25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಶ್ರೀ ಮಂ. ಅ.ಪ್ರೌ. ಶಾಲೆಯಲ್ಲಿ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಜ್ಞಾನೇಶ್, ಉಪ ನಾಯಕನಾಗಿ ಪ್ರಜ್ವಲ್

ಧರ್ಮಸ್ಥಳ : ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ, ಧರ್ಮಸ್ಥಳ ಇಲ್ಲಿನ 2023- 24 ನೇ ಸಾಲಿನ ವಿದ್ಯಾರ್ಥಿ ಸರಕಾರದ ರಚನೆಗಾಗಿ ಪ್ರಜಾಪ್ರಭುತ್ವದ ಚುನಾವಣಾ ಮಾದರಿಯಲ್ಲಿ ಚುನಾವಣೆಯನ್ನು ಎಲೆಕ್ಟ್ರಾನಿಕ್ ವೋಟಿಂಗ್ ಮಷೀನ್ ಮಾದರಿಯಲ್ಲಿ ನಡೆಸಲಾಯಿತು.

ಚುನಾವಣೆಯ ಅಧಿಸೂಚನೆಯ ಮೂಲಕ ಆರಂಭವಾದ ಪ್ರಕ್ರಿಯೆಯು ಠೇವಣಿಯೊಂದಿಗೆ ನಾಮಪತ್ರ ಸಲ್ಲಿಸುವಿಕೆ, ನಾಮಪತ್ರ ಪರಿಶೀಲನೆ, ನಾಮಪತ್ರ ಹಿಂತೆಗೆತ, ಚುನಾವಣಾ ಮತ್ತು ಪ್ರಚಾರ ನಡೆದು, ಚುನಾವಣಾ ದಿನ ಶಿಸ್ತು ಬದ್ಧರಾಗಿ ವಿದ್ಯಾರ್ಥಿಗಳು ತಮ್ಮ ಹಾಜರಾತಿಯ ಪ್ರಕಾರ, ತಮ್ಮ ಗುರುತನ್ನು ತಿಳಿಸಿ, ಸರತಿಯ ಸಾಲಿನಲ್ಲಿ ಬಂದು ಮತವನ್ನು ಚಲಾಯಿಸಿದರು.

ಸಾರ್ವತ್ರಿಕ ಚುನಾವಣೆ ಮಾದರಿಯಂತೆ ನಡೆದ ಈ ಚುನಾವಣೆಯಲ್ಲಿ ಎಲೆಕ್ಟ್ರಾನಿಕ್ ವೋಟಿಂಗ್ ಮಷೀನ್ ಮಾದರಿಯ ಆಪ್ ಮೂಲಕ ವಿದ್ಯಾರ್ಥಿಗಳು ಮತವನ್ನು ಚಲಾಯಿಸಿದರು.

ಶಾಲಾ ನಾಯಕನಾಗಿ ಜ್ಞಾನೇಶ್, ಶಾಲಾ ಉಪ ನಾಯಕನಾಗಿ ಪ್ರಜ್ವಲ್, ಶಾಲಾ ಉಪೋಪನಾಯಕನಾಗಿ ಪ್ರತೀಕ್ ಆಯ್ಕೆಯಾಗಿ, ಚುನಾವಣಾ ಫಲಿತಾಂಶದ ಘೋಷಣೆಯನ್ನು ಮಾಡಿ, ವಿಜೇತರಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕ ಪದ್ಮರಾಜ್ ಹಾಗೂ ಹಿರಿಯ ಶಿಕ್ಷಕ ಜಯರಾಮ ಮಯ್ಯ ಇವರ ಮಾರ್ಗದರ್ಶನದಲ್ಲಿ ಶಿಕ್ಷಕ ಯುವರಾಜ್ ಹಾಗೂ ವಿಕಾಸ್ ಆರಿಗಾ ಇವರ ನಿರ್ದೇಶನದಲ್ಲಿ ಎಲ್ಲಾ ಅಧ್ಯಾಪಕರ ಸಹಕಾರದೊಂದಿಗೆ ಮಾದರಿ ಚುನಾವಣಾ ಚಟುವಟಿಕೆಯು ಯಶಸ್ವಿಯಾಗಿ ಜರುಗಿತು.

Related posts

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ -ಕಾಲೇಜು ಗಣರಾಜ್ಯೋತ್ಸವ ಆಚರಣೆ

Suddi Udaya

ಸುನ್ನೀ ವಿದ್ಯಾಬ್ಯಾಸ ಬೋರ್ಡ್ ಫಲಿತಾಂಶ: ಕೊಯ್ಯೂರು ಉಣ್ಣಾಲು ಮದರಸದ ಮುಹಮ್ಮದ್ ರಾಝಿ, ಫಾತಿಮತ್ ನುಝೈರಾ ರೇಂಜ್ ಗೆ ಪ್ರಥಮ

Suddi Udaya

ಗೋ ವಧೆ ಮಾಫಿಯಾದವರನ್ನು ಮಟ್ಟಹಾಕಿ ಜೈಲಿಗಟ್ಟಲು ವಿಶ್ವ ಹಿಂದೂ ಪರಿಷತ್ ಆಗ್ರಹ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ರಘುರಾಮ ಶೆಟ್ಟಿ, ಸಾಧನಾ ಕಾರ್ಯದರ್ಶಿಯಾಗಿ ಅಮಿತಾನಂದ ಹೆಗ್ಡೆ ಆಯ್ಕೆ

Suddi Udaya

ಬಳಂಜದಲ್ಲಿ ಎಸ್ ಎನ್ ಮೂಡಬಿದ್ರೆ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ

Suddi Udaya

ಪೆರಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಎನ್. ಸೀತಾರಾಮ ರೈ, ಉಪಾಧ್ಯಕ್ಷರಾಗಿ ವಿಠಲ ಸಿ ಪೂಜಾರಿ ಆಯ್ಕೆ

Suddi Udaya
error: Content is protected !!