Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ : ಶ್ರೀ ಧ.  ಮಂ.  ಆಂಗ್ಲ ಮಾಧ್ಯಮ ಶಾಲೆಯಲ್ಲಿ  ನಾಯಕತ್ವ ತರಬೇತಿ ಕಾರ್ಯಾಗಾರ

ಧರ್ಮಸ್ಥಳ: ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಾಯಕತ್ವ ತರಭೇತಿ ಕಾರ್ಯಾಗಾರವನ್ನು ಜೂ 9 ರಂದು ಹಮ್ಮಿಕೊಳ್ಳಲಾಯಿತು . 

ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿವೃತ್ತ ಪ್ರಾದೇಶಿಕ ಅಧಿಕಾರಿ  ಶ್ರೀಹರಿ ಶಗ್ರಿತ್ತಾಯ ಆಗಮಿಸಿ, ವಿದ್ಯಾರ್ಥಿಗಳು ನಾಯಕತ್ವ ಗುಣಗಳನ್ನು  ಮನೆಯಲ್ಲಿಯೇ ಮೈಗೂಡಿಸಿಕೊಳ್ಳಲು ಸಾಧ್ಯ. ಆಗ ಸಮಾಜವನ್ನು ಅರಿಯಲು ಸಾಧ್ಯವಾಗುತ್ತದೆ.ನಾಯಕನಾಗಿರಲು ಅನೇಕ ಬದಲಾವಣೆಗಳನ್ನು ಮಾಡಿಕೊಳ್ಳಬೇಕು.  ನಾಯಕತ್ವ ಹೇಗಿರಬೇಕು, ಅವನ ಗುಣಗಳು ಹೇಗಿರಬೇಕು, ವಿವಿಧ ರೀತಿಯ ನಾಯಕರುಗಳು, ನಾಯಕನ ಜವಾಬ್ದಾರಿ ಏನು ,ಎಂಬುದನ್ನು  ಅವರು ಉದಾಹರಣೆ, ಕಗ್ಗದ ವಚನಗಳ ಮೂಲಕ ವಿದ್ಯಾರ್ಥಿಗಳ ಮನಮುಟ್ಟುವಂತೆ ತಿಳಿಸಿದರು. 
        ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಶಾಲೆಯಲ್ಲಿ ಮಂತ್ರಿಮಂಡಲದ ಅಗತ್ಯ ಮತ್ತು ನಾಯಕನ ಮಹತ್ವ ವಿವರಿಸಿ ಎಲ್ಲರನ್ನೂ ಸ್ವಾಗತಿಸಿದರು.
ಕುಮಾರಿ ಆದ್ಯ  ಕಾರ್ಯಕ್ರಮ ನಿರೂಪಿಸಿ, ನಿಧೀಕ್ಷಾ ಅತಿಥಿಗಳನ್ನು ಪರಿಚಯಿಸಿ, ವೀಕ್ಷಾ ವಂದಿಸಿದರು. ಶಾಲಾ ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ನಾರಾವಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಮ್ಯಾನೇಜರ್ ಸುಧೀರ್ ಎಸ್.ಪಿ ಬೆಳ್ತಂಗಡಿ ಶಾಖೆಗೆ ವರ್ಗಾವಣೆ: ಗ್ರಾಹಕರು ಹಾಗೂ ಸಿಬ್ಬಂದಿಗಳಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಮುಂಡಾಜೆ: ಮಂದಿರ ಮಹಾಸಂಘ ಮತ್ತು ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಆರತಿ

Suddi Udaya

ಮುಂಡಾಜೆ ವಿನೋದ್ ಖಾಡಿಲ್ಕರ್ ನಿಧನ

Suddi Udaya

ಬದ್ಯಾರಿನಲ್ಲಿ ನೂತನವಾಗಿ ನಿರ್ಮಿಸಿದ ದಿ| ಬಿ. ಲಕ್ಕಣ್ಣ ಶೆಟ್ಟಿ ಸ್ಮಾರಕ ಸಾರ್ವಜನಿಕ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ

Suddi Udaya

ಸುದ್ದಿ ಉದಯ ಫಲಶ್ರುತಿ: ನಿಡ್ಲೆ ಕಂರ್ಬಿತ್ತಿಲು ಎಂಬಲ್ಲಿ ಅಪಾಯದಂಚಿನಲ್ಲಿದ್ದ ಬೃಹತ್ ಗಾತ್ರದ ಮರ ತೆರವು

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 50453 ಅಂತರದಿಂದ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ

Suddi Udaya
error: Content is protected !!