದ ಸವಾಲುಗಳ ನಡುವೆ,ಸುಮಾರು ಎಂಟು ವರ್ಷಗಳ ಹಿಂದೆ “ಶ್ರೀ ಕೃಷ್ಣ ಯೋಗಕ್ಷೇಮ” – ನಿಮ್ಮ ಮನೆಬಾಗಿಲಿಗೆ ವೈದ್ಯಕೀಯ ಸೇವೆ, ಎಂಬ ವಿನೂತನ ಯೋಜನೆಯನ್ನು ರೂಪಿಸಿ ಗ್ರಾಮೀಣ ಗುಡ್ಡಗಾಡು ಪ್ರದೇಶದ ಜನರಿಗೆ ಆಸ್ಪತ್ರೆಗೆ ಹೊಗುವುದು ಅಸಾಧ್ಯವಾದ, ಹಾಸಿಗೆ ಹಿಡಿದಂತ ರೋಗಿಗಳಿಗೆ ಅವರ ಮನೆಬಾಗಿಲಿಗೆ ಹೋಗಿ ಚಿಕಿತ್ಸೆ ನೀಡವುದಾಗಿದೆ.,ಅಲ್ಲದೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ಹಾಗೂ ಬಣಕಲ್ ನಲ್ಲಿ ಆಸ್ಪತ್ರೆಯನ್ನು ಸ್ಥಾಪಿಸಿ ಆರೋಗ್ಯ ಸೇವೆ ನೀಡುತ್ತಿದ್ದಾರೆ.

ಇವರ ಈ ವೈದ್ಯಕೀಯ ಕ್ಷೇತ್ರದ ವಿಶೇಷ ಸೇವೆಯನ್ನು ಗುರುತಿಸಿ ಕರ್ನಾಟಕದ ಹೆಮ್ಮೆಯ ದಿನಪತ್ರಿಕೆ ವಿಜಯಕರ್ನಾಟಕ ದೈನಿಕವು “ವಿಕ ಹಿರೋಸ್” ಎಂಬ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

Related posts

ಮೊಗ್ರು ಕಡಮ್ಮಾಜೆ ಫಾರ್ಮ್ಸ್ ನಲ್ಲಿ 3 ದಿನ ನಡೆಯಲಿರುವ ಮೀನು ಮೇಳಕ್ಕೆ ಚಾಲನೆ: ವಿಶೇಷ ಆಕರ್ಷಣೆ ಮೀನಿಗೆ ಗಾಳ ಹಾಕುವ ಸ್ಪರ್ಧೆ

Suddi Udaya

ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ರಾಜ್ಯಪ್ರಶಸ್ತಿಗೆ ಅರ್ಜಿ ಆಹ್ವಾನ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಸಂಘದಿಂದ ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಘಟಕ : ಧಾರ್ಮಿಕ ಕ್ಷೇತ್ರದ ಸಾಧನೆಗಾಗಿ ನಿರಂಜನ್ ಜೈನ್ ಕುದ್ಯಾಡಿಯವರಿಗೆ ಗೌರವ ಪುರಸ್ಕಾರ

Suddi Udaya

ಬಂದಾರು ಗ್ರಾ.ಪಂ. ಉದ್ಯೋಗ ಖಾತರಿ ಯೋಜನೆಯಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪ್ರಶಸ್ತಿ ಸ್ವೀಕಾರ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya
error: Content is protected !!