April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಶ್ರೀ ಮಂ. ಅ.ಪ್ರೌ. ಶಾಲೆಯಲ್ಲಿ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಜ್ಞಾನೇಶ್, ಉಪ ನಾಯಕನಾಗಿ ಪ್ರಜ್ವಲ್

ಧರ್ಮಸ್ಥಳ : ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ, ಧರ್ಮಸ್ಥಳ ಇಲ್ಲಿನ 2023- 24 ನೇ ಸಾಲಿನ ವಿದ್ಯಾರ್ಥಿ ಸರಕಾರದ ರಚನೆಗಾಗಿ ಪ್ರಜಾಪ್ರಭುತ್ವದ ಚುನಾವಣಾ ಮಾದರಿಯಲ್ಲಿ ಚುನಾವಣೆಯನ್ನು ಎಲೆಕ್ಟ್ರಾನಿಕ್ ವೋಟಿಂಗ್ ಮಷೀನ್ ಮಾದರಿಯಲ್ಲಿ ನಡೆಸಲಾಯಿತು.

ಚುನಾವಣೆಯ ಅಧಿಸೂಚನೆಯ ಮೂಲಕ ಆರಂಭವಾದ ಪ್ರಕ್ರಿಯೆಯು ಠೇವಣಿಯೊಂದಿಗೆ ನಾಮಪತ್ರ ಸಲ್ಲಿಸುವಿಕೆ, ನಾಮಪತ್ರ ಪರಿಶೀಲನೆ, ನಾಮಪತ್ರ ಹಿಂತೆಗೆತ, ಚುನಾವಣಾ ಮತ್ತು ಪ್ರಚಾರ ನಡೆದು, ಚುನಾವಣಾ ದಿನ ಶಿಸ್ತು ಬದ್ಧರಾಗಿ ವಿದ್ಯಾರ್ಥಿಗಳು ತಮ್ಮ ಹಾಜರಾತಿಯ ಪ್ರಕಾರ, ತಮ್ಮ ಗುರುತನ್ನು ತಿಳಿಸಿ, ಸರತಿಯ ಸಾಲಿನಲ್ಲಿ ಬಂದು ಮತವನ್ನು ಚಲಾಯಿಸಿದರು.

ಸಾರ್ವತ್ರಿಕ ಚುನಾವಣೆ ಮಾದರಿಯಂತೆ ನಡೆದ ಈ ಚುನಾವಣೆಯಲ್ಲಿ ಎಲೆಕ್ಟ್ರಾನಿಕ್ ವೋಟಿಂಗ್ ಮಷೀನ್ ಮಾದರಿಯ ಆಪ್ ಮೂಲಕ ವಿದ್ಯಾರ್ಥಿಗಳು ಮತವನ್ನು ಚಲಾಯಿಸಿದರು.

ಶಾಲಾ ನಾಯಕನಾಗಿ ಜ್ಞಾನೇಶ್, ಶಾಲಾ ಉಪ ನಾಯಕನಾಗಿ ಪ್ರಜ್ವಲ್, ಶಾಲಾ ಉಪೋಪನಾಯಕನಾಗಿ ಪ್ರತೀಕ್ ಆಯ್ಕೆಯಾಗಿ, ಚುನಾವಣಾ ಫಲಿತಾಂಶದ ಘೋಷಣೆಯನ್ನು ಮಾಡಿ, ವಿಜೇತರಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕ ಪದ್ಮರಾಜ್ ಹಾಗೂ ಹಿರಿಯ ಶಿಕ್ಷಕ ಜಯರಾಮ ಮಯ್ಯ ಇವರ ಮಾರ್ಗದರ್ಶನದಲ್ಲಿ ಶಿಕ್ಷಕ ಯುವರಾಜ್ ಹಾಗೂ ವಿಕಾಸ್ ಆರಿಗಾ ಇವರ ನಿರ್ದೇಶನದಲ್ಲಿ ಎಲ್ಲಾ ಅಧ್ಯಾಪಕರ ಸಹಕಾರದೊಂದಿಗೆ ಮಾದರಿ ಚುನಾವಣಾ ಚಟುವಟಿಕೆಯು ಯಶಸ್ವಿಯಾಗಿ ಜರುಗಿತು.

Related posts

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ ಆರ್ ಟಿ ಸಿ ಬಸ್ ಸಂಚಾರ ಮುಂದೂಡಿಕೆ

Suddi Udaya

ಸರಕಾರವು ಇಲಾಖೆಯನ್ನು ರಾಜಕೀಯಕರಣಗೊಳಿಸುತ್ತಿದೆ: ರಾಜ್ಯದ ಭವಿಷ್ಯವನ್ನು ನಿರ್ಣಯಿಸುವ ಶಿಕ್ಷಣ ಕ್ಷೇತ್ರದಲ್ಲಿ, ಯಾರ ಅಭಿಪ್ರಾಯವನ್ನೂ ಪಡೆಯದೆ ಬದಲಾವಣೆ ಮಾಡುತ್ತಿರುವುದು ಆಘಾತಕಾರಿ: ವಿಧಾನಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌ ಆಕ್ಷೇಪ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ಕಾರ್ಯಕ್ರಮ

Suddi Udaya

ಜ.14: ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಯಕ್ಷೋತ್ಸವ : ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುಕ್ಕೇಡಿ: ಪಟಾಕಿ ಸ್ಫೋಟ ಪ್ರಕರಣ ಸ್ಥಳ ಮತ್ತು ಹಾನಿಗೊಳಗಾದ ಮನೆಗಳಿಗೆ ಬೆಳ್ತಂಗಡಿ ಧರ್ಮಾಧ್ಯಕ್ಷರ ಭೇಟಿ

Suddi Udaya

ಬಂದಾರು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!