September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಶಿವಾಜಿ ಪ್ರೆಂಡ್ಸ್ ಕ್ಲಬ್ ನಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ: ಕ್ಲಬ್ ವತಿಯಿಂದ ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನ

ಬಳಂಜ: ಶಿವಾಜಿ ಪ್ರೆಂಡ್ಸ್ ಕ್ಲಬ್ ನೇತಾಜಿನಗರ ಬಳಂಜ ಇದರ ವತಿಯಿಂದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಎರಡನೇ ಭಾರಿ ಆಯ್ಕೆಯಾದ ಹರೀಶ್ ಪೂಂಜರವರನ್ನು ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.

ಕಳೆದ ಹಲವಾರು ವರ್ಷಗಳಿಂದ ಶಿವಾಜಿ ಫ್ರೆಂಡ್ಸ್ ಕ್ಲಬ್ ಸಂಘಟನೆಯು ಸಮಾಜಮುಖಿ ಕೆಲಸ ಕಾರ್ಯಗಳನ್ನು ಹಮ್ಮಿಕೊಂಡು ಬರುತ್ತಿರುವ ಬಳಂಜದ ಶ್ರೇಷ್ಠ ಸಂಘಟನೆಯಲ್ಲಿ ಒಂದಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಾಜಿ ಪ್ರೆಂಡ್ಸ್ ಕ್ಲಬ್ ಅಧ್ಯಕ್ಷ ಜಗದೀಶ್ ರೈ ಹಾನಿಂಜ ವಹಿಸಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಅರ್ಪಿಸಿದರು.

ವೇದಿಕೆಯಲ್ಲಿ ಬೆಳ್ತಂಗಡಿಯ ಯುವ ಉದ್ಯಮಿ ರಾಕೇಶ್ ಹೆಗ್ಡೆ ಬಳಂಜ, ಹಿರಿಯರಾದ ಪ್ರಮೋದ್ ಕುಮಾರ್ ಜೈನ್, ಬಳಂಜ ಶಾಲಾ ಮುಖ್ಯೋಪಾಧ್ಯಾಯರಾದ ವಿಲ್ಪ್ರೇಡ್ ಪಿಂಟೋ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರತ್ನಾಕರ ಪೂಜಾರಿ,ಗ್ರಾ.ಪಂ ಸದಸ್ಯರಾದ ಯಶೋಧರ ಶೆಟ್ಟಿ, ಯಕ್ಷಿತಾ ದೇವಾಡಿಗ, ಆಶಾ ಕಾರ್ಯಕರ್ತೆ ಮಂಗಳಾ ದೇವಾಡಿಗ, ಕ್ಲಬ್ ಕಾರ್ಯದರ್ಶಿ ಮಾಧವ ದೇವಾಡಿಗ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಿವಾಜಿ ಫ್ರೆಂಡ್ಸ್ ಕ್ಲಬ್ ಪದಾಧಿಕಾರಿಗಳಾದ ಗುರುಪ್ರಸಾದ್ ಹೆಗ್ಡೆ, ಗಣೇಶ್ ದೇವಾಡಿಗ ಸಂಭ್ರಮ, ಸತೀಶ್ ಕೆ, ಈಶ್ವರ ಭಟ್, ರಾಘವೇಂದ್ರ ಭಟ್,ಯೋಗೀಶ್ ದೇವಾಡಿಗ, ಪ್ರಕಾಶ್ ದೇವಾಡಿಗ,ಯತೀಶ್ ದೇವಾಡಿಗ, ಡೀಕಯ್ಯ ಕುಲಾಲ್ ,ಆನಂದ ದೇವಾಡಿಗ ಶಾರಬೈಲು ಉಪಸ್ಥಿತರಿದ್ದರು.

ಶಿಕ್ಷಕ ಮಲ್ಲಿಕಾರ್ಜುನ ಸ್ವಾಗತಿಸಿದರು. ಹರೀಶ್ ದೇವಾಡಿಗ ಪ್ರಾಸ್ತಾವಿಕ ಮಾತನಾಡಿದರು. ಸಂತೋಷ್ ಕುಮಾರ್ ಕೆ ವಂದಿಸಿದರು.

Related posts

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವಿಭಾಗದ ಅಧಿಕಾರಿಗಳೊಂದಿಗೆ ಅದಾಲತ್ ಕಾರ್ಯಕ್ರಮ- ಸಾವ೯ಜನಿಕ ಅಹವಾಲು

Suddi Udaya

ಅರಸಿನಮಕ್ಕಿ ಬಂಟರ ಸಂಘದ ಕಛೇರಿ ಆವರಣದ ಗೇಟ್ ಉದ್ಘಾಟನೆ

Suddi Udaya

ಬುರುಡೆ ಚಿನ್ನಯ್ಯ ನನ್ನು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಲಿರುವ ಅಧಿಕಾರಿಗಳು: ಚಿನ್ನಯ್ಯ ಪರ ನಾಲ್ಕು ಮಂದಿ ವಕೀಲರ ಆಗಮನ

Suddi Udaya

ಕಳೆಂಜ ಲೋಲಾಕ್ಷರ ಮನೆಯನ್ನು ಅರಣ್ಯ ಇಲಾಖೆಯವರು ಕೆಡವಿದ ಪ್ರಕರಣ: ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಹರೀಶ್ ಪೂಂಜ, ಪ್ರತಾಪಸಿಂಹ ನಾಯಕ್ ವಿರುದ್ಧ ದೋಷರೋಪ ಪಟ್ಟಿಸಲ್ಲಿಕೆ

Suddi Udaya

ವೇಣೂರು: ಬಜಿರೆಯ ಡಾ. ಸುಕೇಶ್ ಕುಮಾರ್ ರವರಿಗೆ ಫ್ಯಾಕಲ್ಟಿ ಆಫ್ ಸೈನ್ಸ್ ನಲ್ಲಿ ಪಿಎಚ್.ಡಿ ಪದವಿ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!